ಮದ್ಯ ಸಿಗದ ಕಾರಣಕ್ಕೆ ಹುಬ್ಬಳ್ಳಿಯಲ್ಲಿ ವ್ಯಕ್ತಿ ಆತ್ಮಹತ್ಯೆ
ಹುಬ್ಬಳ್ಳಿ, ಮಾರ್ಚ್ 29: ವಿಶ್ವದಾದ್ಯಂತ ಕೊರೊನಾ ವೈರಸ್ ಭೀತಿ ಆವರಿಸಿದೆ. ಒಂದೆಡೆ ದಿನಬಳಕೆ, ಅಗತ್ಯ ವಸ್ತುಗಳು ಸರಿಯಾಗಿ ಸಿಗದೇ ಜನರ ಪರದಾಡುತ್ತಿದ್ದರೆ, ಮತ್ತೊಂದೆಡೆ ಸಾರಾಯಿ ಸಿಗುತ್ತಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಹೊಸೂರು ಗಣೇಶ ಪಾರ್ಕ್ ನಲ್ಲಿ ನಡೆದಿದೆ.
ಧಾರವಾಡ ಮೂಲದ ಉಮೇಶ ಹಡಪದ (46) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ನಾಗರಾಜ ರಟಗಲ್ ಅವರ ನಿರ್ಮಾಣ ಹಂತದ ಮನೆಯ ವಾಚ್ ಮನ್ ಆಗಿ ಉಮೇಶ್ ಕೆಲಸ ಮಾಡುತ್ತಿದ್ದ.
ಕಳೆದ ಐದು ದಿನದಿಂದ ಕುಡಿಯಲು ಸಾರಾಯಿ ಸಿಕ್ಕಿಲ್ಲ ಎಂಬ ಕಾರಣಕ್ಕೆ ಉಮೇಶ್ ನೇಣಿಗೆ ಶರಣಾಗಿದ್ದಾನೆ. ಕಳೆದ 15 ದಿನದ ಹಿಂದೆ ಕೆಲಸಕ್ಕೆ ಸೇರಿಕೊಂಡಿದ್ದ ಎನ್ನಲಾಗಿದೆ.
ಭಾರತ್ ಲಾಕ್ ಡೌನ್ ಆದ ಹಿನ್ನೆಲೆ ಸಾರಾಯಿ ಅಂಗಡಿ ಬಂದ್ ಆಗಿದ್ದವು. ಮೂರು ವರ್ಷದಿಂದ ಕುಟುಂಬ ವರ್ಗದವರಿಂದ ಉಮೇಶ ದೂರ ಉಳಿದಿದ್ದ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments
English summary
An incident of a man committing suicide due to lack of alcohol in Hubballi.
Story first published: Sunday, March 29, 2020, 13:13 [IST]