ಹುಬ್ಬಳ್ಳಿ ಜನರಿಗೆ ಹೆಚ್ಚಿದ ಅನಾರೋಗ್ಯದ ಭೀತಿ, ಕಿಮ್ಸ್ನಲ್ಲಿ ರೋಗಿಗಳ ಸಂಖ್ಯೆ ಹೆಚ್ಚಳ
ಹುಬ್ಬಳ್ಳಿ, ಡಿಸೆಂಬರ್, 15: ಮಾಂಡೋಸ್ ಚಂಡಮಾರುತ ಹಾಗೂ ಹವಾಮಾನ ವೈಪರಿತ್ಯದಿಂದ ಜನರಲ್ಲಿ ಅನಾರೋಗ್ಯದ ಸಮಸ್ಯೆ ಹೆಚ್ಚಾಗುತ್ತಿದೆ. ತಣ್ಣನೆಯ ಗಾಳಿ ಹಾಗೂ ಮಳೆಯ ವಾತಾವರಣ ಹೆಚ್ಚಾದ ಕಾರಣ ಜಿಲ್ಲೆಯ ಜನರು ಅನಾರೋಗ್ಯಕ್ಕೆ ಒಳಗಾಗುತ್ತಲೇ ಇದ್ದಾರೆ. ಜ್ವರದ ಜೊತೆಗೆ ನೆಗಡಿ, ಮೈಕೈ ನೋವು, ಎದೆ ನೋವು, ಸುಸ್ತಿನಿಂದ ನರಳುವವರ ಸಂಖ್ಯೆಯೂ ಹೆಚ್ಚಾಗಿದೆ. ಇದರ ಮಧ್ಯೆಯೇ ಕೀಟ ಜನ್ಯದಿಂದ ಬರುವ ಡೆಂಗ್ಯೂ, ಚಿಕನ್ ಗುನ್ಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಹಾವಳಿ ಹೆಚ್ಚಾಗಿ ಜಿಲ್ಲೆಯ ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಕೆಲವು ದಿನಗಳಿಂದ ಹವಾಮಾನ ವೈಪರಿತ್ಯಗಳಿಂದ ಸಾಕಷ್ಟು ತುಂಬಾ ಜನರು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಆರೋಗ್ಯ ಇಲಾಖೆಯೇ ನೀಡಿರುವ ಮಾಹಿತಿ ಅನ್ವಯ ಜಿಲ್ಲೆಯಲ್ಲಿ 2500ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಲಕ್ಷಣಗಳು ಪತ್ತೆಯಾಗಿದೆ. ಈ ಪೈಕಿ ತಪಾಸಣೆಗೆ ಒಳಪಡಿಸಿದಾಗ 247 ಜನರಲ್ಲಿ ಡೆಂಗ್ಯೂ ದೃಢಪಟ್ಟಿದೆ. ಅದರಲ್ಲೂ ನವೆಂಬರ್ ತಿಂಗಳಲ್ಲಿಯೇ 12 ಜನರಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಚಿಕನ್ ಗುನ್ಯಾ ಗುಣಲಕ್ಷಣ ಕಂಡುಬಂದ 1051 ಜನರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಈ ಪೈಕಿ 33 ಜನರಲ್ಲಿ ರೋಗ ದೃಢಪಟ್ಟಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಿಮ್ಸ್ನಲ್ಲಿ ರೋಗಿಗಳ ಸಂಖ್ಯೆ ಹೆಚ್ಚಳ
ಇನ್ನು ಧಾರವಾಡ ಗ್ರಾಮೀಣದಲ್ಲಿ 2, ಕುಂದಗೋಳ, ಧಾರವಾಡ ಶಹರ ವ್ಯಾಪ್ತಿಯಲ್ಲಿ ತಲಾ 1, ಹುಬ್ಬಳ್ಳಿ ಶಹರ ವ್ಯಾಪ್ತಿಯಲ್ಲಿ ನಾಲ್ವರಲ್ಲಿ ಮಲೇರಿಯಾ ಪತ್ತೆಯಾಗಿದ್ದು, ಇವರೆಲ್ಲರೂ ಜಿಲ್ಲೆಯ ಹೊರಗಿನವರಾಗಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಮಲೇರಿಯಾ ಶೂನ್ಯ ಸ್ಥಿತಿಯಲ್ಲಿದೆ. ಮತ್ತೊಂದೆಡೆ ಮೆದುಳು ಜ್ವರ ಲಕ್ಷಣ ಕಂಡುಬಂದ 15 ಜನರಲ್ಲಿ ತಪಾಸಣೆಗೆ ಒಳಪಡಿಸಲಾಗಿದೆ. ಚಿಕನ್ ಗುನ್ಯಾ ಶಹರ ಭಾಗಕ್ಕಿಂತ ಗ್ರಾಮೀಣ ಭಾಗದಲ್ಲಿ ಹೆಚ್ಚು ಹೊಡೆತ ನೀಡಿದೆ. ಹುಬ್ಬಳ್ಳಿ ಗ್ರಾಮೀಣದಲ್ಲಿ 5, ಕುಂದಗೋಳ, ನವಲಗುಂದದಲ್ಲಿ ತಲಾ 2, ಹುಬ್ಬಳ್ಳಿ ಶಹರ ವ್ಯಾಪ್ತಿಯಲ್ಲಿ ಒಬ್ಬರಿಗೆ ಚಿಕನ್ ಗುನ್ಯಾ ಪ್ರಕರಣ ಪತ್ತೆಯಾಗಿದೆ. ಈಗ ಚಂಡಮಾರುತ ಹಾಗೂ ಸಹಜವಾಗಿಯೇ ಹವಾಮಾನ ಸರಿ ಇರದ ಕಾರಣ ಕಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕಿಮ್ಸ್ ಆಸ್ಪತ್ರೆ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾಣಿ ಹೇಳುತ್ತಿದ್ದಾರೆ.

ಆರೋಗ್ಯದ ಬಗ್ಗೆ ಗಮನಹರಿಸಬೇಕು
ಒಟ್ಟಿನಲ್ಲಿ ಅವಳಿ ನಗರದಲ್ಲಿ ಸೊಳ್ಳೆಯ ಸಂತಾನೋತ್ಪತ್ತಿಯನ್ನು ನಿಯಂತ್ರಿಸಲು ಫಾಗಿಂಗ್ ಕಾರ್ಯಕ್ಕೆ ಆದ್ಯತೆ ನೀಡಿಲ್ಲ. ಹೀಗಾಗಿ ನಗರದಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ಪರಿಸರ ನೈರ್ಮಲ್ಯ ಕಾಪಾಡಿಕೊಳ್ಳುವುದರ ಜೊತೆಗೆ ಹವಾಮಾನ ವೈಪರಿತ್ಯದ ವಾತಾವರಣದಲ್ಲಿ ಆರೋಗ್ಯ ಕಾಳಜಿಗೆ ಆದ್ಯತೆ ನೀಡಬೇಕು ಎಂದು ಮಾಹಿತಿ ನೀಡಲಾಗಿದೆ.
-
ಮನೆ ಕಟ್ಟುವಾಗ ವಾಸ್ತು ಪಾಲಿಸದಿದ್ದರೆ ಏನಾಗುತ್ತದೆ? ಇಲ್ಲಿವೆ 5 ಪ್ರಮುಖ ನಿಯಮಗಳು -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ












Click it and Unblock the Notifications