Get Updates
Get notified of breaking news, exclusive insights, and must-see stories!

Siddaramaiah: ಭಯೋತ್ಪಾದಕ ಪದ ಬಳಕೆ ಖಂಡನೀಯ, 'ಸಿಎಂ ಭಯೋತ್ಪಾದಕ' ಎಂದು ಮತ್ತೆ ವಿವಾದ

ಹುಬ್ಬಳ್ಳಿ, ಅಕ್ಟೋಬರ್ 14: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸಚಿವರಿಗೆ ಬಳಸಿದ ಭಯೋತ್ಪಾದಕ ಶಬ್ದ ಇದೀಗ ಕಾಂಗ್ರೆಸ್ ಹಾಗು ಬಿಜೆಪಿ ಮಧ್ಯೆ ದೊಡ್ಡ ವಾಗ್ದ್ಯುದ್ಧಕ್ಕೆ ಕಾರಣವಾಗಿದೆ. ಬಿಜೆಪಿ ನಾಯಕರು ಸಿಎಂ ಸೇರಿದಂತೆ ಕಾಂಗ್ರೆಸ್ ನಾಯಕರ ಮೇಲೆ ಮುಗಿಬಿದ್ದಿದ್ದಾರೆ. ಇದೀಗ ಮಾಜಿ ಸಿಎಂ, ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಸೇರಿದಂತೆ ಹಲವುರು ಸಿಎಂ ಹೇಳಿಕೆಯನ್ನು ಬಹಿರಂಗವಾಗಿ ಖಂಡಿಸಿದ್ದಾರೆ. ಇತ್ತ ಶಾಸಕರು ಸಿಎಂ ಸಿದ್ದರಾಮಯ್ಯ ಭಯೋತ್ಪಾದಕರು ಎಂದೇಳಿ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ನಾಯಕರ ನಡುವೆ ಭಯೋತ್ಪಾದಕ ಪದ ಬಳಕೆ ಸರಿಯಲ್ಲ. ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್ ಪಕ್ಷ ಎಲ್ಲಾ ರೀತಿಯ ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡಲು ಸಿದ್ಧವಾಗಿದೆ ಎಂದು ಅವರು ದೂರಿದರು.

MP Jagadish Shettar Condemned CM Siddaramaiah Terrorist Statement

ನಿಜವಾದ ಭಯೋತ್ಪಾದಕರು ಬೇರೆಡೆ ಇದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಆಡುವ ಮಾತುಗಳು ಯಾಕೆ ಇಷ್ಟು ಕೆಳಮಟ್ಟಕ್ಕೆ ಹೋಗಿದೆ ಎಂದು ಗೊತ್ತಾಗುತ್ತಿಲ್ಲ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ಮೋದಿಯವರು ಭಯೋತ್ಪಾದಕರನ್ನು ಹತ್ತಿಕ್ಕುವ ಕೆಲಸ ಮಾಡಿದ್ದಾರೆ. ಆದರೆ ಇಲ್ಲಿನ ರಾಜ್ಯ ರಾಜಕೀಯದಲ್ಲಿ ಸ್ವತಃ ಸಿಎಂ ಈ ರೀತಿ ಪದ ಬಳಕೆ ಮಾಡುವುದು ಖಂಡನೀಯ ಎಂದು ಕಳವಳ ವ್ಯಕ್ತಪಡಿಸಿದರು.

ವರುಷಗಳ ಹಿಂದೆ ಹಳೇ ಹುಬ್ಬಳ್ಳಿ ಗಲಭೆ ನಡೆದಿತ್ತು. ಆ ಪ್ರಕರಣದಲ್ಲಿ ಕಠಿಣ ಕಾನೂನುಗಳನ್ನು ಜಾರಿಗೆ ತರಲಾಗಿತ್ತು. ಅತೀ ಕಡಿಮೆ ಅವಧಿಯಲ್ಲಿ ಸಾವಿರಾರು ಜನರು ಸೇರಿ ಗಲಭೆ ಮಾಡಿದ್ದರು. ಅಂದಿನ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭೂ ರಾಮ್ ಅವರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ನಿಯಂತ್ರಿಸಿದ್ದರು. ಅದರೊಂದು ಪೂರ್ವ ನಿಯೋಜಿತ ಕೃತ್ಯ ಎಂದು ಶೆಟ್ಟರ್ ಅವರು, ಇಂದು ಕಾಂಗ್ರೆಸ್ ಪಕ್ಷ ಗಲಭೆ ಪ್ರಕರಣ ವಾಪಸ್ಸು ಪಡೆದು ಸಂವಿಧಾನಕ್ಕೆ ಅಗೌರವ ತೋರುತ್ತಿದೆ ಎಂದು ಸರ್ಕಾರ ನಡೆ ಟೀಕಿಸಿದರು.

MP Jagadish Shettar Condemned CM Siddaramaiah Terrorist Statement

ಸಿಎಂ ಭಯೋತ್ಪಾದಕ ಎಂದೇಳಿ ಟೆಂಗಿನಕಾಯಿ ವಿವಾದ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರಿಗೆ ಭಯೋತ್ಪಾದಕ ಎಂದಿರುವ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು ತಿರುಗೇಟು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ ಭಯೋತ್ಪಾದಕರು ಎಂದು ಮತ್ತೊಂದು ವಿವಾದ ಸೃಷ್ಟಿಸಿದರು.

ಸುದ್ದಿಗಾರರ ಜೊತೆಗೆ ಅವರು ಮಾತನಾಡಿ, ಸಿಎಂ ಸಿದ್ದರಾಮಯ್ಯ ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ತಿಳಿದು ಮಾತನಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಸಚಿವರಿಗೆ ಭಯೋತ್ಪಾದಕ ಪಟ್ಟ ಕಟ್ಟುವುದು ಸರಿಯಲ್ಲ.

ಭಯೋತ್ಪಾದಕರಿಗೆ ಸಹಾಯ ಮಾಡಿದರೆ ನೀವೇ ಭಯೋತ್ಪಾದಕರು ಆದಂತೆ ಎಂದ ಅವರು, 2022 ರಲ್ಲಿ ಹಳೆ ಹುಬ್ಬಳ್ಳಿಯ ಗಲಾಟೆ ಪ್ರಕರಣ ಪೊಲೀಸ್ vs ಮುಸ್ಲಿಂ ಗಲಭೆ ಎಂದು ನೆನಪಿಸಿದರು.

ಅಂದಿನ ಗಲಭೆ ಯಾವುದೋ ರೈತ, ಕನ್ನಡ ಪರ ಹಾಗೂ ಕೋಮು ಗಲಭೆ ಅಲ್ಲ. ನೇರವಾಗಿ ಪೊಲೀಸ್ ಠಾಣೆ ಮೇಲೆ ಅಟ್ಯಾಕ್ ಮಾಡಲಾಗಿತ್ತು. ಪೊಲೀಸ್ ಠಾಣೆ ಮೇಲೆ ಕಲ್ಲು ಹೊಡೆಯುತ್ತಾರೆ. ಸಾವಿರಾರು ಸಂಖ್ಯೆ ಮುಸ್ಲಿಂರು ಬಂದು ಪೊಲೀಸ್ ಠಾಣೆ ಕಬ್ಜಾ ಮಾಡುತ್ತಾರೆ. ಪೊಲೀಸ್ ಕಮೀಷನರ್ ಕಾರ್ ಮೇಲೆ ಹತ್ತಿ ಕುಣಿಯುತ್ತಾರೆ.

ಪೊಲೀಸರ ಠಾಣೆ ಮೇಲೆ ದಾಳಿ, ಪೊಲೀಸ್ ವಾಹನ ಜಖಂ ಮಾಡುತ್ತಾರೆ. ಇದೆಲ್ಲ ಆದರೂ ಸಹ ಸಚಿವ ಸಂಪುಟದಲ್ಲಿ ಅವರ ಮೇಲಿನ ಪ್ರಕರಣ ವಾಪಸ್ ಪಡೆಯುತ್ತಾರೆ ಎಂದರೆ ಏನರ್ಥ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+