ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಸವೇಶ್ವರರ ಹೆಸರಿಡಿ
ಹುಬ್ಬಳ್ಳಿ, ಡಿಸೆಂಬರ್. 13 : ಅಭಿವೃದ್ಧಿಗೊಂಡಿರುವ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ 'ಜಗಜ್ಯೋತಿ ಬಸವೇಶ್ವರ' ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಬೇಕು ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಒತ್ತಾಯಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ಅವರು, ಕೇಂದ್ರ ವಿಮಾನಯಾನ ಸಚಿವ ಅಶೋಕ್ ಗಜಪತಿರಾಜು ಅವರಿಗೆ ಈ ಕುರಿತು ಮನವಿ ಮಾಡಿದ್ದಾರೆ.
ಹುಬ್ಬಳ್ಳಿ-ಮುಂಬೈ ಏರ್ ಇಂಡಿಯಾ ಸೇವೆಗೆ ಚಾಲನೆ
ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಖಾತೆ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಈ ಕುರಿತು ವಿಧಾನಸಭೆ ಅಧಿವೇಶನದಲ್ಲಿ ನಿರ್ಣಯ ಮಂಡನೆ ಮಾಡಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಎಂದು ಹೇಳಿದ್ದಾರೆ.
ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು, ಮುಂಬೈ ವಿಮಾನ ನಿಲ್ದಾಣಕ್ಕೆ ಛತ್ರಪತಿ ಶಿವಾಜಿ ಮಹಾರಾಜರ ಹೆಸರಿದೆಯೋ ಆ ತರಹ ನಮ್ಮ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ವಿಶ್ವಕ್ಕೇ ಮಹಾಮಾನವತಾವಾದಿಯಾಗಿರುವ ಜಗಜ್ಯೋತಿ ಶ್ರೀ ಬಸವಣ್ಣನವರ ಹೆಸರು ಇಡುವದು ಅತ್ಯಂತ ಸೂಕ್ತ.
— Ananthkumar (@AnanthKumar_BJP) December 12, 2017
ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ಉದ್ಘಾಟನೆ
ಮನವಿ ಸಲ್ಲಿಕೆ : ಹುಬ್ಬಳ್ಳಿ ವಿಮಾಣ ನಿಲ್ದಾಣ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಅಶೋಕ್ ಗಜಪತಿರಾಜು ಅವರು ಮಂಗಳವಾರ ಆಗಮಿಸಿದ್ದರು. ರಾಷ್ಟ್ರೀಯ ಬಸವ ದಳದ ಸದಸ್ಯರು ಸಹ ವಿಮಾನ ನಿಲ್ದಾಣಕ್ಕೆ ಬಸವೇಶ್ವರ ಹೆಸರು ಇಡಬೇಕು ಎಂದು ಮನವಿ ಮಾಡಿದರು.
ಮುಂಬರುವ ದಿನಗಳಲ್ಲಿ ಹುಬ್ಬಳ್ಳಿಯಿಂದ ಅಂತರಾಷ್ಟ್ರೀಯ ದೇಶಗಳಿಗೆ ವಿಮಾನಗಳು ಸಂಚರಿಸುವ ದಿನಗಳು ದೂರವಿಲ್ಲ. ೧೯೯೮ ರಲ್ಲಿ ಅಟಲಜಿ ಸರಕಾರದಲ್ಲಿ ಪ್ರಾರಂಭವಾದ ಕೆಲಸ ಮೋದಿ ಸರಕಾರದಲ್ಲಿ ಸಾಕಾರವಾಗಿದೆ.
— Ananthkumar (@AnanthKumar_BJP) December 12, 2017
ವೀರಶೈವ-ಲಿಂಗಾಯತ ಎರಡೂ ಒಂದೇ : ಕಾಶಿ ಜಗದ್ಗುರು
ಹುಬ್ಬಳ್ಳಿ ವಿಮಾನ ನಿಲ್ದಾಣದ ರನ್ ವೇಯನ್ನು ವಿಸ್ತರಣೆ ಮಾಡಲಾಗಿದೆ. ಹೊಸ ಟರ್ಮಿನಲ್ ಅನ್ನು ಮಂಗಳವಾರ ಲೋಕಾರ್ಪಣೆ ಮಾಡಲಾಗಿದೆ. ಹುಬ್ಬಳ್ಳಿ-ಮುಂಬೈ ನೂತನ ವಿಮಾನ ಸೇವೆಗೂ ಚಾಲನೆ ಸಿಕ್ಕಿದೆ.