ಹಿಂದೂಗಳ ಹತ್ಯೆಯಾದರೆ ಬಿಜೆಪಿಗೆ ಹಬ್ಬ- ಸಚಿವ ಸಂತೋಷ್ ಲಾಡ್ ಹೀಗಂದಿದ್ಯಾಕೆ?
ಹುಬ್ಬಳ್ಳಿ, ಏಪ್ರಿಲ್ 23: ರಾಜ್ಯದಲ್ಲಿ ಅನೇಕ ಹಿಂದೂ ಮಹಿಳೆಯರ ಹತ್ಯೆ ಹಾಗೂ ದೌರ್ಜನ್ಯ ನಡೆದರೆ ಪ್ರತಿಭಟನೆ ನಡೆಸದ ಬಿಜೆಪಿ, ಹುಬ್ಬಳ್ಳಿಯಲ್ಲಿ ಮುಸ್ಲಿಂ ಯುವಕ ಹಿಂದೂ ವಿದ್ಯಾರ್ಥಿನಿಯನ್ನು ಕೊಲೆ ಮಾಡಿರುವುದರಿಂದ ಪ್ರಚಾರ ಪಡೆಯುತ್ತಿದೆ. ಬಿಜೆಪಿಗೆ ಹಿಂದೂಗಳ ಹತ್ಯೆಯಾದರೆ ಹಬ್ಬ ಎಂದು ಸಚಿವ ಸಂತೋಷ್ ಲಾಡ್ ಆರೋಪಿಸಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಸಂತೋಷ್ ಲಾಡ್, ಹತ್ಯೆಗೀಡಾದ ನೇಹಾ ಹಿರೇಮಠ ಮನೆಯನ್ನು ಬಿಜೆಪಿಯವರು ಪ್ರಚಾರ ತಾಣವನ್ನಾಗಿಸಿಕೊಂಡಿದ್ದಾರೆ. ಬಿಜೆಪಿ ನಾಯಕರು ನಿತ್ಯ ಅವರ ಮನೆಗೆ ಭೇಟಿ ನೀಡಿ, ಕುಟುಂಬದವರ ಮನಸ್ಸಿಗೆ ನೋವು ಮಾಡುತ್ತಿದ್ದಾರೆ. ಇದರಿಂದ ಕಾಂಗ್ರೆಸ್ಗೆ ಯಾವುದೇ ರೀತಿಯ ಹಿನ್ನಡೆಯಾಗುವುದಿಲ್ಲ ಎಂದರು.

ಕೊಲೆಗೀಡಾದ ವಿದ್ಯಾರ್ಥಿನಿ ನೇಹಾಳ ತಂದೆ ನಿರಂಜನ ಹಿರೇಮಠ ನನ್ನ ಸ್ನೇಹಿತ. ಬಿಜೆಪಿಯವರು ನಿಮ್ಮನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂಬ ನೈಜತೆ ನಿರಂಜನ ಅವರಿಗೆ ತಿಳಿಯಬೇಕು. ಆ ಕುಟುಂಬದ ದುಃಖ ನಮಗೆ ಅರ್ಥವಾಗುತ್ತದೆ. ಕೈ ಮುಗಿದು ಕೇಳುತ್ತೇನೆ ಪಕ್ಷದ ಬಗ್ಗೆ ಮಾಡನಾಡುವುದನ್ನು ಬಿಡಬೇಕು ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮೊದಲ ಬಾರಿಗೆ ಶಾಸಕರಾದವರು. ಯಡಿಯೂರಪ್ಪ ಅವರ ಹೆಸರು ಇಲ್ಲದಿದ್ದರೆ ವಿಜಯೇಂದ್ರ ಶೂನ್ಯ. ಅಂತವರು ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಹಗುರವಾಗಿ ಮಾತನಾಡಿದ್ದು ಸರಿಯಲ್ಲ. ವಿಜಯೇಂದ್ರ ಅವರು ತಕ್ಷಣ ಮುಖ್ಯಮಂತ್ರಿಯವರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ನೇಹಾ ಹತ್ಯೆ ಪ್ರಕರಣ: ಹುಬ್ಬಳ್ಳಿಯಲ್ಲಿಯೇ ವಾಸ್ತವ್ಯ ಹೂಡಿದ ಸಿಐಡಿ ತಂಡ
ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ್ದು, ಎಸ್ಪಿ ದರ್ಜೆಯ ಅಧಿಕಾರಿ ನೇತೃತ್ವದ ತಂಡ ಸೋಮವಾರ ತಡರಾತ್ರಿ ಹುಬ್ಬಳ್ಳಿಗೆ ಬಂದು ವಾಸ್ತವ್ಯ ಹೂಡಿದೆ. ತಂಡದಲ್ಲಿ ಡಿವೈಎಸ್ಪಿ ದರ್ಜೆ ಅಧಿಕಾರಿ ಸೇರಿ ಎಂಟು ಮಂದಿ ಸಿಬ್ಬಂದಿ ಇರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಸಿಐಡಿ ಅಧಿಕಾರಿಗಳ ತಂಡ ಇಂದು ಮಂಗಳವಾರ ಬೆಳಗ್ಗೆ ಕೊಲೆ ನಡೆದ ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸಲಿದೆ. ನಂತರ ವಿದ್ಯಾನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ, ಈವರೆಗೆ ಕೈಗೊಂಡ ತನಿಖೆಯ ಮಾಹಿತಿ ಪಡೆದು, ತನಿಖಾಧಿಕಾರಿಯಿಂದ ಕಡತ ಹಸ್ತಾಂತರಿಸಿಕೊಳ್ಳುವ ಸಾಧ್ಯತೆಯಿದೆ. ನೇಹಾ ಪಾಲಕರ ಹೇಳಿಕೆಯನ್ನು ಸಹ ಪಡೆದು ತನಿಖೆ ಮುಂದುವರಿಸಲಿದೆ ಎಂದು ತಿಳಿದು ಬಂದಿದೆ.
ಈಗಾಗಲೇ ಸ್ಥಳೀಯ ಪೊಲೀಸರು ಕೃತ್ಯ ನಡೆದ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿ, ಕೃತ್ಯಕ್ಕೆ ಬಳಸಿದ ಚಾಕು, ಕೊಲೆಯಾದ ನೇಹಾಳ ಮತ್ತು ಆರೋಪಿ ಫಯಾಜ್ನ ರಕ್ತದ ಮಾದರಿ, ಬಟ್ಟೆಗಳನ್ನು ಸಂಗ್ರಹಿಸಿ, ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಅಲ್ಲದೇ, ಕೃತ್ಯ ನಡೆದ ಸ್ಥಳದಲ್ಲಿದ್ದ, ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಸಂಗ್ರಹಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ












Click it and Unblock the Notifications