ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವಜನೋತ್ಸವ 2023: ಅತಿಥಿಗಳಿಗೆಂದೇ ಸಿದ್ಧವಾದ ವಿಶೇಷ ನೋಂದಣಿ ಕಿಟ್ಗಳು
ಧಾರವಾಡ, ಜನವರಿ, 09: ಉತ್ತರ ಕರ್ನಾಟಕದ ಐತಿಹಾಸಿಕ ನಗರವಾಗಿರುವ ಹುಬ್ಬಳ್ಳಿಯಲ್ಲಿ ಜನವರಿ 12 ರಿಂದ 16 ರವರೆಗೆ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದೆ. 26ನೇ ರಾಷ್ಟ್ರೀಯ ಯುವಜನೋತ್ಸವದಲ್ಲಿ ದೇಶದ ಸುಮಾರು 8 ಕೇಂದ್ರಾಡಳಿತ ಪ್ರದೇಶ ಹಾಗೂ 28 ರಾಜ್ಯಗಳಿಂದ ಯುವ ಪ್ರತಿಭೆಗಳು, ಪ್ರತಿಭಾವಂತ ಕಲಾವಿದರು ಮತ್ತು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವ ಹಿರಿಯ ಕಲಾವಿದರು ಭಾಗವಹಿಸುತ್ತಿದ್ದಾರೆ. ಹಾಗೆಯೇ ರಾಷ್ಟ್ರೀಯ ಯುವಜನೋತ್ಸವದಲ್ಲಿ ಪಾಲ್ಗೊಳ್ಳುವ ಸುಮಾರು 7,500 ಸ್ಪರ್ಧಾಳುಗಳು ಮತ್ತು ಅತಿಥಿಗಳಿಗೆ ನೀಡಲು ವಿಶೇಷವಾದ ನೋಂದಣಿ ಕಿಟ್ಗಳನ್ನು ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಶೇಷವಾಗಿ ಈ ಯುವ ಜನೋತ್ಸವವನ್ನು ಹಸಿರು ಯುವಜನೋತ್ಸವವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
ಅತಿಥಿಗಳಿಗೆ ವಿಶೇಷ ಕಿಟ್ಗಳ ವ್ಯವಸ್ಥೆ
ನೋಂದಣಿ ಕಿಟ್ದಲ್ಲಿನ ವಸ್ತುಗಳು ಮರುಬಳಕೆಯ ವಸ್ತುಗಳಾಗಿವೆ. ನೋಂದಣಿ ಕಿಟ್ದಲ್ಲಿ ಐಡಿ ಕಾರ್ಡ್, ಮರುಬಳಕೆಯ ಸ್ಟೀಲ್ ವಾಟರ್ ಬಾಟಲ್, ಉತ್ತಮ ಗುಣಮಟ್ಟದ ಬ್ಯಾಗ್, ಸುಮಾರು 8ಕ್ಕೂ ಹೆಚ್ಚು ದಿನಬಳಕೆಯ ವಸ್ತುಗಳಿರುವ ಸಣ್ಣ ಕಿಟ್, ಯೋಗ ಮ್ಯಾಟ್, ಟ್ರ್ಯಾಕ್ ಸೂಟ್, ಯುವಜನೋತ್ಸವ ಮಾಹಿತಿ ಇರುವ ಇವೆಂಟ್ ಮೆನ್ಯೂ, ಕರ್ನಾಟಕ ಹಾಗೂ ಧಾರವಾಡ ಜಿಲ್ಲೆಯ ಪ್ರವಾಸಿ ತಾಣಗಳ ಮಾಹಿತಿ ಪುಸ್ತಕ ಮತ್ತು ಅರವಿಂದೊ ಟ್ರಸ್ಟ್ ನೀಡಿರುವ ಯೂಥ್ ಆಫ್ ಇಂಡಿಯಾ ಪುಸ್ತಕ, ಮುಖ್ಯವಾಗಿ ಧಾರವಾಡವನ್ನು ನೆನಪಿಸುವ ಪೇಡಾ ಬಾಕ್ಸ್ ಹಾಗೂ ಖಾದಿ ಧ್ವಜದ ನೆನಪಿನ ಕಾಣಿಕೆ ಇರುತ್ತದೆ.

ಅತಿಥಿಗಳನ್ನು ಸ್ವಾಗತಿಸಲು ವಿಶೇಷ ಸಿದ್ಧತೆ
ಕರ್ನಾಟಕದ ಭವ್ಯ ಪರಂಪರೆಯನ್ನು ಮತ್ತು ಉತ್ತರ ಕರ್ನಾಟಕದ ವಿಶೇಷತೆಗಳನ್ನು ಪರಿಚಯಿಸುವ ದೃಷ್ಟಿಯಿಂದ ಧಾರವಾಡ ಜಿಲ್ಲಾಡಳಿತವು ಅತಿಥಿಗಳನ್ನು ಸ್ವಾಗತಿಸಲು ವಿಶೇಷ ಸಿದ್ಧತೆಗಳನ್ನು ಮಾಡಿಕೊಂಡಿದೆ. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ಮಾರ್ಗದರ್ಶನದಲ್ಲಿ ಇದರ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಡಾ.ಸಂತೋಷಕುಮಾರ ಬಿರಾದಾರ ನೇತೃತ್ವದ ಹುಡಾ ಮತ್ತು ಶಿಕ್ಷಣ ಇಲಾಖೆಯ ಸಿಬ್ಬಂದಿಗಳಿರುವ ಸ್ವಾಗತ ಸಮಿತಿಯು ಕಳೆದ ಒಂದು ವಾರದಿಂದ ಶ್ರಮಿಸುತ್ತಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉಮೇಶ ಬೊಮ್ಮಕ್ಕನವರ ಹಾಗೂ ಗಿರೀಶ ಪದಕಿ ನಿರಂತರವಾಗಿ ಮಾರ್ಗದರ್ಶನ ಮಾಡುತ್ತಿದ್ದಾರೆ.
ಯುವಜನೋತ್ಸವ ಸಹಾಯ ಕೇಂದ್ರ
ರಾಷ್ಟ್ರೀಯ ಯುವಜನೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯದ ಇತರ ಜಿಲ್ಲೆ ಹಾಗೂ ಅಂತರಾಜ್ಯಗಳಿಂದ ಅತಿಥಿಗಳು ಆಗಮಿಸುವುದರಿಂದ ಅವರಿಗೆ ಸಾರಿಗೆ, ವಸತಿ, ನೋಂದಣಿ ಸ್ಥಳ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ನೀಡಲಾಗುವುದು. ಆದ್ದರಿಂದ ತಕ್ಷಣ ಸಹಾಯ ಮಾಡಲು ಅನುಕೂಲವಾಗುವಂತೆ ಸ್ವಾಗತ ಸಮಿತಿಯು ಸಹಾಯ ಕೇಂದ್ರಗಳನ್ನು ತೆರೆದಿದೆ. ಮುಖ್ಯವಾಗಿ ಧಾರವಾಡ ಮತ್ತು ಹುಬ್ಬಳ್ಳಿ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಮತ್ತು ಸಹಾಯ ಕೇಂದ್ರಕ್ಕೆ ಆಗಮಿಸುವ ಅತಿಥಿಗಳನ್ನು ನಿಲ್ದಾಣದಿಂದಲೇ ಸ್ವಾಗತಿಸಲು ಕಲಾ ತಂಡಗಳನ್ನು ಸಹ ನೇಮಿಸಲಾಗಿದೆ. ಸಹಾಯ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸಲು ಸಿಬ್ಬಂದಿಯನ್ನು ನೇಮಿಸಲಾಗಿದೆ. ದಿನದ 24 ಗಂಟೆಯೂ ಸಹಾಯ ಕೇಂದ್ರದಲ್ಲಿದ್ದು, ಬರುವ ಅತಿಥಿಗಳಿಗೆ ಅವರು ಸಹಾಯ ನೀಡಲಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications