ಮಠಾಧೀಶರು ರಾಜಕೀಯಕ್ಕೆ ಬರುವುದು ಅವರ ವೈಯಕ್ತಿಕ ವಿಚಾರ: ಸಚಿವ ಆರ್. ಅಶೋಕ್
ಮಠಾಧೀಶರು ಚುನಾವಣೆಗೆ ಸ್ಪರ್ಧಿಸುವ ವಿಚಾರದ ಬಗ್ಗೆ ಸಚಿವ ಆರ್.ಅಶೋಕ್ ಹೇಳಿದ್ದೇನು?
ಹುಬ್ಬಳ್ಳಿ, ಫೆಬ್ರವರಿ, 26: ಮಠಾಧೀಶರು ರಾಜಕಾರಣಕ್ಕೆ ಬರೋದು, ಬಿಡೋದು ಅವರ ವೈಯಕ್ತಿಕ ವಿಚಾರವಾಗಿದೆ. ಆದರೆ ರಾಜ್ಯದಲ್ಲಿ ಆ ತರಹದ ವಾತಾವರಣವಿಲ್ಲ. ಇದನ್ನು ಜನರು ಕೂಡ ಒಪ್ಪುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹುಬ್ಬಳ್ಳಿಯಲ್ಲಿ ಹೇಳಿದರು.
ನಗರದಲ್ಲಿಂದು ಮಠಾಧೀಶರು ರಾಜಕಾರಣಕ್ಕೆ ಬರುವ ವಿಚಾರವಾಗಿ ಮಾತನಾಡಿದ ಅವರು, ಮಠಾಧೀಶರು ರಾಜಕೀಯಕ್ಕೆ ಬರಲು ಇಲ್ಲಿನ ಪರಿಸ್ಥಿತಿ ಕೂಡ ಹೊಂದಾಣಿಕೆ ಆಗಬೇಕು. ಮಠಾಧೀಶರು ಯಾರು ದೊಡ್ಡ ಸಂಖ್ಯೆಯಲ್ಲಿ ಬಂದಿಲ್ಲ. ದೇಶದಲ್ಲಿ ಯೋಗಿ ಆದಿತ್ಯನಾಥ, ಉಮಾ ಭಾರತಿ ಅಂತವರನ್ನು ಬಿಟ್ಟರೇ ಯಾರು ರಾಜಕೀಯಕ್ಕೆ ಬಂದಿಲ್ಲ ಎಂದರು.

ರಾಜಕಾರಣದಲ್ಲಿ ಟೀಕೆಗಳು ಸಾಮಾನ್ಯವಾಗಿರುತ್ತವೆ
ಇನ್ನು ರಾಜಕಾರಣಕ್ಕೆ ಬಂದ ಮೇಲೆ ರಾಜಕೀಯ ಪಕ್ಷಗಳನ್ನು ಟೀಕೆ ಮಾಡಬೇಕಾಗುತ್ತದೆ. ಸ್ವಾಮೀಜಿಗಳಿಗೆ ಸಮಸ್ಯೆ ಉದ್ಭವಿಸುತ್ತವೆ. ಅಲ್ಲದೇ ಯಾವುದೇ ಒಂದು ಜಾತಿಗೆ ಮಠಾದೀಶರು ಸೀಮಿತ ಆಗಲು ಆಗುವುದಿಲ್ಲ. ಮಠಾಧೀಶರು ಕಾವಿ ಬಟ್ಟೆ ಹಾಕಿಕೊಂಡ ಮೇಲೆ ಎಲ್ಲ ಜನರನ್ನು ಪ್ರೀತಿ ಮಾಡಬೇಕು, ಸಮಾನವಾಗಿ ಕಾಣಬೇಕಾಗುತ್ತದೆ. ಹೀಗಾಗಿ ಈ ಎಲ್ಲ ಕಾರಣದಿಂದ ರಾಜಕೀಯಕ್ಕೆ ಸೂಕ್ತ ಆಗುವ ವ್ಯಕ್ತಿಗಳು ಬರಬೇಕು. ಆದರೆ ಎಲ್ಲರೂ ರಾಜಕೀಯಕ್ಕೆ ಬರುವುದಕ್ಕೆ ಸಾಧ್ಯ ಆಗುವುದಿಲ್ಲ ಎಂದು ಹೇಳಿದರು.
ಯಾವ ಮಠಾಧೀಶರಿಗೆ ರಾಜಕೀಯಕ್ಕೆ ಬರಲು ಆಸಕ್ತಿ ಇದೆಯೋ, ಅವರು ಯೋಗಿ ಆದಿತ್ಯನಾಥ, ಉಮಾ ಭಾರತಿ ಅಂತಹವರ ರೀತಿಯಲ್ಲಿ ಧೈರ್ಯವಾಗಿ ರಾಜಕಾರಣದಲ್ಲಿ ನಿಲ್ಲುವ ಅಭಿಲಾಷೆಯಿಂದ ರಾಜಕಾರಣಕ್ಕೆ ಬರಲು ಪ್ರಯತ್ನ ಮಾಡಬಹುದು. ಅದು ರಾಜಕೀಯ ಪಕ್ಷಗಳ ಮೇಲೆ ಅವಲಂಬನೆ ಆಗಿರುತ್ತದೆ. ಆ ದೃಷ್ಟಿಯಿಂದ ಮಠಾಧೀಶರು ನಮ್ಮನ್ನು ಸಂಪರ್ಕ ಮಾಡಿಲ್ಲ. ಬರುವುದು ಬಿಡುವುದು ಅವರ ವೈಯಕ್ತಿಕ ವಿಚಾರಕ್ಕೆ ಬಿಟ್ಟದ್ದು ಎಂದರು.

ಈಗಾಗಲೇ ಮಠಾಧೀಶರು ರಾಜಕೀಯಕ್ಕೆ ಬರುವ ವಿಚಾರವಾಗಿ ಪರ, ವಿರೋಧವಾಗಿ ಬಹಳಷ್ಟು ಜನರು ಮಾತನಾಡಿದ್ದಾರೆ. ನಾನು ಅವರ ಪರ ಇಲ್ಲ, ಹಾಗೆಯೇ ವಿರೋಧವಾಗಿಲ್ಲ ಎಂದರು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications