ಬೇಡ ಬೇಡ ಎಂದರೂ ಪತ್ನಿಯ ಎದುರೇ ಹುಬ್ಬಳ್ಳಿಯಲ್ಲಿ ಕೆರೆಗೆ ಹಾರವಾದ ಪತಿ!
ಹುಬ್ಬಳ್ಳಿ, ಡಿ. 25: ಪತ್ನಿ ಹಿಂಬಾಲಿಸುತ್ತಿದ್ದರೂ, ಸಾಯುತ್ತೇನೆಂದು ಹೇಳುತ್ತಲೇ ಕೆರೆಯ ಕಡೆಗೆ ಓಡಿದ ವ್ಯಕ್ತಿಯೊಬ್ಬ ಪತ್ನಿ ಎದುರೇ ಕೆರೆಗೆ ಹಾರಿದ ಘಟನೆ ಹುಬ್ಬಳ್ಳಿಯ ಸಂತೋಷ್ ನಗರದ ಕೆರೆಯಲ್ಲಿ ನಡೆದಿದೆ. ಪತ್ನಿ ಎಷ್ಟೇ ಹೇಳುತ್ತಿದ್ದರೂ ತಾನು ಸಾಯುತ್ತೇನೆಂದು ಕೆರೆಯ ಕಡೆಗೆ ಓಡಿದ್ದ ರೋಹಿತ್ ಪಾಟೀಲ್ ಕೊನೆಗೆ ಶವವಾಗಿ ಪತ್ತೆಯಾಗಿದ್ದಾನೆ. ತನ್ನೆದುರಿಗೆ ನಡೆದ ಘಟನೆಯಿಂದ ಪತ್ನಿ ರೋಧಿಸುತ್ತ ಕೆರೆ ದಂಡೆಯಲ್ಲಿ ಕುಳಿತಿದ್ದ ದೃಶ್ಯ ಕರಳು ಹಿಂಡುವಂತಿತ್ತು. ಬೆಳ್ಳಂಬೆಳಗ್ಗೆ ನಡೆದ ಈ ದುರ್ಘಟನೆಯಿಂದ ಸ್ಥಳೀಯರು ದಿಗ್ಬ್ರಮೆಗೊಂಡಿದ್ದಾರೆ.
ತಾನು ಮಾಡುತ್ತಿದ್ದ ಕೆಲಸವನ್ನು ಬಿಟ್ಟು ನೇರವಾಗಿ ಕೆರೆಗೆ ಹಾರಿದ ರೋಹಿತ್ ಪಾಟೀಲ್, ಕೋಪದ ಕೈಯಲ್ಲಿ ಬುದ್ದಿ ಕೊಟ್ಟು ಜೀವ ಕಳೆದುಕೊಂಡಿದ್ದಾನೆ. ಹುಬ್ಬಳ್ಳಿಯ ಸಂತೋಷ್ ನಗರದಲ್ಲಿ ಮೃತನು ಟಿಫಿನ್ ಸೆಂಟರ್ ನಡೆಸುತ್ತಿದ್ದ, ಹೀಗಾಗಿ ಸ್ಥಳೀಯರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ. ಪತ್ನಿಯ ಎದುರೆ ಕೆರೆಗೆ ಹಾರಿದ ಅವನನ್ನು ಉಳಿಸಲು ಸ್ಥಳೀಯರು ತಕ್ಷಣವೇ ಸೀರೆಗಳನ್ನು ಕಟ್ಟಿ ಕೆರೆಯಲ್ಲಿ ಇಳಿದು ಹುಡುಕಾಟ ನಡೆಸಿದರು, ಆದರೆ ಯಾವುದೆ ಪ್ರಯೋಜನವಾಗಲಿಲ್ಲ.
ರೋಹಿತ್ ಪಾಟೀಲ್, ರಾತ್ರಿಯಿಂದಲೇ ಹೆಂಡತಿಯೊಂದಿಗೆ ಜಗಳ ಮಾಡಿಕೊಂಡಿದ್ದ. ಬೆಳಿಗ್ಗೆ ಎದ್ದ ತಕ್ಷಣವೇ ಮತ್ತೆ ರಂಪಾಟ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಮನೆಯಿಂದ ಹೋಗಿದ್ದಾನೆ. ತಕ್ಷಣವೇ ಹಿಂದೆಯೆ ಓಡಿ ಬಂದಿದ್ದ ಪತ್ನಿ, ಎಷ್ಟೇ ತಿಳಿಸಿ ಹೇಳಿದರೂ, ಆಕೆಯ ಎದುರೇ ಕೆರೆಗೆ ಹಾರಿದ್ದ.

ಕಣ್ಣೆದುರೆ ನಡೆದ ಈ ಘಟನೆ ನೋಡಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ಕೊಟ್ಟಿದ್ದರು. ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಬಂದು ರೋಹಿತ್ಗಾಗಿ ಪೊಲೀಸರು ಹುಡುಕಾಟ ನಡೆಸಿದರು. ಆದರೆ, ಒಂದು ಗಂಟೆಯ ಕಾರ್ಯಾಚರಣೆಯ ಬಳಿಕ ಆತನು ಶವವಾಗಿ ಪತ್ತೆಯಾಗಿದ್ದಾನೆ. ಕುಡಿತದ ಕಾರಣದಿಂದ ಪತ್ನಿ-ಪತಿ ನಡುವೆ ಆಗಾಗ ಜಗಳ ಆಗುತ್ತಿತ್ತು. ಅದು ಹೆಚ್ಚಾಗಿದ್ದರಿಂಲೇ ಈ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದರು.
Recommended Video
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications