ಹುಬ್ಬಳ್ಳಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಗೆ ಪ್ರತಿಭಟನೆ ಬಿಸಿ
ಹುಬ್ಬಳ್ಳಿ, ಅಕ್ಟೋಬರ್ 05: ಇಂದು ಹುಬ್ಬಳ್ಳಿಗೆ ಆಗಮಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪ್ರತಿಭಟನೆಯ ಬಿಸಿ ಮುಟ್ಟಿದೆ.
ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲೆಂದು ನಿರ್ಮಲಾ ಸೀತಾರಾಮನ್ ಅವರು ಹುಬ್ಬಳ್ಳಿ-ಧಾರವಾಡಕ್ಕೆ ಆಗಮಿಸಿದ್ದರು. ಅವರು ಆಗಮಿಸುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿಯೇ ಪ್ರತಿಭಟನೆ ಬಿಸಿ ಎದುರಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದ ಎದುರು ಮಾಜಿ ಸಚಿವ ಕಾಂಗ್ರೆಸ್ ನಾಯಕ ಆರ್ ವಿ ದೇಶಪಾಂಡೆ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರದ ವಿರುದ್ಧ ಉತ್ತರ ಕರ್ನಾಟಕ ಪ್ರವಾಹ ಪೀಡಿತರಿಗೆ ಪರಿಹಾರ ಹಣ ಬಿಡುಗಡೆ ಮಾಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಪರಿಹಾರ ಹಣ ಕಡಿಮೆ ಕೊಟ್ಟಿರುವುದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತೆಯರು ಪ್ರತಿಭಟನೆ ಮಾಡಲು ನಿರ್ಧರಿಸಿದ್ದರು. ಆದರೆ ಅವರನ್ನು ವಶಕ್ಕೆ ಪಡೆಯಲಾಯಿತು.
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ನಿರ್ಮಲಾ ಸೀತಾರಾಮನ್ ಅವರಿಗೆ ಹಲವು ಸಂಘಟನೆಗಳು ಭರಪೂರ ಮನವಿಗಳನ್ನು ಸಲ್ಲಿಸಿದರು. ಭಾರಿ ಸಂಖ್ಯೆಯಲ್ಲಿ ಸಂಘಟನೆಗಳು, ಜನರು ನಿರ್ಮಲಾ ಅವರಿಗೆ ಮನವಿ ಸಲ್ಲಿಸಿದರು.
ಧಾರವಾಡದ ಡಾ. ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಆಯೋಜನೆಗೊಂಡಿರುವ ರಾಷ್ಟ್ರೀಯ ತೆರಿಗೆ ಸಲಹೆಗಾರ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ನಿರ್ಮಲಾ ಸೀತಾರಾಮನ್ ತೆರಳಿದರು. ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಜ್ಯ ಸಚಿವ ಜಗದೀಶ್ ಶೆಟ್ಟರ್, ಸಂಸದ ಶಿವಕುಮಾರ ಉದಾಸಿ, ಶಾಸಕ ಅರವಿಂದ ಬೆಲ್ಲದ ಉಪಸ್ಥಿತಿತರಿದ್ದರು.
-
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
Virat Kohli: ನಾನೇನು ವಿದೇಶಿ ಆಟಗಾರನಾ?: ಲಂಡನ್ ವಾಸ್ತವ್ಯದ ಬಗ್ಗೆ ಟೀಕಾಕಾರರಿಗೆ ವಿರಾಟ್ ಕೊಹ್ಲಿ ತಿರುಗೇಟು -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
Silk Board: ಹಳದಿ-ನೀಲಿ ಮೆಟ್ರೋ ಲೈನ್ ಪ್ರಯಾಣಿಕರಿಗಾಗಿ 'ಟ್ರಾವೆಲೇಟರ್-ಕನೆಕ್ಟಿಂಗ್ ವಾಕ್ವೇ ಸಂಪರ್ಕ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ!












Click it and Unblock the Notifications