ಲೋಕಸಭಾ ಚುನಾವಣೆ ಬಗ್ಗೆ ಚರ್ಚಿಸಲು ಖರ್ಗೆ ದೆಹಲಿಗೆ ಕರೆದಿದ್ದಾರೆ: ಸಂತೋಷ್ ಲಾಡ್
ಹುಬ್ಬಳ್ಳಿ, ಜುಲೈ, 31: ಖರ್ಗೆಯವರು ದೆಹಲಿಯಲ್ಲಿ ಕರೆದಿರುವ ಸಭೆಯಲ್ಲಿ ಭಾಗವಹಿಸುತ್ತೇನೆ. ಪಕ್ಷ ಸಂಘಟನೆ, ಪಾಲಿಸಿ ಮೇಕಿಂಗ್, ಲೋಕಸಭಾ ಚುನಾವಣೆ ಬಗ್ಗೆ ಚರ್ಚಿಸಲು ಕರೆದಿದ್ದಾರೆ. ಹಾಗಯೇ ಸಿದ್ದರಾಮಯ್ಯನವರು ಸಭೆಯಲ್ಲಿ ಯಾವುದೇ ಪತ್ರ ಹರಿದಿಲ್ಲ. ನಾನು ಸಭೆಯಲ್ಲಿ ಇದ್ದೆ, ಲೆಟರ್ ಹರಿದಿದ್ದಂತೂ ನಾನು ನೋಡಿಲ್ಲ ಎಂದರು.
ಅಲ್ಲದೆ ಗ್ರಹಲಕ್ಷ್ಮಿ ಯೋಜನೆಯ ಅರ್ಜಿ ಸ್ವೀಕರಿಸಲಾಗುತ್ತಿದೆ. ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಹಣ ನೀಡಲಾಗುವುದೆಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು.

ನಗರದಲ್ಲಿ ಮಾಧ್ಯಮದವರ ಜೊತೆ ಮಾತಾನಾಡಿದ ಅವರು, ಅಸಮಾಧಾನಗೊಂಡ ಶಾಸಕರ ಪತ್ರವನ್ನು ಸಿಎಂ ಹರಿದು ಹಾಕಿಲ್ಲ. ಈ ಕುರಿತು ಹೆಚ್ಚಿನ ನನಗೆ ಮಾಹಿತಿ ಇಲ್ಲ. ಅಟೋ ಚಾಲಕರಿಗೆ ಕಾರ್ಮಿಕ ಕಾರ್ಡ್ ನೀಡುವ ಕುರಿತು ಶೀಘ್ರದಲ್ಲೇ ಕ್ರಮ ತೆಗೆದುಕೊಳ್ಳುತ್ತೇನೆ. ನಮ್ಮ ಸರ್ಕಾರ ಬಡವರ ಹಿಂದುಳಿದ ವರ್ಗಗಳ ಪರವಾಗಿದೆ. ಅಸಂಘಟಿತ ವಲಯದ ಕಾರ್ಮಿಕರಿಗೆ ಕಾರ್ಮಿಕ ಕಾರ್ಡ್ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸಲಾಗುತ್ತದೆ ಎಂದು ಭರವಸೆ ನೀಡಿದರು.












Click it and Unblock the Notifications