Manmohan Singh: ಉತ್ತರ ಕರ್ನಾಟಕದಲ್ಲಿದ್ದಾರೆ ಮನಮೋಹನ್ ಸಿಂಗ್ ಸಂಬಂಧಿಕರು..
ಹುಬ್ಬಳ್ಳಿ, ಡಿಸೆಂಬರ್ 27: ದೇಶ ಕಂಡ ಅಪರೂಪದ ನಾಯಕ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ವಯೋಸಹಜ ಕಾಯಿಲೆಯಿಂದ ಗುರುವಾರ ರಾತ್ರಿ ನಿಧನರಾದರು. ಅಗಲಿದ ಮಾಜಿ ಪ್ರಧಾನಿಗೆ ಅನೇಕ ರಾಜಕೀಯ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗೆ ಬೆಂಗಳೂರಿನಲ್ಲಿ ಚಾಲನೆ ನೀಡಿದ್ದರು. ಅವರ ಕೊಡುಗೆ ಕರ್ನಾಟಕಕ್ಕೂ ಇದೆ. ಇದೀಗ ಮನಮೋಹನ್ ಸಿಂಗ್ ಅವರ ಸಂಬಂಧಿಕರು ಉತ್ತರ ಕರ್ನಾಟಕದವರು ಎಂಬ ಮಾಹಿತಿ ಗೊತ್ತಾಗಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನ ಸುದ್ದಿ ತಿಳಿದು, ಅವರು ಕುಟುಂಬಸ್ಥರು ಮಾತ್ರವಲ್ಲದೇ, ಅವರ ಆಪ್ತರು, ಕಾಂಗ್ರೆಸ್ ನಾಯಕರು ಸೇರಿದಂತೆ ದೇಶದ ಅನೇಕರು ಕಂಬನಿ ಮಿಡಿದಿದ್ದಾರೆ. ಆರ್ಥಿಕ ಸುಧಾರಣೆಗೆ ಹೆಸರಾಗಿದ್ದ ಮನಮೋಹನ್ ಸಿಂಗ್ ಸಂಬಂಧಿಕರು ಹುಬ್ಬಳ್ಳಿಯಲ್ಲಿ ವಾಸವಿದ್ದಾರೆ. ಮಾಜಿ ಪ್ರಧಾನಿಯ ನಿಧನದ ಸುದ್ದಿ ತಿಳಿದು ಅವರ ಕುಟುಂಬಕ್ಕೆ ಭರಸಿಡಿಲು ಬಡಿದಂತಾಗಿದೆ. ಹುಬ್ಬಳ್ಳಿ ಸಂಬಂಧಿಕರ ಮನೆಯಲ್ಲಿ ನೀರವ ಮೌನ ಆವರಿಸಿದೆ.

ಹುಬ್ಬಳ್ಳಿಯಲ್ಲಿ ಮನಮೋಹನ ಸಿಂಗ್ ಪತ್ನಿ ಅವರ ಸಂಬಂಧಿಕರು ವಾಸವಿದ್ದಾರೆ. ಇಲ್ಲಿನ ವಿದ್ಯಾನಗರದಲ್ಲಿ ಮನಮೋಹನ್ ಸಿಂಗ್ ಪತ್ನಿಯ ಸಹೋದರಿ ಹರ್ಪ್ರೀತ್ ಕೌರ್ ಕುಟುಂಬದವರು ವಾಸವಿದ್ದಾರೆ. ಹುಬ್ಬಳ್ಳಿಯ ಹರ್ನಾಮ್ ಸಿಂಗ್ ಕೊಹ್ಲಿ ಎಂಬುವರ ಜೊತೆ ಹರ್ಪ್ರೀತ್ ಕೌರ್ ವಿವಾಹವಾಗಿದ್ದರು. ಈ ಕಾರಣದಿಂದ ಮನಮೋಹನ್ ಸಿಂಗ್ ಅವರಿಗೂ ಉತ್ತರ ಕರ್ನಾಟಕಕ್ಕೂ ವರ್ಷಗಳಿಂದಲೂ ನಂಟಿದೆ.
ಮಾಜಿ ಪ್ರಧಾನಿ ಸಂಬಂಧಿಕರ ಕಾರ್ಯವೇನು?
ಮಾಜಿ ಪ್ರಧಾನಿ ಸಂಬಂಧಿಕರಾಗಿರುವ ಹರ್ನಾಮ್ ಸಿಂಗ್ ಕೊಹ್ಲಿ ಅವರು ನಗರದಲ್ಲಿ ಆಟೋಮೊಬೈಲ್ ಶಾಪ್ ನಡೆಸುತ್ತಿದ್ದಾರೆ. ಸದ್ಯ ಹರ್ಪ್ರೀತ್ ಕುಟುಂಬಸ್ಥರಿಗೆ ಸಂಬಂಧಿಸಿದ ದಾಬಾವೊಂದು ಹುಬ್ಬಳ್ಳಿಯ ಹೊರವಲಯದಲ್ಲಿದೆ. ಮನಮೋಹನ ಸಿಂಗ್ ಪತ್ನಿಯ ಸಹೋದರಿ ಹರ್ಪ್ರೀತ್ ಕೌರ್ 14 ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಈಗ ಕೌರ್ ಪತಿ ಹರ್ನಾಮ್ ಸಿಂಗ್ ಕೊಹ್ಲಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ಈ ಕುಟುಂಬಸ್ಥರಿಗೆ ಮನಮೋಹನ್ ಸಿಂಗ್ ಅವರ ನಿಧನ ಸುದ್ದಿ ತಿಳಿದು ಈ ಕುಟುಂಬಕ್ಕೆ ಬರ ಸಿಡಿಲು ಬಡಿದಂತಾಗಿದೆ. ಹುಬ್ಬಳ್ಳಿಯ ಮನೆ ಮಂದಿ ಕಂಬನಿ ಮಿಡಿದಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications