ರಸ್ತೆಗಿಳಿದ ಉತ್ತರ ಕರ್ನಾಟಕದ ಮೊದಲ ಸಂಚಾರಿ ಪ್ರಾಣಿ ಚಿಕಿತ್ಸಾಲಯ
ಹುಬ್ಬಳ್ಳಿ, ಸೆಪ್ಟೆಂಬರ್ 28: ಉತ್ತರ ಕರ್ನಾಟಕದ ಪ್ರಥಮ ಸಂಚಾರಿ ಪ್ರಾಣಿ ಚಿಕಿತ್ಸಾಲಯ ಲೋಕಾರ್ಪಣೆಗೊಂಡಿದೆ. ನಾಯಿ, ಬೆಕ್ಕು, ಬೀದಿ ಬದಿಯ ಪ್ರಾಣಿಗಳ ಸಂರಕ್ಷಣೆ, ಚಿಕಿತ್ಸೆಗೆ ಈ ಸಂಚಾರಿ ಚಿಕಿತ್ಸಾಲಯ ನೆರವಾಗಲಿದೆ.
ಸೋಮವಾರ ಹ್ಯುಮೇನ್ ಸೂಸೈಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆಯು ನೀಡಿರುವ ಸಂಚಾರಿ ಪ್ರಾಣಿ ಚಿಕಿತ್ಸಾಲಯವನ್ನು ಲೋಕಾರ್ಪಣೆ ಮಾಡಲಾಯಿತು. ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಸಮುದಾಯ ಪ್ರಾಣಿಗಳ ಆರೋಗ್ಯ ರಕ್ಷಣೆ ಲಸಿಕೆ ಮತ್ತು ಸಂತಾನೋತ್ಪತ್ತಿ ನಿಯಂತ್ರಣ ಮತ್ತಿತರ ತುರ್ತು ವೈದ್ಯಕೀಯ ಆರೈಕೆಗೆ ಇದು ಸಹಕಾರಿಯಾಗಲಿದೆ.
ಪಶು ಸಂಜೀವಿನಿ: ಜಾನುವಾರುಗಳ ತುರ್ತು ಚಿಕಿತ್ಸೆಗೆ ಮನೆ ಬಾಗಿಲಿಗೇ ಆಂಬ್ಯುಲೆನ್ಸ್ ಸೇವೆ
ಪ್ರಾಣಿಗಳಿಗೆ ತುರ್ತು ಚಿಕಿತ್ಸೆ ಒದಗಿಸಲು ನೀಡಿರುವ ಉತ್ತರ ಕರ್ನಾಟಕದ ಪ್ರಥಮ ಸಂಚಾರಿ ಪ್ರಾಣಿ ಚಿಕಿತ್ಸಾಲಯವನ್ನು ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ಲೋಕಾರ್ಪಣೆ ಮಾಡಿದರು.
ಪಶು ಕಿಸಾನ್ ಕ್ರೆಡಿಟ್ ಕಾರ್ಡ್: ಯಾವುದೇ ಖಾತರಿ ಇಲ್ಲದೆ ಸಬ್ಸಿಡಿ ಮತ್ತು ಸಾಲ ಪಡೆಯುವುದು ಸುಲಭ
"ನಾಯಿ, ಬೆಕ್ಕು, ಬೀದಿ ಪ್ರಾಣಿಗಳ ಸಂರಕ್ಷಣೆಗೆ ಈ ಚಿಕಿತ್ಸಾಲಯ ನೆರವಾಗಲಿದೆ. ಎಚ್ಎಸ್ಐ ಸಂಸ್ಥೆಯ ಈ ಕೊಡುಗೆ ಶ್ಲಾಘನೀಯವಾಗಿದೆ" ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಆಫ್ರಿಕಾ ಮೂಲದ ಜಾನುವಾರು ಜ್ವರ ತುಮಕೂರು ಜಿಲ್ಲೆಯಲ್ಲಿ ಪತ್ತೆ!
ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಪರಮೇಶ್ವರ ನಾಯಕ್ ಮಾತನಾಡಿ ಚಿಕಿತ್ಸಾಲಯದ ಬಗ್ಗೆ ಮಾಹಿತಿ ನೀಡಿದರು. "ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಈ ಸಂಚಾರಿ ಪ್ರಾಣಿ ಚಿಕಿತ್ಸಾಲಯ ಲಾಭದ ಉದ್ದೇಶವಿಲ್ಲದೆ ಪ್ರಾಣಿಗಳ ಸಂಕಷ್ಟಕ್ಕೆ ಸ್ಪಂದಿಸಲು ಮುಂದಾಗಿರುವುದು ಉತ್ತಮ ಬೆಳವಣಿಗೆಯಾಗಿದೆ" ಎಂದರು.
ಪಶು ಅಂಬ್ಯುಲೆನ್ಸ್ ಸೇವೆ : ಕರ್ನಾಟಕದಲ್ಲಿಯೇ ಮೊದಲ ಬಾರಿಗೆ ಸುಸಜ್ಜಿತ ಸಂಚಾರಿ ಪಶುಚಿಕಿತ್ಸಾ ಆಂಬುಲೆನ್ಸ್ ವಾಹನವನ್ನು ಹಾಸನದಲ್ಲಿ ಆರಂಭಿಸಲಾಗಿದೆ. ರೈತರ ಮನೆ ಬಾಗಿಲಲ್ಲಿ ರೋಗಗ್ರಸ್ತ ಜಾನುವಾರುಗಳಿಗೆ ತಜ್ಞ ಪಶುವೈದ್ಯಕೀಯ ಸೇವೆ ನೀಡಲಾಗುತ್ತದೆ.
ಈ ಅಂಬ್ಯಲೆನ್ಸ್ ವೆಚ್ಚ 15.58 ಲಕ್ಷ ರೂ.ಗಳಾಗಿದೆ. ಸಂಚಾರಿ ಪಶು ಶಸ್ತ್ರಚಿಕಿತ್ಸಾ ಅಂಬ್ಯುಲೆನ್ಸ್ ವಾಹನವನ್ನು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನಲ್ಲಿರುವ ಪಶುವೈದ್ಯಕೀಯ ಪಾಲಿಕ್ಲಿನಿಕ್ಗೆ ನೀಡಲಾಗಿದೆ.