ಯುವಜನೋತ್ಸವ ಕಾರ್ಯಕ್ರಮಕ್ಕೆ ಮದುವಣಗಿತ್ತಿಯಂತೆ ಸಿದ್ಧವಾದ ವಾಣಿಜ್ಯ ನಗರಿ ಹುಬ್ಬಳ್ಳಿ
ಹುಬ್ಬಳ್ಳಿ, ಜನವರಿ, 08: ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ಹುಬ್ಬಳ್ಳಿಯಲ್ಲಿ ಜನವರಿ 12ರಂದು ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಇದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ಹೀಗಾಗಿ ಕಾಂಗ್ರೆಸ್ ಇದನ್ನು ವಿರೋಧಿಸುತ್ತಿರುವುದರಲ್ಲಿ ಅರ್ಥವಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ಜನವರಿ 12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ರೈಲ್ವೆ ಮೈದಾನದಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಹಾಗೆಯೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭೇಟಿ ಮಾಡಿ ಸ್ಥಳ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದಿನ ಕಾರ್ಯಕ್ರಮಕ್ಕೆ ಸುಮಾರು 25-30 ಸಾವಿರ ಯುವಕರು ಭಾಗಿಯಾಗಲಿದ್ದು, ದೇಶದ ವಿವಿಧ ರಾಜ್ಯಗಳಿಂದ 8 ಸಾವಿರ ಯುವಕರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಕುಳಿತುಕೊಳ್ಳಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ
ಎಲ್ಲರಿಗೂ ಕಾರ್ಯಕ್ರಮದಲ್ಲಿ ಕುಳಿತುಕೊಳ್ಳಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನು ರಾಷ್ಟ್ರೀಯ ಯುವ ಜನೋತ್ಸವ ಕೇಂದ್ರದ ಕಾರ್ಯಕ್ರಮ ಆಗಿದ್ದು, ಇದು ರಾಜ್ಯ ಸರ್ಕಾರ ಸಹಕಾರದೊಂದಿಗೆ ನಡೆಯುತ್ತಿದೆ. ಈಗಾಗಲೇ ಜಿಲ್ಲಾಡಳಿತ ಭರದಿಂದ ಕಾರ್ಯ ನಿರ್ವಹಿಸುತ್ತಿದ್ದು, ಕಾರ್ಯಕ್ರಮವು ಶಾಂತ ರೀತಿಯಿಂದ ಜರುಗಬೇಕು ಎಂದರು.

ಭರದಿಂದ ಸಾಗಿದ ಸಿದ್ಧತೆಗಳು
ವಾಣಿಜ್ಯನಗರಿ ಹುಬ್ಬಳ್ಳಿಗೆ ಜನವರಿ 12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಸ್ವಚ್ಛತೆ ಹಾಗೂ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿದೆ. ಈಗಾಗಲೇ ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ರಮನ್ ಗುಪ್ತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ನಿಟ್ಟಿನಲ್ಲಿ ರೈಲ್ವೆ ಮೈದಾನದಲ್ಲಿ ಸಿದ್ಧತೆ ಕಾರ್ಯ ಭರದಿಂದ ಸಾಗಿದ್ದು, ಬಣ್ಣ ಹಚ್ಚುವ ಹಾಗೂ ಸ್ವಚ್ಚತಾ ಕಾರ್ಯ ಜೋರಾಗಿ ನಡೆದಿದೆ. ಇನ್ನು ಜನವರಿ 12 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಗರಕ್ಕೆ ಆಗಮಿಸುತ್ತಿದ್ದು, ಅವರ ಸುರಕ್ಷತೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಸೂಕ್ತ ಭದ್ರತೆಯನ್ನು ಕೈಗೊಳ್ಳಲಾಗುತ್ತಿದೆ. ಅಲ್ಲದೇ ಆಯಕಟ್ಟಿನ ಪ್ರದೇಶದಲ್ಲಿ ಸಾಕಷ್ಟು ಸಿದ್ಧತೆ ಕಾರ್ಯವನ್ನು ನಡೆಸಿದ್ದು, ಮದುವಣಗಿತ್ತಿಯಂತೆ ಕಂಗೊಳಿಸಲು ಹುಬ್ಬಳ್ಳಿ ಧಾರವಾಡ ಅವಳಿನಗರ ಸಿದ್ಧವಾಗುತ್ತಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications