ಖರ್ಗೆ ಸಿಎಂ ಆಗದಿರಲು ಕಾರಣ ಬಹಿರಂಗಗೊಳಿಸುತ್ತೇನೆ: ಕೆ.ಎಚ್.ಮುನಿಯಪ್ಪ
Recommended Video
ಹುಬ್ಬಳ್ಳಿ, ಮೇ 16: 'ಮಲ್ಲಿಕಾರ್ಜುನ ಖರ್ಗೆ ಅವರು ಎಂದೋ ಸಿಎಂ ಆಗಬೇಕಿತ್ತು' ಎಂಬ ಕುಮಾರಸ್ವಾಮಿ ಹೇಳಿಕೆ ಅವರ ನಿರೀಕ್ಷೆಯಂತೆ ಕಾಂಗ್ರೆಸ್ನಲ್ಲಿ ಭಿನ್ನಮತ ಹುಟ್ಟುಹಾಕಿದಂತಿದೆ.
ಖರ್ಗೆ ಅವರ ಬಹುವರ್ಷಗಳ ಸ್ನೇಹಿತ, ಅನುಯಾಯಿ, ದಲಿತ ಮುಖಂಡ ಕೆ.ಎಚ್.ಮುನಿಯಪ್ಪ ಅವರು ಸಹ ಖರ್ಗೆ ಸಿಎಂ ಸ್ಥಾನಕ್ಕೆ ಅರ್ಹರು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅದರ ಜೊತೆಗೆ ಖರ್ಗೆ ಸಿಎಂ ಏಕೆ ಆಗಲಿಲ್ಲ ಎಂಬ ಬಗ್ಗೆ ಸಹ ಕಾರಣ ಬಹಿರಂಗಗೊಳಿಸುತ್ತೇನೆ ಎಂದಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ, ಸಂಸದ ಕೆ.ಎಚ್.ಮುನಿಯಪ್ಪ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅರ್ಹತೆ ಇದ್ದರೂ ಸಹ ಏಕೆ ಸಿಎಂ ಆಗಲಿಲ್ಲ ಎಂಬ ಕಾರಣವನ್ನು ಉಪಚುನಾವಣೆ ಬಳಿಕ ಬಹಿರಂಗಗೊಳಿಸುತ್ತೇನೆ ಎಂದಿದ್ದಾರೆ.
ಸಿಎಂ ಹುದ್ದೆ ವಿಚಾರದಲ್ಲಿ ಖರ್ಗೆ ಅವರಿಗೆ ಅನ್ಯಾಯವಾಗಿದೆ ಎಂದ ಅವರು, ಕರ್ನಾಟಕ ಸಿಎಂ ಆಗಲು ಎಲ್ಲ ವಿಧದಲ್ಲೂ ಖರ್ಗೆ ಅವರು ಅರ್ಹರಾಗಿದ್ದರು ಎಂದು ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

ಬಿರುಸುಗೊಂಡ ಸಿಎಂ ಹುದ್ದೆ ಚರ್ಚೆ
ಮಲ್ಲಿಕಾರ್ಜುನ ಖರ್ಗೆ ಅವರು ಎಂದೋ ಸಿಎಂ ಆಗಬೇಕಿತ್ತು, ಅವರು ಸಿಎಂ ಸ್ಥಾನಕ್ಕೆ ಅರ್ಹರಿದ್ದರು ಎಂದು ಕುಮಾರಸ್ವಾಮಿ ಅವರು ಮುಂದಿನ ಸಿಎಂ ನಾನೇ ಎನ್ನುತ್ತಿದ್ದ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರೇವಣ್ಣ ಸಹ ಅರ್ಹರು ಎನ್ನುವ ಮೂಲಕ ಕುಮಾರಸ್ವಾಮಿ ಅವರನ್ನು ಸುಮ್ಮನಾಗಿಸಿದರು.

ಎಚ್ಡಿಕೆ ಹೇಳಿಕೆಗೆ ಖರ್ಗೆ ಪ್ರತಿಕ್ರಿಯೆ
ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಮಲ್ಲಿಕಾರ್ಜುನ ಖರ್ಗೆ, ಪದೇ-ಪದೇ ದಲಿತ ಸಿಎಂ ಎಂದು ಹೇಳಿ ಅವಮಾನ ಮಾಡಬೇಡಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದರು.

ಹಿಂದಿನಿಂದಲೂ ಸಿಎಂ ರೇಸಲ್ಲಿ ಖರ್ಗೆ ಹೆಸರು
ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬೇಕು ಎಂಬ ಕೂಗು ಆಗಾಗ್ಗೆ ಕೇಳಿ ಬರುತ್ತಲೇ ಇರುತ್ತದೆ. ಎಸ್.ಎಂ.ಕೃಷ್ಣ ಅವರು ಸಿಎಂ ಆದಾಗಿನಿಂದಲೂ ಮುಖ್ಯಮಂತ್ರಿ ಹುದ್ದೆ ರೇಸಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಹೆಸರು ಇದ್ದೇ ಇದೆ ಆದರೆ ಅವರು ಸಿಎಂ ಅವರಿಗೆ ಪ್ರತಿ ಬಾರಿಯೂ ಸಿಎಂ ಸ್ಥಾನ ತಪ್ಪಿದೆ.

ದಲಿತ ಸಿಎಂ ಚರ್ಚೆ ಮತ್ತೆ ಮುನ್ನೆಲೆಗೆ
ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ಅವರೇ ಒಮ್ಮೆ ನಾನು ಸಿಎಂ ಆಗುವುದನ್ನು ಮೂರು ಬಾರಿ ತಪ್ಪಿಸಲಾಗಿತ್ತು ಎಂದು ಹೇಳಿದ್ದರು. ದಲಿತ ಎಂಬ ಕಾರಣಕ್ಕೆ ಸಿಎಂ ಪಟ್ಟ ಸಿಗಲಿಲ್ಲವೆಂದು ಪರಮೇಶ್ವರ್ ಅವರು ಒಮ್ಮೆ ಹೇಳಿದ್ದರು. ಕುಮಾರಸ್ವಾಮಿ ಅವರು ಹೊಸದಾಗಿ ನೀಡಿರುವ ಹೇಳಿಕೆಯಿಂದಾಗಿ ಈಗ ಮತ್ತೆ ಚರ್ಚೆಗಳು ಪ್ರಾರಂಭವಾಗಿವೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications