ಲೋಕಸಭಾ ಚುನಾವಣೆಗೆ ಮೋದಿ ರಣಕಹಳೆ ಹುಬ್ಬಳ್ಳಿಯಿಂದ ಆರಂಭ
Recommended Video
ಹುಬ್ಬಳ್ಳಿ, ಫೆಬ್ರವರಿ 9: ಮುಂಬರುವ ಲೋಕಸಭಾ ಚುನಾವಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ(ಫೆ.10) ರಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.
ಭಾನುವಾರ ಸಂಜೆ 4 ಗಂಟೆಗೆ ಹುಬ್ಬಳ್ಳಿಯ ಗಬ್ಬೂರು ಕ್ರಾಸ್ನಲ್ಲಿ ಕೆಎಲ್ ಇಯ ಮೈದಾನದಲ್ಲಿ ಸಮಾವೇಶ ಜರುಗಲಿದ್ದು, ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ, ಬೆಳಗಾವಿ, ಚಿಕ್ಕೋಡಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಸುಮಾರು 3 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆ ಇದೆ.
ಮೋದಿಗೆ ಕಪ್ಪುಬಾವುಟದ ಸ್ವಾಗತ ನೀಡಿದ ಅಸ್ಸಾಂ ವಿದ್ಯಾರ್ಥಿಗಳು
ಇದೇ ವೇಳೆ ಪ್ರಧಾನಿಯವರು ಈ ಹಿಂದೆ ಘೋಷಣೆ ಮಾಡಿದ್ದ ಕೆಲವು ಯೋಜನೆಗಳಿಗೆ ನಾಳೆ ಅಧಿಕೃತವಾಗಿ ಚಾಲನೆ ನೀಡಿದ ನಂತರ ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಲೋಕಸಭೆ ಚುನಾವಣೆಗೆ ಈ ಬಾರಿ ರಾಜ್ಯದಿಂದ ಕನಿಷ್ಠ 15 ರಿಂದ 20 ಕ್ಷೇತ್ರಗಳನ್ನು ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ನಾಳೆಯಿಂದಲೇ ಲೋಕಸಭಾ ಮಹಾಸಮರದ ಪ್ರಚಾರಕ್ಕೆ ಅಧಿಕೃತ ಚಾಲನೆ ದೊರೆಯಲಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಅಸ್ತಿತ್ವದಲ್ಲಿರುವುದರಿಂದ ಹೇಗಾದರೂ ಮಾಡಿ ದೋಸ್ತಿ ಪಕ್ಷಕ್ಕಿಂತ ಹೆಚ್ಚಿನ ಸ್ಥಾನ ಗಳಿಸಲು ಈಗಿನಿಂದಲೇ ಚುನಾವಣಾ ಕಾರ್ಯತಂತ್ರವನ್ನು ರೂಪಿಸುವಲ್ಲಿ ಮಗ್ನವಾಗಿದೆ.
ಬಹುದಿನಗಳ ನಂತರ ಪಕ್ಷದ ಸಮಾವೇಶದಲ್ಲಿ ನರೇಂದ್ರ ಮೋದಿ ಅವರು ಭಾಗವಹಿಸುತ್ತಿರುವುದರಿಂದ ಬಿಜೆಪಿ, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಕಾರ್ಯಕರ್ತರ ಹುಮ್ಮಸ್ಸನ್ನು ಇಮ್ಮಡಿಗೊಳಿಸಲಿದೆ. ಇದೀಗ ನಾಳೆ ಮೋದಿ ಮತ್ತೆ ಕರ್ನಾಟಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಸಾಧ್ಯತೆ ಇದೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ರಮೇಶ್ ಜಿಗಜಿಣಗಿ, ಅನಂತಕುಮಾರ್ ಹೆಗಡೆ, ಸಂಸದರು ಪಾಲ್ಗೊಳ್ಳಲಿದ್ದಾರೆ.