ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಸೇರಿ ಮೂವರ ವಿರುದ್ಧ ಕೇಸ್
ಹುಬ್ಬಳ್ಳಿ, ಜೂನ್ 10: ಬೆದರಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಿಜೆಪಿ ವಿಧಾನ ಪರಿಷತ್ ಉಪನಾಯಕ ಅರವಿಂದ್ ಬೆಲ್ಲದ್ ಅವರು ಸೇರಿದಂತೆ ಮೂವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೌದು, ಬಿಜೆಪಿ ಶಾಸಕರು ಸೇರಿದಂತೆ ಮೂವರ ವಿರುದ್ಧ ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಮೂಲಗಳ ಪ್ರಕಾರ ಜೀವ ಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಶಾಸಕ ಅರವಿಂದ್ ಬೆಲ್ಲದ್, ಉಪ ಮೇಯರ್ ಸತೀಶ ಹಾನಗಲ್ ಮತ್ತು ಲಕ್ಷ್ಮಣ ಭೋವಿ ವಿರುದ್ಧ ಪ್ರಕರಣ ದಾಖಲು . ಇವರು ಕೊಳಚೆ ನಿರ್ಮೂಲನ ಮಂಡಳಿ ನೀಡಿದ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಅವರು ಜೀವ ಬೆದರಿಕೆ ಹಾಕಿದ್ದರು ಎಂಬ ಆರೋಪ ಕೇಳಿ ಬಂದಿದೆ.
ಕೊಳಚೆ ನಿರ್ಮೂಲನ ಮಂಡಳಿ ಹಕ್ಕುಪತ್ರ ವಿತರಣೆ
ಕಳೆದ ವರ್ಷ 2023ರ ಡಿಸೆಂಬರ್ 30 ರಂದು ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಕುಂದು ಕೊರತೆ ಸಭೆ ನಡೆದಿತ್ತು. ಇಲ್ಲಿನ ಆನಂದ ನಗರದ ಕೃಷ್ಣಾ ಕಾಲೊನಿಗೆ ಸಂಬಂಧಪಟ್ಟ ಖಾಲಿ ಜಾಗವನ್ನು ಕೊಳಚೆ ನಿರ್ಮೂಲನ ಮಂಡಳಿ ಅಕ್ರಮವಾಗಿ ಹಕ್ಕುಪತ್ರ ವಿತರಿಸಿದೆ ಎಂಬ ದೂರು ಕೇಳಿ ಬಂದಿತ್ತು.
ಪರಶುರಾಮ ದಾವಣಗೆರೆ ಎಂಬುವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹಿಂಪಡೆಯುವಂತೆ ಬೆದರಿಕೆ ಆರೋಪ ಮಾಡಲಾಗಿತ್ತು. ಆಗ ಲಕ್ಷ್ಮಣ ಭೋವಿ ಅವಾಚ್ಯ ಪದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿ ದೂರು ನೀಡಲಾಗಿದೆ.

ಶಾಸಕರ ಕುಮ್ಮಕ್ಕಿನಿಂದ ಜೀವ ಬೆದರಿಕೆ, ಕ್ರಮಕ್ಕೆ ಆಗ್ರಹ
ಇನ್ನೂ ಉಪ ಮೇಯರ್ ಮೇಯರ್ ಸತೀಶ್ ಹಾನಗಲ್ ಹಾಗೂ ಶಾಸಕ ಅರವಿಂದ ಬೆಲ್ಲದ್ ಅವರು ಕುಮ್ಮಕ್ಕಿನಿಂದಲೇ ಲಕ್ಷ್ಮಣ ಭೋವಿ ಅವರಿಗೂ ಜೀವ ಬೆದರಿಕೆ ಹಾಕಿದ್ದಾರೆಂದು. ಇವರಿಗೆ ಅಧಿಕಾರದ ಮದ ಏರಿಕೆ ಎಂದು ಆರೋಪಲಾಗಿತ್ತು. ಈ ಆರೋಪಿತರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪರಶುರಾಮ ಆಗ್ರಹಿಸಿದ್ದರು.
ಅಷ್ಟೇ ಅಲ್ಲದೇ ಈ ಮೂವರ ವಿರುದ್ಧ 4ನೇ ಎಸಿಜಿ ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳುವಂತೆ ನ್ಯಾಯಾಲಯ ಸೂಚನೆ ನೀಡದ ಬೆನ್ನಲ್ಲೆ ಹಳೇ ಹುಬ್ಬಳ್ಳಿ ಪೊಲೀಸರು ಶಾಸಕರು ಸೇರಿದಂತೆ ಮೂವರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಸದ್ಯ ತನಿಖೆ ನಡೆದು ಪ್ರಕರಣದಲ್ಲಿನ ಆರೋಪಗಳು, ಸತ್ಯತೆಗಳ ಬಗ್ಗೆ ತಿಳಿದು ಬರಬೇಕಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications