ಪ್ರಯಾಣಿಕರ ಹೆಚ್ಚಳಕ್ಕೆ ವಾಯವ್ಯ ಸಾರಿಗೆ ಮಾಡಿದೆ ಹೊಸ ಯತ್ನ

ಹುಬ್ಬಳ್ಳಿ , ಸೆಪ್ಟೆಂಬರ್ 14: ಲಾಕ್‌ಡೌನ್ ಸಂದರ್ಭ ಹಾಗೂ ಲಾಕ್ ಡೌನ್ ತೆರವಾದ ನಂತರವೂ ಸಾರಿಗೆ ಇಲಾಖೆ ನಷ್ಟ ಅನುಭವಿಸುತ್ತಲೇ ಇದೆ. ಇದೀಗ ಈ ನಷ್ಟವನ್ನು ಭರಿಸಲು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮುಂದಾಗಿದೆ.

ಸಾರಿಗೆ ಸಂಸ್ಥೆ ವ್ಯಾಪ್ತಿಯಲ್ಲಿ ಬರುವ ಧಾರವಾಡ, ಗದಗ, ಹಾವೇರಿ, ಉತ್ತರಕನ್ನಡ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಪಾಸ್ ನೀಡಿ ನಷ್ಟ ಕಡಿಮೆ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಈ ಪಾಸ್‌ಗಳನ್ನು ಪಡೆದರೆ ಪ್ರಯಾಣಿಕರಿಗೆ ಹಣ ಉಳಿತಾಯವಾಗುತ್ತದೆ. ಪಟ್ಟಣಕ್ಕೆ ಹೋಗಿ ಬರುವ ಉದ್ಯೋಗಿಗಳಿಗೆ ರಿಯಾಯಿತಿ ದರದಲ್ಲಿ ಪಾಸ್‌ನಿಂದ ಹೆಚ್ಚಿನ ಲಾಭದ ಜೊತೆಗೆ ನಗದು ರಹಿತ ವ್ಯವಹಾರ ಮಾಡಿ ಕೊರೊನಾ ಮುಂಜಾಗ್ರತಾ ಕ್ರಮ ಕೈಗೊಂಡಂತೆ ಆಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಲಾಕ್ ಡೌನ್ ಗೂ ಮೊದಲು ಆರು ಜಿಲ್ಲೆಗಳ ವ್ಯಾಪ್ತಿಯಲ್ಲಿ 4,670 ಬಸ್ ಸಂಚರಿಸುತ್ತಿದ್ದವು. ಈಗ 3,100 ಬಸ್‌ಗಳ ಸಂಚಾರವಿದೆ. ಸಂಸ್ಥೆಗೆ ನಿತ್ಯ 2.2 ಕೋಟಿ ಆದಾಯ ಬರುತ್ತಿದೆ.

Hubballi: Monthly Pass System Started Under North West Transportation

ಈ ರೀತಿ ನಿತ್ಯ ಹಳ್ಳಿಗಳು ಮತ್ತು ಬೇರೆ ಬೇರೆ ಪ್ರದೇಶಗಳಿಂದ ಪಟ್ಟಣಕ್ಕೆ ಉದ್ಯೋಗಕ್ಕೆ ಬರುವವರಿಗೆ ಪಾಸ್​​ಗಳಲ್ಲಿ ವಿನಾಯಿತಿ ನೀಡಿರುವುದಕ್ಕೆ ಸಾರ್ವಜನಿಕರಿಗೆ ಬಹಳಷ್ಟು ಅನುಕೂಲವಾಗುತ್ತಿದೆ. ಅಲ್ಲದೇ ತಿಂಗಳ ಪಾಸಿನಿಂದ ಪ್ರಯಾಣಿಕರಿಗೆ ಹಣವೂ ಉಳಿಯುತ್ತದೆ. ಇದರಿಂದ ಪ್ರಯಾಣಿಕರಲ್ಲಿ ಸಂತಸ ವ್ಯಕ್ತವಾಗಿದೆ.

Recommended Video

      India-China ಸಂಘರ್ಷದ ಬಗ್ಗೆ ಮಾತನಾಡಲಿದ್ದಾರೆ Rajnath Singh | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+