ರಾಜ್ಯ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾಮಗಾರಿ ಇಲ್ಲ: ಮಾಜಿ ಸಚಿವ ದೇವೇಗೌಡ ಆರೋಪ
ಹುಬ್ಬಳ್ಳಿ, ಅಕ್ಟೋಬರ್, 12: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲ ಆಗಿದೆ. ಅಲ್ಲದೆ ತಮ್ಮ ಹಿತಾಸಕ್ತಿಗೆ ರಾಜ್ಯವನ್ನು ಬಲಿ ಕೊಟ್ಟಿದೆ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ಹುಬ್ಬಳ್ಳಿಯಲ್ಲಿ ಗಂಭೀರ ಆರೋಪ ಮಾಡಿದರು.
ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾಮಗಾರಿ ಇಲ್ಲ. ಪದೇ ಪದೇ ಕೇಂದ್ರ ಸರ್ಕಾರದ ಮೇಲೆ ಗೊಬೆ ಕುರಿಸುವ ಕೆಲಸ ಮಾಡಲಾಗುತ್ತಿದೆ. ವಿದ್ಯುತ್ ಹಾಗೂ ಇತರ ಅಭಿವೃದ್ಧಿ ಕಾಮಗಾರಿಗಳಿಗೆ ಬಜೆಟ್ನಲ್ಲಿ ಎಷ್ಟು ಹಣ ಇಟ್ಟಿದ್ದೀರಿ. 5 ಗ್ಯಾರಂಟಿ ಅಂತಾ ಹೊರಟಿದ್ದೀರಿ. ಈ ಗ್ಯಾರಂಟಿಗಳ ಮೇಲೆ 29 ಪಕ್ಷ ಕಟ್ಟಿಕೊಂಡು ಲೋಕಸಭಾ ಚುನಾವಣೆಗೆ ಹೊರಟಿದ್ದೀರಿ ಎಂದು ವಾಗ್ದಾಳಿ ನಡೆಸಿದರು.

ಅನ್ನಭಾಗ್ಯ ಯೋಜನೆಯಲ್ಲಿ ಒಂದು ಕಾಳು ಕೊಡಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು 5 ಕೆ.ಜಿ. ಕೊಡುತ್ತಿದ್ದಾರೆ ಎಂದರು. ಇನ್ನು ಕಾವೇರಿ ನೀರು ತಮಿಳುನಾಡಿಗೆ ಹರಿಸುವ ವಿಚಾರವಾಗಿ ಪ್ರತಿಕ್ರಿಯಿಸಿ, ರಾಜ್ಯ ಸರ್ಕಾರವೇ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿದೆ. ಈ ವಿಷಯದಲ್ಲಿ ತಮಿಳುನಾಡು, ಕಾವೇರಿ ಪ್ರಾಧಿಕಾರ, ಸುಪ್ರೀಂಕೋರ್ಟ್ ನೀರು ಬಿಡು ಅಂತಾ ಹೇಳಲಿಲ್ಲ. ಇವರೇ ಒಳೊಳಗೆ ಸ್ಟಾಲಿನ್ ಜೊತೆಗೆ ಕೊಡಿಕೊಂಡು ನೀರು ಬಿಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಲ್ಲಾ ಮುಗಿದ ಮೇಲೆ ಪ್ರಧಾನಿ ನರೇಂದ್ರ ಮೋದಿ, ಜಲಸಂಪನ್ಮೂಲ ಸಚಿವ ಶೇಖಾವತ್ ಅವರನ್ನು ಭೇಟಿ ಆಗುತ್ತಾರೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಇಬ್ಬರೇ ಶೇಖಾವತ್ ಅವರನ್ನು ಭೇಟಿ ಮಾಡಿದ್ದು, ಬಳಿಕ ಮತ್ತೇ ತಮಿಳುನಾಡಿಗೆ 5 ಟಿಎಂಸಿ ನೀರು ಬಿಟ್ಟರು. ಈಗ ಅವರ ಮೇಲೆ ಇವರ ಮೇಲೆ ಹಾಕುತ್ತಾರೆ. ಇದನ್ನು ಬಿಟ್ಟು ಯಾಕೆ ಸಂಕಷ್ಟ ಸೂತ್ರವನ್ನು ಕಂಡುಕೊಳ್ಳಲಿಲ್ಲ. ಕೃಷ್ಣ, ಆಲಮಟ್ಟಿ ಸೇರಿದಂತೆ ಇನ್ನುಳಿದಂತೆ ಜಲ ವಿವಾದ ಹೇಗೆ ಬಗೆಹರಿಸಿದರು ಗೊತ್ತಲ್ಲ. ಅದರಂತೆ ಮಾಡಬೇಕಿತ್ತು ಎಂದರು.
ಕಾವೇರಿ ಹಾಗೂ ಬರದ ವಿಚಾರದಲ್ಲಿ ಸುಳ್ಳು ಹೇಳುತ್ತಾ ಇದೆ ಇದೆ ರಾಜ್ಯ ಸರ್ಕಾರ. ಯಾವುದೇ ಬರ ಕಾಮಗಾರಿ ಆಗಿಲ್ಲಈಗ ಹೇಳುತ್ತಿದ್ದಾರೆ. 40 ಲಕ್ಷ ಕೋಟಿ ಬೆಳೆ ಹಾಗೂ 48,000 ಕೋಟಿ ಬೆಳೆ ಹಾನಿಯಾಗಿದೆ ಅಂತಾರೆ. ಇದುವರೆಗೆ ಒಂದು ರೂಪಾಯಿ ಸಹ ಕೊಟ್ಟಿಲ್ಲ. ಯಾವುದೇ ಬರ ಕಾಮಗಾರಿ ಮಾಡಿಲ್ಲ. ರೈತರು ಹಾಗೂ ಜಾನುವಾರುಗಳ ಸ್ಥಿತಿ ಏನಾಗಬಹುವು ಎಂದು ರಾಜ್ಯದ ಸರ್ಕಾರದ ವಿರುದ್ಧ ಗುಡುಗಿದರು.
ಸರಿಯಾಗಿ ವಿದ್ಯುತ್ ಸರಬರಾಜು ಇಲ್ಲ. ನಾವು ದಿನಕ್ಕೆ 7 ಗಂಟೆಗಳ ಕಾಲ ಸತತವಾಗಿ ವಿದ್ಯುತ್ ಸರಬರಾಜು ಮಾಡಿದ್ದೆವು. ಈಗಿನ ಸರಕಾರ ಮೂರು ಅಲ್ಲ ಒಂದು ತಾಸು ಮಾಡಲೇ ಇಲ್ಲ ಎಂದು ಆರೋಪಿಸಿದರು. ಈ ವೇಳೆ ಹುಬ್ಬಳ್ಳಿ ಧಾರವಾಡ ಜೆಡಿಎಸ್ ಜಿಲ್ಲಾಧ್ಯಕ್ಷ ಗುರುರಾಜ ಹುಣಮರದ, ಜಿಲ್ಲಾ ಅಧ್ಯಕ್ಷ ಬಿ.ವಿ. ಗಂಗಾಧರಮಠ, ಪ್ರಕಾಶ ಅಂಗಡಿ, ನವೀನ್ ಮಡಿವಾಳರ ಸೇರಿದಂತೆ ಮುಂತಾದವರು ಇದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications