Threat Audio: ಮಲ್ಲಿಕಾರ್ಜುನ ಖರ್ಗೆ ಕುಟುಂಬಸ್ಥರ ಹತ್ಯೆ ಆಡಿಯೋ ಬಗ್ಗೆ ತನಿಖೆ ನಡೆಸುತ್ತೇವೆಂದ ಸಿಎಂ
ಹುಬ್ಬಳ್ಳಿ, ಮೇ, 06: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕುಟುಂಬಸ್ಥರ ಹತ್ಯೆ ಆಡಿಯೋ ವಿಚಾರಕ್ಕೆ ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಆಡಿಯೋ ತಿರುಚಲಾಗಿದೆಯೇ ಎಂದು ನೋಡಬೇಕು. ಅಲ್ಲದೆ ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತೇವೆ ಎಂದರು.
ಮಲ್ಲಿಕಾರ್ಜುನ ಖರ್ಗೆ ಮತ್ತು ಕುಟುಂಬಸ್ಥರ ಹತ್ಯೆ ಆಡಿಯೋದ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಇನ್ನು ಬಿ.ಎಲ್.ಸಂತೋಷ್ ಇತ್ತೀಚೆಗಷ್ಟೇ ಲಿಂಗಾಯತ ಮತಗಳು ಬಿಜೆಪಿಗೆ ಬೇಡ ಎಂದು ಹೇಳಿದ್ದಾರೆ ಎನ್ನುವ ಸುದ್ದಿಯು ಎಲ್ಲೆಡೆ ಹರಡಿತ್ತು. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ ಅವರು, ಬಿ.ಎಲ್.ಸಂತೋಷ್ ಅವರು ಲಿಂಗಾಯತ ಮತಗಳು ಬಿಜೆಪಿಗೆ ಬೇಡ ಎಂದು ಹೇಳಿದ್ದಾರೆ ಅನ್ನುವ ಸುದ್ದಿ ಸುಳ್ಳು. ಅವರು ಹಾಗೆ ಹೇಳಿಲ್ಲ. ತಪ್ಪಾಗಿ ಭಾವಿಸಬೇಡಿ ಎಂದು ಹೇಳಿದರು.

ಅಲ್ಲದೆ ಮತ್ತೊಂದೆಡೆ ಇತ್ತೀಚೆಗಷ್ಟೇ ನಟ ಶಿವರಾಜ್ ಕುಮಾರ್ ಸಿದ್ದರಾಮಯ್ಯ ಪರ ಪ್ರಚಾರಕ್ಕಿಳಿದಿದ್ದರು. ಆಗಿನಿಂದ ಅವರನ್ನು ಕೆಲ ಬಿಜೆಪಿ ನಾಯಕರು ಟೀಕಿಸಿದ್ದರು. ಅಲ್ಲದೇ ಕೆಲ ಕಿಡಿಗೇಡಿಗಳು ಟ್ರೋಲ್ ಸಹ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಪ್ರಜಾಪ್ರಭುತ್ವದಲ್ಲಿ ನಟರು ಯಾವ ಪಕ್ಷದ ಪರವಾಗಿಯಾದರೂ ಪ್ರಚಾರ ಮಾಡಬಹುದು. ಇನ್ನು ಪ್ರತಾಪ್ ಸಿಂಹ ಮತ್ತು ಶಿವರಾಜ್ ಕುಮಾರ್ ಟೀಕೆ ಅವರಿಗೆ ಬಿಟ್ಟ ವಿಚಾರ. ಶಿವರಾಜ್ ಕುಮಾರ್ ಸಿದ್ದರಾಮಯ್ಯ ಪರ ಪ್ರಚಾರ ಮಾಡುವುದು ನನಗೇನು ಅಭ್ಯಂತರ ಇಲ್ಲ ಎಂದರು.
ಇನ್ನು ಸೋನಿಯಾ ಗಾಂಧಿ ಪ್ರಚಾರಕ್ಕೆ ಬರುತ್ತಿದ್ದಾರೆ. ಅದು ಅವರ ಪಕ್ಷದ ಪ್ರಚಾರವಾಗಿದೆ. ಹಾಗೆಯೇ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹಾವೇರಿಗೆ ಬರುತ್ತಿದ್ದಾರೆ. ಮೊದಲಿಗಿಂತಲೂ ಈಗ ಮೋದಿ ಅಲೆ ಜಾಸ್ತಿಯಾಗುತ್ತದೆ. ಆದ್ದರಿಂದ ಈ ಬಾರಿಯೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಗದ್ದುಗೆ ಏರಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications