ಬೆಳಗಾವಿ: ಮದುವೆ ಮನೆಯಲ್ಲಿ ಊಟ ಸೇವಿಸಿ 100ಕ್ಕೂ ಹೆಚ್ಚು ಜನ ಅಸ್ವಸ್ಥ, ದೃಷ್ಟಿ ಕಳೆದುಕೊಂಡ ಓರ್ವ ವ್ಯಕ್ತಿ
ಬೆಳಗಾವಿ, ಆಗಸ್ಟ್, 30: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೆಕೋಡಿ ಗ್ರಾಮದಲ್ಲಿ ಮದುವೆ ಮನೆಯಲ್ಲಿ ಊಟ ಮಾಡಿ ನೂರಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಓರ್ವ ವ್ಯಕ್ತಿ ದೃಷ್ಟಿ ಕಳೆದುಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬಾಬಾ ಸಾಹೇಬ್ ಬೇಗ್ (37) ದೃಷ್ಟಿ ಕಳೆದುಕೊಂಡವರು. ಸೋಮವಾರ ಊಟ ಮಾಡಿ ಮನೆಗೆ ವಾಪಾಸ್ ಆದ ಬಳಿಕ ವಾಂತಿ ಭೇದಿ ಕಾಣಿಸಿಕೊಂಡಿತ್ತು. ನಂತರ ಏಕಾಏಕಿ ದೃಷ್ಟಿಯೇ ಕಾಣದೆ ಕಂಗಾಲಾದ ಬಾಬಾಸಾಹೇಬ ಅವರನ್ನು ಆರಂಭದಲ್ಲಿ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬುಧವಾರ ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಬಾಬಾಸಾಹೇಬ್ ಅವರನ್ನು ಶಿಪ್ಟ್ ಮಾಡಿ ಚಿಕಿತ್ಸೆ ಮುಂದುವರೆಸಲಾಗಿದೆ.

ಇನ್ನು ಈ ಕುರಿತು ಮಾತನಾಡಿದ ಬೆಳಗಾವಿಯ ಬಿಮ್ಸ್ ವೈದ್ಯಕೀಯ ಅಧೀಕ್ಷಕ ಎ.ಬಿ.ಪಾಟೀಲ್, ಇಂದು ಮುಂಜಾನೆ ಬಾಬಾಸಾಹೇಬ್ ಎಂಬ ವ್ಯಕ್ತಿ ದಾಖಲಾಗಿದ್ದರು. ಫುಡ್ ಪಾಯಿಸನ್ ಆಗಿ ದೃಷ್ಟಿ ಹೋಗಿದೆ ಎಂದು ಹೇಳಿದ್ದಾರೆ. ಕಣ್ಣು ಫಂಡೋಸ್ಕೋಪಿಕ್ ಮಾಡಿ ನೋಡಿದಾಗ ನಾರ್ಮಲ್ ಇದೆ. ಯಾವ ಕಾರಣಕ್ಕೆ ದೃಷ್ಟಿ ಹೋಗಿದೆ ಎನ್ನುವುದು ನಿಖರವಾಗಿ ತಿಳಿದಿಲ್ಲ. ನೇತ್ರ ತಜ್ಞರು ಬಾಬಾಸಾಹೇಬ್ ಅವರನ್ನು ಪರೀಕ್ಷಿಸಿದ್ದಾರೆ. ಎಂಆರ್ಐ ನಡೆಸುವಂತೆಯೂ ಸಲಹೆ ಮಾಡಿದ್ದಾರೆ. ಎಂಆರ್ಐ ಪರೀಕ್ಷೆ ಬಳಿಕ ನಿಖರ ಕಾರಣ ತಿಳಿದು ಬರಲಿದೆ ಎಂದರು.
ಪ್ರಕರಣ ಹಿನ್ನಲೆ
ಆಗಸ್ಟ್ 28ರಂದು ಪಟೇಲ್ ಕುಟುಂಬದ ಮದುವೆ ಸಮಾರಂಭದಲ್ಲಿ ಸಸ್ಯಾಹಾರ ಹಾಗೂ ಮಾಂಸಾಹಾರ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ಬಳಿಕ ಊಟ ಮಾಡಿ ಮನೆಗೆ ವಾಪಾಸ್ ಆಗುತ್ತಿದ್ದಂತೆ ಕೆಲ ಜನರಿಗೆ ವಾಂತಿ-ಭೇದಿಯಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಹಿರೇಕೋಡಿ ಗ್ರಾಮಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದು, ಸರ್ಕಾರಿ ಶಾಲೆಯಲ್ಲಿಯೇ ತಪಾಸಣೆ ನಡೆಸುತ್ತಿದ್ದರು.
ಅಷ್ಟೇ ಅಲ್ಲದೇ ಗ್ರಾಮದ ಮನೆ ಮನೆಗೆ ತೆರಳಿ ಜನರ ಆರೋಗ್ಯ ತಪಾಸಣೆಗೆ ನಿರ್ಧರಿಸಿದ್ದರು. ಹಾಗೂ ತೀವ್ರ ಅಸ್ವಸ್ಥಗೊಂಡವರನ್ನು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿತ್ತು. ಇನ್ನು ಮದುವೆ ಸಮಾರಂಭಕ್ಕೆ ಆಗಮಿಸಿದ್ದ ಮಹಾರಾಷ್ಟ್ರದ ಮಿರಜ್ ಸಂಬಂಧಿಕರಾಗಿದ್ದಾರೆ ಎನ್ನಲಾಗಿದೆ.
ಮದುವೆ ಸಮಾರಂಭಕ್ಕೆ ಮಹಾರಾಷ್ಟ್ರದ ಮಿರಜ್ನಿಂದ ಆಗಮಿಸಿದ್ದರು. ಅವರಿಗೂ ಕೂಡ ವಾಂತಿ ಬೇಧಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ಸಿಕ್ಕಿದೆ. ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫಾತಿಮಾ ಎಂಬ ಮಹಿಳೆ ಮಾಧ್ಯಮದ ಮುಂದೆ ತಮ್ಮ ನೋವು ತೋಡಿಕೊಂಡು ಕಣ್ಣೀರಿಟ್ಟಿದ್ದಾರೆ. ಹಿರೇಕೋಡಿಯಲ್ಲಿ ನಿನ್ನೆ ನಡೆದಿದ್ದ ಮದುವೆ ಸಮಾರಂಭದಲ್ಲಿ ಊಟ ಸೇವಿಸಿ ಮನೆಗೆ ವಾಪಸ್ ಆದ ಬಳಿಕ ವಾಂತಿ ಬೇಧಿಯಾಗಿದೆ ಎಂದು ಅಳಲು ತೋಡಿಕೊಂಡಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications