NWKRTC: ಶಕ್ತಿ ಯೋಜನೆಗೆ 1 ವರ್ಷ ಪೂರ್ಣ, ಶೂನ್ಯ ಟಿಕೆಟ್ ಮೊತ್ತ ₹1352.68 ಕೋಟಿ, ಅಪ್ಡೇಟ್ಸ್
ಹುಬ್ಬಳ್ಳಿ, ಜೂನ್ 11: ಕರ್ನಾಟಕದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ ಒಂದಾದ ಶಕ್ತಿ ಯೋಜನೆ ಜಾರಿಯಾಗಿ ಒಂದು ವರ್ಷ (ಜೂನ್ 11) ಪೂರ್ಣಗೊಂಡಿದೆ. ಯೋಜನೆಯಿಂದ ರಾಜ್ಯದ ಮಹಿಳೆಯರು ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
ಈ ಅವಧಿಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಬಸ್ಗಳಲ್ಲಿ 52.12 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಶೂನ್ಯ ಟಿಕೆಟ್ ಮೊತ್ತ 1352.68 ಕೋಟಿ ರೂ. ಗಳಾಗಿವೆ ಎಂದು NWKRTC ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ಮಾಹಿತಿ ನೀಡಿದ್ದಾರೆ.

ಶಕ್ತಿ ಯೋಜನೆಯು 2023ರ ಜೂನ್ 11ರಂದು ಜಾರಿಗೆ ಬಂದಿರುತ್ತದೆ. ರಾಜ್ಯದ ರಹವಾಸಿಯಾಗಿರುವ ಮಹಿಳೆಯರು (ಲಿಂಗತ್ವ ಅಲ್ಪಸಂಖ್ಯಾತರೂ ಸೇರಿ) ಹಾಗೂ ವಿದ್ಯಾರ್ಥಿನಿಯರು ಸಂಸ್ಥೆಯ ನಗರ, ಉಪನಗರ, ಸಾಮಾನ್ಯ, ವೇಗದೂತ ಸಾರಿಗೆಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಹಾಗೂ ಆಯ್ದ ಅಂತರ ರಾಜ್ಯ ವೇಗದೂತ ಸಾರಿಗೆಗಳಲ್ಲಿ ರಾಜ್ಯದ ಗಡಿಯವರೆಗೆ ಉಚಿತವಾಗಿ ಪ್ರಯಾಣಿಸುವ ಯೋಜನೆ ಇದಾಗಿದೆ.
ಈ ಭಾಗದಲ್ಲಿ ಸಾರಿಗೆ ನಿಗಮದ ಬಸ್ಗಳಲ್ಲಿ ನಿತ್ಯ ಸರಾಸರಿ 14.28 ಲಕ್ಷ ಮಹಿಳಾ ಪ್ರಯಾಣಿಕರು ಸಂಸ್ಥೆಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.
ನಿಗಮಕ್ಕೆ ಶಕ್ತಿ ಯೋಜನೆ ಕೋಟ್ಯಂತರ ಹಣ ಪಾವತಿ ಬಾಕಿ
ಶಕ್ತಿ ಯೋಜನೆ, ಮಹಿಳೆಯರಿಗೆ ಉಚಿತ ಪ್ರಯಾಣವು ರಾಜ್ಯ ನಾಲ್ಕು ಸಾರಿಗೆ ನಿಗಮಕ್ಕೆ ಅನ್ವಯವಾಗುತ್ತದೆ. ಈ ಪೈಕಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಯ ಎಲ್ಲ ಬಸ್ಗಳಲ್ಲಿ ಲಕ್ಷಾಂತರ ಮಂದಿ ಸಂಚಾರ ಮಾಡಿದ್ದಾರೆ. ಉಚಿತವಾಗಿ ನೀಡಿದ್ದ ಟಿಕೆಟ್ಗಳ ಕೋಟ್ಯಾಂತರ ರೂಪಾಯಿ ಹಣವನ್ನು ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿದೆ.
ಹೌದು, ಯೋಜನೆ ಜಾರಿ ಆದಾಗಿನಿಂದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಮಾಸಿಕವಾಗಿ ಇಂತಿಷ್ಟು ಹಣ ನೀಡುತ್ತಿರುವ ಸರ್ಕಾರ ಬರೋಬ್ಬರಿ 298 ಕೋಟಿ ರೂಪಾಯಿ ಹಣ ನೀಡಬೇಕಿದೆ. ಆದರೆ ನೀಡಲ್ಲ. ಇದರಿಂದ ನಿಗಮದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆ ಆಗುತ್ತಿದೆ ಎಂದು ತಿಳಿದು ಬಂದಿದೆ.
ನಿಗಮದ ಅಧಿಕಾರಿಗಳೂ ಖುಷಿ ಪಡಬೇಕಾದ ವಿಷಯವೆಂದರೆ, ಮಾಸಿಕವಾಗಿ ಶಕ್ತಿ ಯೋಜನೆಯಡಿ ಪಾವತಿಸಬೇಕಾದ ಹಣದಲ್ಲಿ ಸರ್ಕಾರ ಏರಿಕೆ ಮಾಡಿದೆ.
-
Viral Post: ವಿಮಾನದ ಸೀಟುಗಳ ತುಂಬಾ ಕಸದ ರಾಶಿ: ಪ್ರಯಾಣಿಕರ 'ಸಿವಿಕ್ ಸೆನ್ಸ್' ಪ್ರಶ್ನಿಸಿದ ಮಹಿಳೆ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications