ಮೋದಿ ಆನೆ ನಡೆದಿದ್ದೇ ದಾರಿ ಎಂಬಂತೆ ವರ್ತಿಸುತ್ತಿದ್ದಾರೆ: ಹೊರಟ್ಟಿ
ಹುಬ್ಬಳ್ಳಿ, ಡಿಸೆಂಬರ್ 22: ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರುವ ಮುನ್ನ ಎಲ್ಲ ರಾಜ್ಯಗಳ ಅಭಿಪ್ರಾಯ ಪಡೆಯಬೇಕಿತ್ತು, ಸಾಧಕ ಬಾಧಕಗಳ ಪರಿಶೀಲನೆ ನಡೆಸದೆ ದಿಢೀರ್ ಕ್ರಮ ತೆಗೆದುಕೊಂಡಿರುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಹೊರಟ್ಟಿಯವರು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಾನು ನಡೆದದ್ದೇ ದಾರಿ ಎಂಬಂತೆ ವರ್ತಿಸುತ್ತಿದೆ. ದೇಶದ ಪ್ರಧಾನಿಯಾದವರಿಗೆ ಹಾಗೂ ಗೃಹ ಸಚಿವರಿಗೆ ಪೌರತ್ವ ಕಾಯ್ದೆಯ ಕುರಿತು ಜಾಗೃತಿ ವಹಿಸಬೇಕಿತ್ತು, ಒಂದು ಸಮುದಾಯವನ್ನು ಬಿಟ್ಟು ಕಾಯಿದೆ ರೂಪಿಸಿರುವುದು ಬೇರೆ ಅರ್ಥ ಮೂಡುತ್ತದೆ ಎಂದು ಅಭಿಪ್ರಾಯಪಟ್ಟರು.
ಮಂಗಳೂರಿನಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟಿಸುವ ವೇಳೆ ಗೋಲಿಬಾರ್ ನಡೆಸಿರುವುದು ದುರ್ದೈವದ ಸಂಗತಿ, ಪೊಲೀಸರು ಆತ್ಮ ರಕ್ಷಣೆಗೆ ಮಾಡಿದ್ದಾರೆ ಎಂದು ಅವರು ಹೇಳುತ್ತಿದ್ದಾರೆ, ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕಿತ್ತು ಎಂದರು.

2008 ರಲ್ಲಿ ಇದೇ ಬಿಜೆಪಿ ಸರ್ಕಾರವಿದ್ದಾಗ ಗೊಬ್ಬರಕ್ಕಾಗಿ ಪ್ರತಿಭಟನೆ ಸಂದರ್ಭದಲ್ಲಿಯೂ ಹಾವೇರಿಯಲ್ಲಿ ರೈತರ ಮೇಲೆ ಗೋಲಿಬಾರ್ ಮಾಡಲಾಗಿತ್ತು, ಇದರಿಂದ ಜನ ಸರ್ಕಾರದ ಮೇಲಿರುವ ನಂಬಿಕೆ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಯಾವುದೇ ಸರ್ಕಾರವಿದ್ದಿದ್ದರೂ ಇದೇ ತೀರ್ಮಾನ ತೆಗೆದುಕೊಳ್ಳುತ್ತಿದ್ದರು. ಪೌರತ್ವ ತಿದ್ದುಪಡಿ ವಿಷಯ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಪಕ್ಷ ರಾಜಕಾರಣದಿಂದ ಯಾವುದೇ ದೇಶ ಮುಂದುವರೆಯಲು ಸಾಧ್ಯವಿಲ್ಲ, ಈಗಿನ ಯಾವುದೇ ಪಕ್ಷದಲ್ಲಿ ಮೌಲ್ಯಗಳು ಉಳಿದಿಲ್ಲ ಎಂದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications