Get Updates
Get notified of breaking news, exclusive insights, and must-see stories!

ಹುಬ್ಬಳ್ಳಿ ನಗರಕ್ಕೆ ಜೂನ್, ಜುಲೈ ತನಕ ನೀರಿನ ಸಮಸ್ಯೆ ಇಲ್ಲ

ಹುಬ್ಬಳ್ಳಿ, ಮಾರ್ಚ್ 27: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭೀಕರ ಬರ ಆವರಿಸಿದೆ. ಕುಡಿಯುವ ನೀರಿನ ಕೊರತೆ ಉಂಟಾಗಿದೆ. ಬೆಂಗಳೂರು ನಗರದಲ್ಲಿಯೇ ಸರಿಯಾಗಿ ಕುಡಿಯುವ ನೀರು ಸಿಗುತ್ತಿಲ್ಲ. ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿಯಲ್ಲಿ ಪರಿಸ್ಥಿತಿ ಹೇಗಿದೆ?.

ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಕಲಘಟಗಿ ಮತ್ತು ಹುಬ್ಬಳ್ಳಿಯಲ್ಲಿನ ಬರ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದರು. ಕುಡಿಯುವ ನೀರು, ಜಾನುವಾರುಗಳಿಗೆ ನೀರು ಪೂರೈಕೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

No Water Shortage For Hubballi Tii June And July

"ಬರಪೀಡಿತವೆಂದು ಘೋಷಣೆಯಾದ ಕಲಘಟಗಿ ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ಮೇವು ಸೇರಿದಂತೆ ಗ್ರಾಮಸ್ಥರಿಗೆ ಯಾವುದೇ ರೀತಿಯ ಸಮಸ್ಯೆ ಕಂಡುಬಂದಲ್ಲಿ ಗ್ರಾಮ ಮಟ್ಟದ ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕು" ಎಂದು ಸೂಚಿಸಿದರು.

ಜಿಲ್ಲಾಧಿಕಾರಿಗಳು ನೀರಸಾಗರ ಹಾಗೂ ಬೆಣಚಿ ಕೆರೆ ವೀಕ್ಷಣೆ ಮಾಡಿದರು. ಬೆಲವಂತರ, ಸೋಮನಕೊಪ್ಪ, ಮುಕ್ಕಲ ಗ್ರಾಮಗಳಿಗೆ ಭೇಟಿ ನೀಡಿ ನೀರು, ಮೇವು ಸ್ಥಿತಿಗತಿ ಬಗ್ಗೆ ಪರಿಶೀಲಿಸಿದರು.

ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿರುವ ಗ್ರಾಮಗಳಿಗೆ ಖಾಸಗಿ ಮಾಲೀಕರಿಂದ ಬೋರ್‌ವೆಲ್ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದ್ದು, 9 ಗ್ರಾಮ ಪಂಚಾಯತಿಯ 13 ಗ್ರಾಮಗಳಿಗೆ ಒಟ್ಟು 27 ಖಾಸಗಿ ಕೊಳವೆ ಬಾವಿಗಳ ಮೂಲಕ ಅಗತ್ಯ ನೀರು ಪೂರೈಸಲಾಗುತ್ತಿದೆ ಎಂದು ಹೇಳಿದರು.

ಕಲಘಟಗಿ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಬೆಣಚಿ ಕೆರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದಂತೆ ನಿಗಾ ವಹಿಸುವಂತೆ ಕಲಘಟಗಿ ಪಟ್ಟಣ ಪಂಚಾಯತಿಯ ಇಂಜಿನಿಯರ್ ಅಕ್ಕಮಹಾದೇವಿ ತಡಸ ಅವರಿಗೆ ತಿಳಿಸಿದರು.

24*7 ಯೋಜನೆಯಡಿ ಇನ್ನೂ ಎರಡು ಎತ್ತರದ ಟ್ಯಾಂಕ್‍ಗಳನ್ನು ನಿರ್ಮಿಸಲು ಟೆಂಡರ್ ಮಾಡಲಾಗಿದ್ದು, ಕಾಮಗಾರಿ ಪೂರ್ಣಗೊಂಡಲ್ಲಿ ಕಲಘಟಗಿ ಪಟ್ಟಣದ 17 ವಾರ್ಡ್‌ಗಳಿಗೆ ಪ್ರತಿದಿನ ನೀರು ಸರಬರಾಜು ಮಾಡಲಾಗುತ್ತದೆ ಎಂದು ಅಧಿಕಾರಿಗಳು ವಿವರಣೆ ನೀಡಿದರು.

ಕಲಘಟಗಿಯ ತಹಶೀಲ್ದಾರ್ ಕಚೇರಿಗೆ ಡಿಸಿ ಭೇಟಿ ನೀಡಿದರು. ಇ- ಆಫೀಸ್, ಚುನಾವಣೆ ವಿಭಾಗ ಹಾಗೂ ಇತರೆ ವಿಭಾಗಗಳನ್ನು ಪರಿಶೀಲಿಸಿದ ಅವರು ಸಾರ್ವಜನಿಕರ ಅಹವಾಲುಗಳನ್ನು ವಿಳಂಬ ಮಾಡದೆ 15-20 ದಿನಗಳಲ್ಲಿ ಇತ್ಯರ್ಥಗೊಳಿಸಬೇಕು ಎಂದರು.

ಚಿಕ್ಕ-ಚಿಕ್ಕ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಸಾರ್ವಜನಿಕರು ಅಲೆಯದಂತೆ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ಗ್ರಾಮ ಲೆಕ್ಕಾಧಿಕಾರಿಗಳಿಗೆ ಟ್ಯಾಬ್ ನೀಡುವ ಬಗ್ಗೆ ಯೋಚಿಸಲಾಗಿದೆ. ನೌಕರರು ಆಸಕ್ತಿಯಿಂದ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲು ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು. ತಹಶೀಲ್ದಾರ್ ಕಚೇರಿಯಲ್ಲಿ ಮಹಿಳಾ ವಿಶ್ರಾಂತಿ ಕೊಠಡಿಯನ್ನು ನಿರ್ಮಿಸುವಂತೆ ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣವರಗೆ ತಿಳಿಸಿದರು.

ನೀರಸಾಗರ ಜಲಾಶಯ ಭೇಟಿ: ಹುಬ್ಬಳ್ಳಿ ಹಾಗೂ ಕುಂದಗೋಳಕ್ಕೆ ಕುಡಿಯುವ ನೀರಿನ ಮೂಲವಾಗಿರುವ ನೀರಸಾಗರ ಜಲಾಶಯಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಭೇಟಿ ನೀಡಿದರು. ನೀರಿನ ಮಟ್ಟದ ಬಗ್ಗೆ ಜಲಮಂಡಳಿ ಹಾಗೂ ಕೆಯುಐಡಿಎಫ್‌ಸಿ ಸೂಪರಿಂಟೆಂಡೆಂಟ್ ಇಂಜಿನಿಯರ್ ತಿಮ್ಮಪ್ಪ ಅವರಿಂದ ಮಾಹಿತಿ ಪಡೆದುಕೊಂಡರು.

ಜಲಾಶಯದ ಒಟ್ಟು ಸಾಮರ್ಥ್ಯ 1.25 ಟಿಎಂಸಿ ಇದ್ದು, ಒಮ್ಮೆ ಸಂಪೂರ್ಣ ಭರ್ತಿಯಾದರೆ 2 ವರ್ಷದವರೆಗೆ ನೀರು ಸರಬರಾಜು ಮಾಡಬಹುದು. ಸದ್ಯ ಜಲಾಶಯದಲ್ಲಿ 0.28 ಟಿಎಂಸಿ ನೀರು ಸಂಗ್ರಹವಿದ್ದು, ಜೂನ್- ಜುಲೈವರೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ಜಲಮಂಡಳಿ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು. ಜಲಾಶಯದ ಸುತ್ತಲಿನ ಕೃಷಿಕರು ನೀರನ್ನು ಕೃಷಿ ಚಟುವಟಿಕೆಗಳಿಗೆ ಬಳಸದಂತೆ ನಿಗಾವಹಿಸಬೇಕು ಹಾಗೂ ಈ ಕುರಿತು ಗ್ರಾಮಗಳಲ್ಲಿ ಡಂಗುರ ಸಾರಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+