Tricolour Flag: ಸಂಕಷ್ಟದಲ್ಲಿದ್ದಾರೆ ರಾಷ್ಟ್ರಧ್ವಜ ತಯಾರಕರು & ವ್ಯಾಪಾರಿಗಳು, ಕಾರಣವೇನು
ಹುಬ್ಬಳ್ಳಿ, ಆಗಸ್ಟ್ 05: ಕರ್ನಾಟಕ ಸೇರಿದಂತೆ ಭಾರತದಲ್ಲಿ ಆಗಸ್ಟ್ ತಿಂಗಳು ಬಂತೆಂದರೆ ಸಾಕು ಎಲ್ಲೆಲ್ಲೂ ಸಾತಂತ್ರ್ಯ ಸಂಭ್ರಮಾಚರಣೆಗೆ ಸಿದ್ಧತೆ ಆರಂಭವಾಗುತ್ತದೆ. ಆಗಸ್ಟ್ 15ರಂದು ಸರ್ಕಾರಿ ಕಚೇರಿಗಳು, ಶಾಲೆ ಮತ್ತು ಕಾಲೇಜು, ಖಾಸಗಿ ಕಚೇರಿ, ಸಂಘ ಸಂಸ್ಥೆಗಳು ಒಳಗೊಂಡಂತೆ ಎಲ್ಲೆಡೆ ತ್ರಿವರ್ಣ ಧ್ವಜಗಳು ಹಾರಾಡುತ್ತವೆ. ಹೀಗೆ ಭಾರತೀಯ ಪಾಲಿಗೆ ಮಹತ್ವದ ದಿನದ ಆಚರಣೆಗೆ ರಂಗೇರಲು ಮುಖ್ಯವಾಗುವ ರಾಷ್ಟ್ರಧ್ವಜದ ತಯಾರಕರ ಪರಿಸ್ಥಿತಿ ಈ ವರ್ಷ ಎಂದಿನಂತಿಲ್ಲ ಎಂಬುದು ದುಃಖಕರ ಸಂಗತಿಯಾಗಿದೆ.
ಏಕಂದರೆ ಈ ಭಾರಿ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆ ಮುಂದುವರಿದಿದೆ. ಇಲ್ಲಿನ ಜಿಲ್ಲೆಗಳಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮಳೆ ಸಹಿತ ನಿರಂತರವಾಗಿ ತಂಪಾದ ಗಾಳಿ ಬೀಸುವುದರಿಂದ ರಾಷ್ಟ್ರ ಧ್ವಜ ಮಾರಾಟಗಾರರು ಮಾತ್ರವಲ್ಲದೇ ತಯಾರಿಕರ ಮೇಲೆ ಹೊಡೆತ ಬಿದ್ದಿದೆ.

ಧ್ವಜ ವ್ಯಾಪಾರ, ವಹೀವಾಟು ಕುಸಿತ
ಕಳೆದ ವರ್ಷ ಹೋದ ವರ್ಷ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ರಾಷ್ಟ್ರಧ್ವಜ ಮಾರಾಟದಲ್ಲಿ ಕರ್ನಾಟಕದಲ್ಲಿ ದಾಖಲೆಯ ವಹಿವಾಟು ಆಗಿತ್ತು. ಪ್ರತಿ ವರ್ಷ 1.5 ಕೋಟಿ ರೂ.ಗೂ ಹೆಚ್ಚು ವಹಿವಾಟು ನಡೆಯುತ್ತದೆ. ಆದರೆ ಪ್ರಸಕ್ತ 2024ರ ಜುಲೈ ವರೆಗೆ ₹97 ಲಕ್ಷ ಮೊತ್ತದ ವ್ಯಪಾರ ಮಾತ್ರ ಜರುಗಿದ್ದರ ಬಗ್ಗೆ ಮಾಹಿತಿ ಲಭ್ಯವಾಗಿದೆ.
'ಭಾರತೀಯ ಮಾನಕ ಸಂಸ್ಥೆ' ಪ್ರಕಾರ 9 ವಿವಿಧ ಅಳತೆಯ ಧ್ವಜಗಳನ್ನು ತಯಾರಿಸಲಾಗುತ್ತದೆ. 21x14, 128, 9x6, 6x4, 4.5x3, 3x2, 1.5 1,9x6 5 6x4 ಅಳತೆಯ ಧ್ವಜಗಳನ್ನು ಸಿದ್ಧಪಡಿಸಿ, ಮಾರಾಟ ಮಾಡಲಾಗುತ್ತದೆ. ಅಳತೆಗೆ ತಕ್ಕಂತೆ ಧ್ವಜಗಳು ಅಳತೆಗೆ ತಕ್ಕಂತೆ ವಿವಿಧ ಬೆಲೆಗೆ ಮಾರಾಟವಾಗುತ್ತವೆ.
ಬೇಡಿಕೆ ಕ್ರಮೇಣ ಇಳಿಕೆ, ಕಾರಣವೇನು?
ಒಂದು ಧ್ವಜಕ್ಕೆ 250 ರೂಪಾಯಿಯಿಂದ ಬರೋಬ್ಬರಿ 30,000 ವರೆಗೆ ದರವಿದೆ. ಹುಬ್ಬಳ್ಳಿಯ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ಉತ್ಪಾದನೆಯಾಗುವ ಖಾದಿ ಅಂಗಿ, ಪ್ಯಾಂಟ್, ಟಾವೆಲ್, ಕರವಸ್ತ್ರ, ಟೊಪ್ಪಿಗೆ, ಜಮಖಾನಿಯಂತಹ ವಸ್ತುಗಳಿಗೂ ಬೇಡಿಕೆ ಸಹ ಈ ವರ್ಷ ಕುಂಠಿತಗೊಂಡಿದೆ.
ಗ್ರಾಹಕರ ಸಂಖ್ಯೆ ಹೆಚ್ಚಾಗುತ್ತಿಲ್ಲ, ನಗರ ಪ್ರದೇಶಗಳಲ್ಲಿ ಹಾಗೂ ಖಾದಿ ಬಗ್ಗೆ ತಿಳಿದವರು ಮಾತ್ರ ಖರೀದಿಸುತ್ತಾರೆ. ವೀವಿಂಗ್, ಸ್ಪಿನ್ನಿಂಗ್ ರೀತಿಯ ಕೆಲಸಗಳು ಹೆಚ್ಚಿನ ಸಿಬ್ಬಂದಿಯನ್ನು ಬೇಡುತ್ತವೆ. ಆದರೆ ಕೆಲಸಕ್ಕೆ ಕಾರ್ಮಿಕರೇ ಸಿಗುತ್ತಿಲ್ಲ.

ಜಿಎಸ್ಟಿ ಮುಕ್ತಿಗೊಳಿಸಿದರೆ ಅನುಕೂಲ
ಬಾಗಲಕೋಟೆ ಜಿಲ್ಲೆ ವ್ಯಾಪ್ತಿಯ ಬಾದಾಮಿ, ಬೀಳಗಿಯಲ್ಲಿ 21 ಹಳ್ಳಿಗಳಲ್ಲಿ ಸಂಘದ ಕಚೇರಿಗಳಿವೆ. ಧ್ವಜ ಉತ್ಪಾದನೆಗೆ ಬಳಸುವ ಕೆಲ ಕಚ್ಚಾ ಸಾಮಗ್ರಿಗಳ ಮೇಲಿನ ಜಿಎಸ್ಟಿಯಿಂದ ಆರ್ಥಿಕ ಹೊರೆ ಸಹ ಬಾಧಿಸುತ್ತಿದೆ. ಆಯಾ ವಸ್ತುಗಳ ಮೇಲೆ ತೆರಿಗೆ ಮುಕ್ತಗೊಳಿಸಿದರೆ ತಯಾರಕರಿಗೆ, ಧ್ವಜ ವ್ಯಾಪಾರಿಗಳಿಗೆ ತಕ್ಕ ಮಟ್ಟಿಗೆ ಸಹಾಯವಾಗಲಿದೆ ಎಂದು ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ.
ವಲಯಕ್ಕೆ ಕಾಡುತ್ತಿರುವ ಸಿಬ್ಬಂದಿ ಕೊರತೆ
'ರಾಷ್ಟ್ರಧ್ವಜದ ಬಟ್ಟೆ ತಯಾರಿಸುವ ಗರಗ ಕೇಂದ್ರಕ್ಕೆ 2023ರ ಜುಲೈ 23ರಿಂದ 2/3 ಅಳತೆಯ ಧ್ವಜ ತಯಾರಿಕೆಗೆ ಅನುಮತಿ ಸಿಕ್ಕಿದೆ. ಆದರೆ ಈವರೆಗೆ ಅಂದಾಜು ₹10 ಲಕ್ಷ ವಹಿವಾಟು ಮಾತ್ರವೆ ನಡೆದಿದೆ. ಅಲ್ಲಿಯೂ ಹವಾಮಾನ ವೈಪರಿತ್ಯ, ಕಚ್ಚಾ ಸಾಮಗ್ರಿ ಪೂರೈಕೆ ಮತ್ತು ಸಿಬ್ಬಂದಿ ಕೊರತೆಯಿಂದ ಉತ್ಪಾದನೆಗೆ ಸಮಸ್ಯೆ ಕಂಡು ಬರುತ್ತಿದೆ.
ಇನ್ನೂ ಕಳೆದ ಕೆಲವು ದಿನಗಳಿಂದ ನಿರಂತರ ಮಳೆ ಆಗುತ್ತಿದೆ. ಮಲೆನಾಡು ಬಿಟ್ಟರೆ ಉತ್ತರ ಕರ್ನಾಟಕದಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಹವಾಮಾನ ತಂಪಾಗಿ ನೂಲು, ಬಟ್ಟೆಗೆ ಹಾಕಿದ್ದ ಮಸಿ ಒಣಗುತ್ತಿಲ್ಲ. ಇದರಿಂದ ಉತ್ಪಾದನೆಗೆ ಪೆಟ್ಟು ಬಿದ್ದಿದೆ. ಉತ್ಪಾದನೆಯ ವೇಗ ಕಡಿಮೆ ನಿಧಾನವಾಗಿದೆ.
ಕೌಶಲ್ಯಾಧಾರಿತ ಸಿಬ್ಬಂದಿ ಬೇಕಿದ್ದು, ಕಡಿಮೆ ವೇತನ ಹಿನ್ನೆಲೆಯಲ್ಲಿ ಕೆಲಸಗಾರರು ಸಿಗುವುದು ಕಡಿಮೆ ಆಗಿದೆ. ನಿತ್ಯ ಸುಮಾರು ₹250ಗೆ ಬರಲು ಯಾರು ಒಪ್ಪದೇ ಹೆಚ್ಚಿನ ಕೂಲಿ ಸಿಗುವ ಕೆಲಸಕ್ಕೆ ಹೋಗುವವರೇ ಅಧಿಕವಾಗಿದ್ದಾರೆ. ಈ ಕಾರಣದಿಂದಲೂ ರಾಷ್ಟ್ರಧ್ವಜ ಉತ್ಪಾದಕರು ಮತ್ತು ಮಾರಾಟಗಾರರು ಇತ್ತೀಚಿನ ದಿನಗಳಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications