ಧಾರವಾಡ ಜಿಲ್ಲಾ ಕಾಂಗ್ರೆಸ್ ವಕ್ತಾರ ವಿರುದ್ಧ ಮಾನನಷ್ಟ ಮೊಕದ್ದಮೆ
ಹುಬ್ಬಳ್ಳಿ, ಜನವರಿ, 11 : ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಹಾಗೂ ಧಾರವಾಡ ಜಿಲ್ಲಾ ಕಾಂಗ್ರೆಸ್ ವಕ್ತಾರ ವೇದವ್ಯಾಸ ಕೌಲಗಿ ವಿರುದ್ಧ ಧಾರವಾಡದ 2ನೇ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಮಾನ ಹಾನಿ ಪ್ರಕರಣ ಮಂಗಳವಾರ ದಾಖಲಾಗಿದೆ.
ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರ ಸಹೋದರ ಪ್ರದೀಪ ಶೆಟ್ಟರ್ ಮಾನಹಾನಿ ಪ್ರಕರಣ ದಾಖಲಿಸಿದ್ದಾರೆ. ಪ್ರದೀಪ್ ಶೆಟ್ಟರ್ ಕ್ರಿಕೆಟ್ ಬೆಟ್ಟಿಂಗ್ ಕಿಂಗ್ ಪಿನ್ ಎಂದು ಕೌಲಗಿ ಅವರು ಪತ್ರಿಕಾ ಹೇಳಿಕೆ ನೀಡಿದ್ದರು.
ಇದರಿಂದ ಪ್ರದೀಪ ಶೆಟ್ಟರ್ ಮಂಗಳವಾರ ವಕೀಲರೊಂದಿಗೆ ನ್ಯಾಯಾಲಯಕ್ಕೆ ಆಗಮಿಸಿ ತಮ್ಮ ವಿರುದ್ಧ ಉದ್ದೇಶಪೂರ್ವಕವಾಗಿ ಅವಮಾನಿಸುವ ಮತ್ತು ರಾಜಕೀಯ ಪ್ರೇರಿತವಾಗಿ ಕೌಲಗಿ ಹೇಳಿಕೆ ನೀಡಿದ್ದಾರೆ ಎಂದು ದೂರು ದಾಖಲಿಸಿದರು.

ಹುಬ್ಬಳ್ಳಿಯಲ್ಲಿ ಹಿಂದೆ ಕ್ರಿಕೆಟ್ ಬೆಟ್ಟಿಂಗ್ ಕಿಂಗ್ ಪಿನ್ ರಾಗಿದ್ದ ಪ್ರದೀಶ ಶೆಟ್ಟರ್ ಅಧಿವೇಶನದಲ್ಲಿ ಕ್ಲಬ್ ವಿಚಾರ ಪ್ರಸ್ತಾಪಿಸಿರುವ ಶೆಟ್ಟರ್ ಪ್ರಸ್ತಾಪ ಭೂತದ ಬಾಯಲ್ಲಿ ಭಗವದ್ಗೀತೆಯಂತಿದೆ ಎಂದು ಕೌಲಗಿ ಹೇಳಿಕೆ ನೀಡಿದ್ದರು.
ವಿಧಾನ ಮಂಡಲದಲ್ಲಿ ಪ್ರಸ್ತಾಪಿಸಿದ ವಿಷಯವನ್ನು ಟೀಕಿಸಿಸುವುದು ಅವಮಾನಗೊಳಿಸುವುದು ಅಪರಾಧವಾಗಿದೆ. ದುರುದ್ದೇಶಪೂರ್ವಕ ಮತ್ತು ಆಧಾರ ರಹಿತರಾಗಿ ಕೌಲಗಿ ಹೇಳಿಕೆ ನೀಡಿರುವುದು ತಮಗೆ ಬೇಸರ ತರಿಸಿದೆ. ಆದ್ದರಿಂದ ಕಾನೂನು ಹೋರಾಟ ಮಾಡುತ್ತಿದ್ದೇನೆ ಎಂದು
ನೋಟೀಸ್ ಬಂದಿಲ್ಲ: ಮಾನಹಾನಿ ಕೇಸ್ ದಾಖಲಾಗಿರುವ ಕುರಿತು ವೇದವ್ಯಾಸ ಕೌಲಗಿ ಒನ್ ಇಂಡಿಯಾದೊಂದಿಗೆ ಮಾತನಾಡಿ, ಪಕ್ಷದ ಹಿರಿಯರಿಗೆ ಮತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಈ ವಿಷಯ ತಿಳಿಸುತ್ತೇನೆ. ಮಾನ ಹಾನಿ ಪ್ರಕರಣದ ಕುರಿತು ನನಗೆ ಯಾವುದೇ ಮಾಹಿತಿ ಮತ್ತು ನೋಟೀಸ್ ಬಂದಿಲ್ಲ ಸ್ಪಷ್ಟಪಡಿಸಿದರು.
-
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ












Click it and Unblock the Notifications