ಹುಬ್ಬಳ್ಳಿ ನಗರಕ್ಕೆ ಜೂನ್, ಜುಲೈ ತನಕ ನೀರಿನ ಸಮಸ್ಯೆ ಇಲ್ಲ
ಹುಬ್ಬಳ್ಳಿ, ಮಾರ್ಚ್ 27: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭೀಕರ ಬರ ಆವರಿಸಿದೆ. ಕುಡಿಯುವ ನೀರಿನ ಕೊರತೆ ಉಂಟಾಗಿದೆ. ಬೆಂಗಳೂರು ನಗರದಲ್ಲಿಯೇ ಸರಿಯಾಗಿ ಕುಡಿಯುವ ನೀರು ಸಿಗುತ್ತಿಲ್ಲ. ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿಯಲ್ಲಿ ಪರಿಸ್ಥಿತಿ ಹೇಗಿದೆ?.
ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಕಲಘಟಗಿ ಮತ್ತು ಹುಬ್ಬಳ್ಳಿಯಲ್ಲಿನ ಬರ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದರು. ಕುಡಿಯುವ ನೀರು, ಜಾನುವಾರುಗಳಿಗೆ ನೀರು ಪೂರೈಕೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

"ಬರಪೀಡಿತವೆಂದು ಘೋಷಣೆಯಾದ ಕಲಘಟಗಿ ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ಮೇವು ಸೇರಿದಂತೆ ಗ್ರಾಮಸ್ಥರಿಗೆ ಯಾವುದೇ ರೀತಿಯ ಸಮಸ್ಯೆ ಕಂಡುಬಂದಲ್ಲಿ ಗ್ರಾಮ ಮಟ್ಟದ ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕು" ಎಂದು ಸೂಚಿಸಿದರು.
ಜಿಲ್ಲಾಧಿಕಾರಿಗಳು ನೀರಸಾಗರ ಹಾಗೂ ಬೆಣಚಿ ಕೆರೆ ವೀಕ್ಷಣೆ ಮಾಡಿದರು. ಬೆಲವಂತರ, ಸೋಮನಕೊಪ್ಪ, ಮುಕ್ಕಲ ಗ್ರಾಮಗಳಿಗೆ ಭೇಟಿ ನೀಡಿ ನೀರು, ಮೇವು ಸ್ಥಿತಿಗತಿ ಬಗ್ಗೆ ಪರಿಶೀಲಿಸಿದರು.
ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿರುವ ಗ್ರಾಮಗಳಿಗೆ ಖಾಸಗಿ ಮಾಲೀಕರಿಂದ ಬೋರ್ವೆಲ್ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದ್ದು, 9 ಗ್ರಾಮ ಪಂಚಾಯತಿಯ 13 ಗ್ರಾಮಗಳಿಗೆ ಒಟ್ಟು 27 ಖಾಸಗಿ ಕೊಳವೆ ಬಾವಿಗಳ ಮೂಲಕ ಅಗತ್ಯ ನೀರು ಪೂರೈಸಲಾಗುತ್ತಿದೆ ಎಂದು ಹೇಳಿದರು.
ಕಲಘಟಗಿ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಬೆಣಚಿ ಕೆರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದಂತೆ ನಿಗಾ ವಹಿಸುವಂತೆ ಕಲಘಟಗಿ ಪಟ್ಟಣ ಪಂಚಾಯತಿಯ ಇಂಜಿನಿಯರ್ ಅಕ್ಕಮಹಾದೇವಿ ತಡಸ ಅವರಿಗೆ ತಿಳಿಸಿದರು.
24*7 ಯೋಜನೆಯಡಿ ಇನ್ನೂ ಎರಡು ಎತ್ತರದ ಟ್ಯಾಂಕ್ಗಳನ್ನು ನಿರ್ಮಿಸಲು ಟೆಂಡರ್ ಮಾಡಲಾಗಿದ್ದು, ಕಾಮಗಾರಿ ಪೂರ್ಣಗೊಂಡಲ್ಲಿ ಕಲಘಟಗಿ ಪಟ್ಟಣದ 17 ವಾರ್ಡ್ಗಳಿಗೆ ಪ್ರತಿದಿನ ನೀರು ಸರಬರಾಜು ಮಾಡಲಾಗುತ್ತದೆ ಎಂದು ಅಧಿಕಾರಿಗಳು ವಿವರಣೆ ನೀಡಿದರು.
ಕಲಘಟಗಿಯ ತಹಶೀಲ್ದಾರ್ ಕಚೇರಿಗೆ ಡಿಸಿ ಭೇಟಿ ನೀಡಿದರು. ಇ- ಆಫೀಸ್, ಚುನಾವಣೆ ವಿಭಾಗ ಹಾಗೂ ಇತರೆ ವಿಭಾಗಗಳನ್ನು ಪರಿಶೀಲಿಸಿದ ಅವರು ಸಾರ್ವಜನಿಕರ ಅಹವಾಲುಗಳನ್ನು ವಿಳಂಬ ಮಾಡದೆ 15-20 ದಿನಗಳಲ್ಲಿ ಇತ್ಯರ್ಥಗೊಳಿಸಬೇಕು ಎಂದರು.
ಚಿಕ್ಕ-ಚಿಕ್ಕ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಸಾರ್ವಜನಿಕರು ಅಲೆಯದಂತೆ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ಗ್ರಾಮ ಲೆಕ್ಕಾಧಿಕಾರಿಗಳಿಗೆ ಟ್ಯಾಬ್ ನೀಡುವ ಬಗ್ಗೆ ಯೋಚಿಸಲಾಗಿದೆ. ನೌಕರರು ಆಸಕ್ತಿಯಿಂದ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲು ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು. ತಹಶೀಲ್ದಾರ್ ಕಚೇರಿಯಲ್ಲಿ ಮಹಿಳಾ ವಿಶ್ರಾಂತಿ ಕೊಠಡಿಯನ್ನು ನಿರ್ಮಿಸುವಂತೆ ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣವರಗೆ ತಿಳಿಸಿದರು.
ನೀರಸಾಗರ ಜಲಾಶಯ ಭೇಟಿ: ಹುಬ್ಬಳ್ಳಿ ಹಾಗೂ ಕುಂದಗೋಳಕ್ಕೆ ಕುಡಿಯುವ ನೀರಿನ ಮೂಲವಾಗಿರುವ ನೀರಸಾಗರ ಜಲಾಶಯಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಭೇಟಿ ನೀಡಿದರು. ನೀರಿನ ಮಟ್ಟದ ಬಗ್ಗೆ ಜಲಮಂಡಳಿ ಹಾಗೂ ಕೆಯುಐಡಿಎಫ್ಸಿ ಸೂಪರಿಂಟೆಂಡೆಂಟ್ ಇಂಜಿನಿಯರ್ ತಿಮ್ಮಪ್ಪ ಅವರಿಂದ ಮಾಹಿತಿ ಪಡೆದುಕೊಂಡರು.
ಜಲಾಶಯದ ಒಟ್ಟು ಸಾಮರ್ಥ್ಯ 1.25 ಟಿಎಂಸಿ ಇದ್ದು, ಒಮ್ಮೆ ಸಂಪೂರ್ಣ ಭರ್ತಿಯಾದರೆ 2 ವರ್ಷದವರೆಗೆ ನೀರು ಸರಬರಾಜು ಮಾಡಬಹುದು. ಸದ್ಯ ಜಲಾಶಯದಲ್ಲಿ 0.28 ಟಿಎಂಸಿ ನೀರು ಸಂಗ್ರಹವಿದ್ದು, ಜೂನ್- ಜುಲೈವರೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ಜಲಮಂಡಳಿ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು. ಜಲಾಶಯದ ಸುತ್ತಲಿನ ಕೃಷಿಕರು ನೀರನ್ನು ಕೃಷಿ ಚಟುವಟಿಕೆಗಳಿಗೆ ಬಳಸದಂತೆ ನಿಗಾವಹಿಸಬೇಕು ಹಾಗೂ ಈ ಕುರಿತು ಗ್ರಾಮಗಳಲ್ಲಿ ಡಂಗುರ ಸಾರಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications