ಮನೆ ಮಾಲೀಕರನ್ನು ವಿವಸ್ತ್ರಗೊಳಿಸಿ ಹಲ್ಲೆ, ದರೋಡೆ ಕೇಸ್: ಓರ್ವ ಅರೆಸ್ಟ್
ಹುಬ್ಬಳ್ಳಿ, ಡಿಸೆಂಬರ್ 29: ವಾಣಿಜ್ಯ ನಗರಿ ಎಂದು ಜನಪ್ರಿಯತೆ ಪಡೆದಿದರುವ ಹುಬ್ಬಳ್ಳಿಯಲ್ಲಿ ಇತ್ತೀಚಿಗೆ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ನಟೋರಿಯಸ್ ಕ್ರಿಮಿನಲ್ಗಳ ಗುಂಪು ಒಂಟಿ ಮನೆಗೆ ನುಗ್ಗಿ ಮನೆಯ ಮಾಲೀಕರನ್ನು ವಿವಸ್ತ್ರಗೊಳಿಸಿ ಹಿಗ್ಗಾ ಮುಗ್ಗಾ ಥಳಿಸಿ ದರೋಡೆ ಮಾಡಿರುವ ಅಮಾನವೀಯ ಕೃತ್ಯದ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿವೆ.
ಇದೀಗ ಆ ನಟೋರಿಯಸ್ ಗುಂಪಿನ ಒಬ್ಬ ಆರೋಪಿ ಪತ್ತೆಯಾಗಿದ್ದು, ಪೊಲೀಸರು ಫೈರಿಂಗ್ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಕಾಲು ಗಾಯಗೊಂಡಿರುವ ಆರೋಪಿಯನ್ನು ಸದ್ಯ ಚಿಕಿತ್ಸೆಗಾಗಿ ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಫೈರಿಂಗ್ ವೇಳೆ ಪೊಲೀಸ್ ಸಿಬ್ಬಂದಿಗೂ ಕೂಡ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಹುಬ್ಬಳ್ಳಿ-ಧಾರವಾಡ ಅವಳಿನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳು ಪೊಲೀಸ್ ಸಿಬ್ಬಂದಿ ಆರೋಗ್ಯ ವಿಚಾರಿಸಿದ್ದಾರೆ. ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ನವಲೂರಿನಲ್ಲಿ ಆರೋಪಿಗಳು ವಿಕಾಸ್ ಕುಮಾರ್ ಎನ್ನುವವರ ಮನೆ ದರೋಡೆಗೆ ಪ್ರಯತ್ನ ಪಟ್ಟಿದ್ದಾರೆ ಎಂದು ತಿಳಿಸಿದರು.
ವಿಕಾಸ್ ಕುಮಾರ್ ಎಸ್ಡಿಎಂನಲ್ಲಿ ಮೆಡಿಕಲ್ ಸ್ಟಾಫ್ ಆಗಿದ್ದಾರೆ. ಹೊರವಲಯದಲ್ಲಿರುವ ಅವರ ಮನೆಗೆ ನುಗ್ಗಿದ ಡಕಾಯಿತೆಗೆ ಯತ್ನಿಸಿದ್ದರು. ಈ ಘಟನೆ ನಡೆದ ಕೂಡಲೇ ರೌಂಡ್ಸ್ ನಲ್ಲಿದ್ದ ಸಿಬ್ಬಂದಿ ಸ್ಥಳಕ್ಕೆ ಹೋಗಿದ್ದಾರೆ. ಆಗ ಪಾಲಾ ವೆಂಕಟೇಶ್ವರ ಅಲಿಯಾಸ್ ಕಲ್ಯಾಣ್ ಕುಮಾರ್ ಎಂಬಾತ ಸೆರೆ ಸಿಕ್ಕಿದ್ದಾನೆ. ಆತನೊಂದಿಗೆ ಮೂರನಾಲ್ಕು ಜನ ಬಂದಿದ್ದರು ಎಂಬ ಮಾಹಿತಿ ವಿಚಾರಣೆ ವೇಳೆ ಬಹಿರಂಗವಾಗಿದೆ ಎಂದು ತಿಳಿಸಿದರು.
ಆರೋಪಿಗಳು ಸೇರುವ ಮಾಹಿತಿ ಮೇರೆಗೆ ಇಂಡಸ್ಟ್ರಿಯಲ್ ಏರಿಯಾಕ್ಕೆ ಹೋಗಿದ್ದೇವು. ಈ ವೇಳೆ ದರೋಡೆಕೋರರ ಗುಂಪು ಏಕಾಏಕಿ ಹಲ್ಲೆ ಮಾಡಲು ಯತ್ನಿಸಿ, ತಪ್ಪಿಸಿಕೊಂಡು ಹೋಗಲು ಪ್ರಯತ್ನ ಪಟ್ಟಿತು. ಆಗ ಸ್ಥಳದಲ್ಲೇ ಇದ್ದ ಪಿಎಸ್ಐ ಪ್ರಮೋದ್ ಆತ್ಮ ರಕ್ಷಣೆಗಾಗಿ ಎರಡು ಸುತ್ತಿನ ಫೈರಿಂಗ್ ಮಾಡಿದ್ದಾರೆ. ಈ ವೇಳೆ ದರೋಡೆಕೋರ ಪಾಲಾ ವೆಂಕಟೇಶ್ವರ ಅಲಿಯಾಸ್ ಕಲ್ಯಾಣ್ ಕುಮಾರ್ನ ಎರಡು ಕಾಲಿಗೆ ಗುಂಡು ತಾಗಿ ಸ್ಥಳದಲ್ಲೇ ಬಿದ್ದಿದ್ದಾನೆ. ಆತನನ್ನು ಕೂಡಲೇ ಅಲ್ಲಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದರು.

ಒಂಟಿ ಮನೆಗಳೇ ದರೋಡೆಕೋರರ ಟಾರ್ಗೆಟ್
ಜೂನ್ 6ರಂದು ಅಶೋಕ ಕದಂ ಮನೆಗೆ ನುಗ್ಗಿ ಅಟ್ಟಹಾಸ ಮೆರೆದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನಟೋರಿಯಸ್ ಕ್ರಿಮಿನಲ್ ಪಾಲಾ ವೆಂಕಟೇಶ್ವರರಾವ್ ಮೂಲತಃ ಆಂಧ್ರಪ್ರದೇಶ ಮೂಲದವನು ಎಂದು ತಿಳಿದು ಬಂದಿದೆ. ಒಂಟಿ ಮನೆಗಳನ್ನೇ ಈ ದರೋಡೆಕೋರರು ಟಾರ್ಗೆಟ್ ಮಾಡಿ, ಮನೆಯವರನ್ನೆಲ್ಲಾ ಮನಸೋಇಚ್ಛೋ ಹೊಡೆದು ಹಲ್ಲೆ ಮಾಡುತ್ತಾರೆ ಆ ಬಳಿಕ ದರೋಡೆ ಮಾಡುತ್ತಾರೆ ಎಂದು ತಿಳಿದುಬಂದಿದೆ.
ನಟೋರಿಯಸ್ ಕ್ರಿಮಿನಲ್ಗಳ ಭಯಾನಕ ಕೃತ್ಯದ ದೃಶ್ಯಗಳು ಲಭ್ಯವಾಗಿವೆ. ಆರೋಪಿಗಳು ಕಳೆದ ಹಲವು ತಿಂಗಳುಗಳಿಂದ ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಭಯಾನಕತೆ ಸೃಷ್ಠಿ ಮಾಡಿದ್ದಾರೆ. ಇದನ್ನೇ ಕಸಬು ಮಾಡಿಕೊಂಡಿದ್ದ ಕ್ರಿಮಿನಲ್ ನಟೋರಿಯಸ್ಗಳ ಗ್ಯಾಂಗ್ ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಇದೇ ರೀತಿ ಭಯದ ವಾತಾವಾರಣ ಸೃಷ್ಟಿಸಿದ್ದಾರೆ. ಇವರೆಲ್ಲಾ ಒಂದೇ ಮನೆಯ ಸದಸ್ಯರು ಎಂದು ಹೇಳಲಾಗುತ್ತಿದ್ದು, ಸದ್ಯ ಓರ್ವ ದರೋಡೆಕೋರನ ಬಂಧನವಾಗಿದೆ.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ











Click it and Unblock the Notifications