ಡಿಸೆಂಬರ್ 5ರಂದು ಧ್ರುವ ಜತ್ತಿ - ಅಮೋಘಾ ಶೆಟ್ಟರ್ ಮದುವೆ; ಎರಡು ರಾಜಕೀಯ ಕುಟುಂಬಗಳ ಸಮಾಗಮ
ರಾಜ್ಯ ರಾಜಕೀಯದಲ್ಲಿ ಪಕ್ಷಗಳನ್ನು ಮೀರಿ ಅನೇಕ ಕುಟುಂಬಗಳು ಸಂಬಂಧ ಬೆಳೆಸಿರುವ ಉದಾಹರಣೆಗಳಿವೆ. ಇದೀಗ ರಾಜ್ಯವನ್ನಾಳಿದ ಇಬ್ಬರು ಮುಖ್ಯಮಂತ್ರಿಗಳ ಕುಟುಂಬಗಳು ಕೌಟುಂಬಿಕ ನಂಟು ಬೆಳೆಸಲು ಸಜ್ಜಾಗಿವೆ. ಮಾಜಿ ಮುಖ್ಯಮಂತ್ರಿ ಬಿ.ಡಿ ಜತ್ತಿ ಮತ್ತು ಮಾಜಿ ಸಿಎಂ, ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಕುಟುಂಬ ಇದೀಗ ವೈವಾಹಿಕ ಸಂಬಂಧ ಬೆಳೆಸುತ್ತಿವೆ.
ರಾಷ್ಟಪತಿ ಹುದ್ದೆಯನ್ನು ಅಲಂಕರಿಸಿದ ಏಕೈಕ ಕನ್ನಡಿಗ ಬಿ.ಡಿ ಜತ್ತಿರವರ ಮರಿ ಮೊಮ್ಮಗ, ಕಾಂಗ್ರೆಸ್ ಪಕ್ಷದ ವಕ್ತಾರ ಧ್ರುವ ಜತ್ತಿಯವರೊಂದಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದರಾದ ಜಗದೀಶ ಶೆಟ್ಟರ್ ರವರ ತಮ್ಮನ ಮಗಳು ಅಮೋಘಾ ಪ್ರದೀಪ ಶೆಟ್ಟರ್ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಡಿಸೆಂಬರ್ 5 ರಂದು ಹುಬ್ಬಳ್ಳಿಯಲ್ಲಿ ಇವರಿಬ್ಬರ ವಿವಾಹ ಕಾರ್ಯಕ್ರಮ ನಡೆಯಲಿದೆ.

ಬಿ. ಡಿ ಜತ್ತಿರವರ ಕುಟುಂಬದಿಂದ 40 ವರ್ಷಗಳ ನಂತರ ರಾಜಕೀಯಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷದ ಯುವ ನಾಯಕ ಧ್ರುವ ಜತ್ತಿ, "ಜತ್ತಿ ಫೌಂಡೇಶನ್ " ಮುಖಾಂತರ ಅನೇಕ ಹಾಗೂ ವಿನೂತನ ಸಮಾಜ ಸೇವೆಯನ್ನು ಮಾಡುತ್ತಾ ತಮ್ಮ ಮುತ್ತಾತ ಹಾಕಿಕೊಟ್ಟ ಹಾದಿಯಲ್ಲಿ ಸಾಗುತ್ತಿದ್ದಾರೆ.
ಪ್ರದೀಪ್ ಶೆಟ್ಟರ್ ಎರಡು ಸಲಾ ಬಿಜೆಪಿಯಿಂದ ವಿಧಾನ ಪರಿಷತಗೆ ಆಯ್ಕೆಯಾಗಿದ್ದು ಇವರ ಹಿರಿಯ ಮಗಳು ಅಮೋಘಾ ಶೆಟ್ಟರ್. ಶೆಟ್ಟರ್ ಮತ್ತು ಜತ್ತಿ ಕುಟುಂಬ ಲಿಂಗಾಯತ ಸಮುದಾಯದಲ್ಲಿ ಪ್ರಮುಖ ರಾಜಕೀಯ ಕುಟುಂಬಗಳಾಗಿ ಗುರುತಿಸಿಕೊಂಡಿವೆ.
ಜಗದೀಶ ಶೆಟ್ಟರ್ ರವರು ತಾವು ಕಾಂಗ್ರೆಸ್ ಸೇರ್ಪಡೆಯಾದಾಗ ಧ್ರುವ ಜತ್ತಿರವರನ್ನು ಹುಬ್ಬಳ್ಳಿ ಯಲ್ಲಿ ಭೇಟಿಯಾಗಿದ್ದು, ನಂತರ ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ಗೆ ಆಯ್ಕೆಯಾದ ಕೆಲವೇ ತಿಂಗಳಲ್ಲಿ ಎರಡು ಕುಟುಂಬಗಳು ವೈವಾಹಿಕ ಸಂಬಂಧವನ್ನು ಬೆಳೆಸಿಕೊಂಡಿವೆ.
ಈಗ ಜಗದೀಶ ಶೆಟ್ಟರ್ ರವರು ಬಿಜೆಪಿ ಸಂಸದರು ಹಾಗೂ ಅವರ ಅಳಿಯ ಆಗುವ ಧ್ರುವ ಜತ್ತಿ ಕಾಂಗ್ರೆಸ್ ಪಕ್ಷದ ದೇಶದ ಯುವ ವಕ್ತಾರರಾಗಿದ್ದಾರೆ. ರಾಜಕೀಯವನ್ನು ಬದಿಗಿಟ್ಟು ಎರಡೂ ಕುಟುಂಬಗಳು ಸಂಬಂಧ ಬೆಳೆಸಿವೆ. ಡಿಸೆಂಬರ್ 5ರಂದು ನಡೆಯಲಿರುವ ಈ ಮದುವೆ ಕಾರ್ಯಕ್ರಮದಲ್ಲಿ ರಾಜ್ಯದ ಅನೇಕ ರಾಜಕೀಯ ನಾಯಕರು ಭಾಗವಹಿಸುವ ಸಾಧ್ಯತೆ ಇದೆ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications