ಅಂತ್ಯಕ್ರಿಯೆ ವೇಳೆ ಉಸಿರಾಡಿದ ಮಗು: ಅಷ್ಟಕ್ಕೂ ನಡೆದಿದ್ದೇನು..? ಕಿಮ್ಸ್ ಅಧಿಕಾರಿಗಳು ಹೇಳಿದ್ದೇನು..?
ಹುಬ್ಬಳ್ಳಿ, ಆಗಸ್ಟ್ 18: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದ್ದಾನೆ ಎಂದು ನಾವು ಯಾವುದೇ ಸರ್ಟಿಫಿಕೇಟ್ ಕೊಟ್ಟಿಲ್ಲ. ಮಗು ಜೀವಂತ ಇರುವಾಗಲೇ ಡಿಸ್ಚಾರ್ಜ್ ಮಾಡಿಸಿಕೊಂಡು ಮಗುವಿನ ಸಂಬಂಧಿಕರು ಹೋಗಿದ್ದಾರೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರಥಾನಿ ತಿಳಿಸಿದ್ದಾರೆ.
ಬಾಲಕ ಮೃತಪಟ್ಟಿದ್ದಾನೆ ಎಂದು ಅಂತ್ಯಸಂಸ್ಕಾರ ಮಾಡಲು ಹೋದ ಸಂದರ್ಭದಲ್ಲಿ ಜೀವಂತವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಅವರು, ಕಳೆದ ಎಂಟತ್ತು ದಿನದ ಹಿಂದೆ ಮಗುವಿಗೆ ಮೆದುಳಿನಲ್ಲಿ ನೀರು ತುಂಬಿಕೊಂಡು ಗದಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ನಮಲ್ಲಿ ಬಂದಿದ್ದರು. ನಮ್ಮ ವೈದ್ಯರು ಮೆದುಳು ಜ್ವರದ ಕಾರಣದಿಂದ ಚಿಕಿತ್ಸೆ ನೀಡಿದ್ದಾರೆ.

ಆದರೆ ಬಾಲಕನ ಸಂಬಂಧಿಗಳು ಏಕಾಏಕಿಯಾಗಿ ಮಗು ಜೀವಂತ ಇರುವಾಗಲೇ ಡಿಸ್ಚಾರ್ಜ್ ಮಾಡಿಕೊಂಡು ತಮ್ಮ ಸ್ವಗ್ರಾಮಕ್ಕೆ ಕರೆದುಕೊಂಡು ಹೋಗಿದ್ದಾರೆ. ಆಗ ಗ್ರಾಮಸ್ಥರು ಮಗು ಬದುಕಿದೆ. ಯಾಕೆ ಕರೆದುಕೊಂಡು ಬಂದಿರಿ ಎಂದಾಗ ನವಲಗುಂದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಮತ್ತೆ ತಡರಾತ್ರಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಆದರೆ ಮಗುವಿನ ಸ್ಥಿತಿಯ ಬಗ್ಗೆ ಏನು ಹೇಳಲು ಆಗುತ್ತಿಲ್ಲ ಎಂದರು.
ಹುಬ್ಬಳ್ಳಿ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಮಗು, ಸ್ಮಶಾನಕ್ಕೆ ಹೋಗುವ ವೇಳೆಗೆ ಜೀವಂತವಾಗಿ ಎದ್ದುಕೂತಿದೆ ಎಂಬ ವಂದತಿ ಈಗ ಹೊಸ ತಿರುವು ಪಡೆದಿದ್ದು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗಲೇ ಮಗುವನ್ನು ಮರಳಿ ತೆಗೆದುಕೊಂಡು ಹೋಗಲಾಗಿದೆ ಎಂದು ಕಿಮ್ಸ್ ಆಸ್ಪತ್ರೆಯ ನಿರ್ದೇಶಕರಾದ ಡಾ.ರಾಮಲಿಂಗಪ್ಪ ಅಂಟರತಾಣಿ ಹೇಳಿದ್ದಾರೆ. ಇದರಲ್ಲಿ ಯಾವುದೇ ವೈದ್ಯರ ನಿರ್ಲಕ್ಷ್ಯ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬಸಾಪೂರದ ಒಂದೂವರೆ ವರ್ಷದ ಮಗು ಆಕಾಶ್ ಬಸವರಾಜ್ ಪೂಜಾರ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾಗಿತ್ತು. ಬಳಿಕ ಮಗು ಸ್ಮಶಾನದಲ್ಲಿ ಉಸಿರಾಡತೊಡಗಿದೆ. ಪವಾಡ ಸದೃಷವಾಗಿ ಬಾಲಕ ಬದುಕುಳಿದಿದ್ದಾನೆ ಎಂಬ ಘಟನೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.
ಆಕಾಶ್ ಕಳೆದ ಒಂದು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ. ಗದಗ ಹಾಗೂ ಧಾರವಾಡ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಮಗುವನ್ನು ಕಳೆದ ಕೆಲ ದಿನಗಳ ಹಿಂದೆ ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿತ್ತು. ನಿನ್ನೆ ಗುರುವಾರ ಸಂಜೆ ಮಗು ಸಾವನ್ನಪ್ಪಿದೆ ಎಂದು ಅಂತಿಮ ವಿಧಿವಿಧಾನದ ಕಾರ್ಯದಲ್ಲಿ ನೀರು ಹಾಕುವ ವೇಳೆ ಉಸಿರಾಡತೊಡಗಿತ್ತು. ಮಗು ಬದುಕುಳಿದ ಹಿನ್ನೆಲೆಯಲ್ಲಿ ಪೋಷಕರು ಮಗುವನ್ನು ಮತ್ತೆ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಗುವಿನ ತಂದೆ ಮಾಧ್ಯಮಗಳಿಗೆ ದಾರಿ ತಪ್ಪಿಸಿದ್ದು ಇಷ್ಟೊಂದು ಅನಾಹುತಕ್ಕೆ ಕಾರಣವಾಗಿದೆ ಎನ್ನಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications