NWKRTC bus accident: ಅನ್ನದಾತನಿಗೆ ₹25 ಲಕ್ಷ ಪರಿಹಾರಕ್ಕೆ ಆಗ್ರಹ
ಹುಬ್ಬಳ್ಳಿ, ಜುಲೈ 19: ತಾಲೂಕಿನ ಕುಸಗಲ್ ಬಳಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ (NWKRTC) ಚಾಲಕನ ರೀಲ್ಸ್ ಹುಚ್ಚಿಗೆ ಚಕ್ಕಡಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಚಕ್ಕಡಿಯಲ್ಲಿದ್ದ ರೈತರಿಗೆ ಗಂಭೀರ ಗಾಯಗಳಾಗಿವೆ. ಎರಡು ಎತ್ತುಗಳೂ ಸ್ಥಳದಲ್ಲೇ ಸಾವನ್ನಪ್ಪಿವೆ. ಸಂತ್ರಸ್ತರಿಗೆ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕು ಎಂಬ ಆಗ್ರಹ ಕೇಳಿ ಬಂದಿದೆ.
ಹೌದು, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ (NWKRTC) ಹುಬ್ಬಳ್ಳಿಯಿಂದ ಬಾಗಲಕೋಟೆ ಕಡೆ ಹೊರಟಿತ್ತು. ಬಸ್ ಚಾಲಕ ನಿಯಮ ಮೀರಿ ಮೊಬೈಲ್ ನಲ್ಲಿ ರೀಲ್ಸ್ ಮಾಡಿಕೊಂಡು ವಾಹನ ಚಲಾಯಿಸುತ್ತಿದ್ದ. ಈ ವೇಳೆ ಎದುರಿಗೆ ರಸ್ತೆಯಲ್ಲಿ ಹೊರಟಿದ್ದ ಚಕ್ಕಡಿಗೆ ಹಿಂದಿನಿಂದ ಗುದ್ದಿದ್ದ ಘಟನೆ ಬುಧವಾರ ನಡೆದಿತ್ತು.

ಘಟನೆಗೆ ಪ್ರತಿಕ್ರಿಯಿಸಿ ಮಾತನಾಡಿದ, ರತ್ನ ಭಾರತ ರೈತ ಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಹೇಮನಗೌಡರ ಬಸನಗೌಡರ ಅವರು, ಸರ್ಕಾರಿ ಬಸ್ ಚಾಲಕನ ಹುಚ್ಚಾಟದಿಂದ ರೈತನ ಎರಡು ಎತ್ತು ಮೃತಪಟ್ಟಿವೆ. ರೈತನಿಗೆ ಗಂಭೀರ ಗಾಯವಾಗಿದೆ.
ಕೂಡಲೇ ಬಸ್ ಚಾಲಕನ ಮೇಲೆ ಕ್ರಮ ಕೈಗೊಳ್ಳಬೇಕು.
ಗಾಯಾಳು ರೈತನಿಗೆ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕು. ಚಕ್ಕಡಿಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ಎತ್ತುಗಳು ಸಾವು ಆಗಿದೆ. ರೈತ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾನೆ. ಸರ್ಕಾರಿ ನೌಕರನ ಬೇಜವಾಬ್ದಾರಿ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇಂತಹ ಸಿಬ್ಬಂದಿ ವಿರುದ್ಧ ಸಾರಿಗೆ ನಿಗಮ ಕ್ರಮ ಕೈಗೊಳ್ಳಲಿ
ಬಸ್ ಡ್ರೈವರ್ ಚಾಲನಾ ಸಂದರ್ಭದಲ್ಲಿ ಮೊಬೈಲ್ ಉಪಯೋಗ ಆಗಿದೆ. ರೀಲ್ಸ್ ವಿಡಿಯೋ ಮಾಡುವಾಗ ರಸ್ತೆಯಲ್ಲಿ ಬಸ್ಸಿನ ಮುಂದೆ ಇದ್ದ ಚಕ್ಕಡಿ ಕಾಣದೇ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಅನ್ನದಾತನಿಗೆ ಆಧಾರವಾಗಿದ್ದ ಎರಡು ಎತ್ತುಗಳು ಬಲಿಯಾಗಿವೆ.
ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾರಿಗೆ ಸಿಬ್ಬಂದಿ ಬೇಜಾಬ್ದಾರಿತನ ಹೆಚ್ಚಾಗುತ್ತಿದೆ. ಸಾರಿಗೆ ಅಧಿಕಾರಿಗಳು ಇಂತಹ ಸಿಬ್ಬಂದಿ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ರೈತರು ಕೃಷಿ ಚಟುವಟಿಕೆಗಾಗಿ ರಸ್ತೆಯಲ್ಲಿ ಹೋಗಲು ಸಹ ಆಗುತ್ತಿಲ್ಲ ಎಂದು ಅವರು ದೂರಿದರು.
ರಾಜೀ ಇಲ್ಲದೇ ತನಿಖೆ ಮಾಡಿ: ಹೋರಾಟ ಎಚ್ಚರಿಕೆ
ಇನ್ನೂ ಸದರಿ ಪ್ರಕರಣ ಸಂಬಂಧ ಯಾವುದೇ ಕಾರಣಕ್ಕೋ ರಾಜೀ ಮಾಡಿಕೊಳ್ಳದೇ ತನಿಖೆ ನಡೆಸಿ ಪರಿಹಾರ ಕ್ರಮ ಕೈಗೊಳ್ಳಬೇಕು. ಮೇಲಿಂದ ಮೇಲೆ ರೈತರಿಗೆ ತೊಂದರೆ ಆಗುತ್ತಿದೆ. ರೈತರಿಗೆ, ಸಾರ್ವಜನಿಕರಿಗೆ ಬಸ್ಗಳಿಂದ, ಚಾಲಕರಿಂದ ತೊಂದರೆ ಆಗದಂತೆ ನಿಗಮದ ಮೇಲಾಧಿಕಾರಿಗಳು ಗಮನ ಹರಿಸಬೇಕು. ನಮ್ಮ ಮನವಿ ನಿರ್ಲಕ್ಷಿಸಿದರೆ, ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications