NWKRTC: ಶಕ್ತಿ ಯೋಜನೆಗೆ 1 ವರ್ಷ ಪೂರ್ಣ, ಶೂನ್ಯ ಟಿಕೆಟ್ ಮೊತ್ತ ₹1352.68 ಕೋಟಿ, ಅಪ್ಡೇಟ್ಸ್
ಹುಬ್ಬಳ್ಳಿ, ಜೂನ್ 11: ಕರ್ನಾಟಕದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ ಒಂದಾದ ಶಕ್ತಿ ಯೋಜನೆ ಜಾರಿಯಾಗಿ ಒಂದು ವರ್ಷ (ಜೂನ್ 11) ಪೂರ್ಣಗೊಂಡಿದೆ. ಯೋಜನೆಯಿಂದ ರಾಜ್ಯದ ಮಹಿಳೆಯರು ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
ಈ ಅವಧಿಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಬಸ್ಗಳಲ್ಲಿ 52.12 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಶೂನ್ಯ ಟಿಕೆಟ್ ಮೊತ್ತ 1352.68 ಕೋಟಿ ರೂ. ಗಳಾಗಿವೆ ಎಂದು NWKRTC ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ಮಾಹಿತಿ ನೀಡಿದ್ದಾರೆ.

ಶಕ್ತಿ ಯೋಜನೆಯು 2023ರ ಜೂನ್ 11ರಂದು ಜಾರಿಗೆ ಬಂದಿರುತ್ತದೆ. ರಾಜ್ಯದ ರಹವಾಸಿಯಾಗಿರುವ ಮಹಿಳೆಯರು (ಲಿಂಗತ್ವ ಅಲ್ಪಸಂಖ್ಯಾತರೂ ಸೇರಿ) ಹಾಗೂ ವಿದ್ಯಾರ್ಥಿನಿಯರು ಸಂಸ್ಥೆಯ ನಗರ, ಉಪನಗರ, ಸಾಮಾನ್ಯ, ವೇಗದೂತ ಸಾರಿಗೆಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಹಾಗೂ ಆಯ್ದ ಅಂತರ ರಾಜ್ಯ ವೇಗದೂತ ಸಾರಿಗೆಗಳಲ್ಲಿ ರಾಜ್ಯದ ಗಡಿಯವರೆಗೆ ಉಚಿತವಾಗಿ ಪ್ರಯಾಣಿಸುವ ಯೋಜನೆ ಇದಾಗಿದೆ.
ಈ ಭಾಗದಲ್ಲಿ ಸಾರಿಗೆ ನಿಗಮದ ಬಸ್ಗಳಲ್ಲಿ ನಿತ್ಯ ಸರಾಸರಿ 14.28 ಲಕ್ಷ ಮಹಿಳಾ ಪ್ರಯಾಣಿಕರು ಸಂಸ್ಥೆಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.
ನಿಗಮಕ್ಕೆ ಶಕ್ತಿ ಯೋಜನೆ ಕೋಟ್ಯಂತರ ಹಣ ಪಾವತಿ ಬಾಕಿ
ಶಕ್ತಿ ಯೋಜನೆ, ಮಹಿಳೆಯರಿಗೆ ಉಚಿತ ಪ್ರಯಾಣವು ರಾಜ್ಯ ನಾಲ್ಕು ಸಾರಿಗೆ ನಿಗಮಕ್ಕೆ ಅನ್ವಯವಾಗುತ್ತದೆ. ಈ ಪೈಕಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಯ ಎಲ್ಲ ಬಸ್ಗಳಲ್ಲಿ ಲಕ್ಷಾಂತರ ಮಂದಿ ಸಂಚಾರ ಮಾಡಿದ್ದಾರೆ. ಉಚಿತವಾಗಿ ನೀಡಿದ್ದ ಟಿಕೆಟ್ಗಳ ಕೋಟ್ಯಾಂತರ ರೂಪಾಯಿ ಹಣವನ್ನು ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿದೆ.
ಹೌದು, ಯೋಜನೆ ಜಾರಿ ಆದಾಗಿನಿಂದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಮಾಸಿಕವಾಗಿ ಇಂತಿಷ್ಟು ಹಣ ನೀಡುತ್ತಿರುವ ಸರ್ಕಾರ ಬರೋಬ್ಬರಿ 298 ಕೋಟಿ ರೂಪಾಯಿ ಹಣ ನೀಡಬೇಕಿದೆ. ಆದರೆ ನೀಡಲ್ಲ. ಇದರಿಂದ ನಿಗಮದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆ ಆಗುತ್ತಿದೆ ಎಂದು ತಿಳಿದು ಬಂದಿದೆ.
ನಿಗಮದ ಅಧಿಕಾರಿಗಳೂ ಖುಷಿ ಪಡಬೇಕಾದ ವಿಷಯವೆಂದರೆ, ಮಾಸಿಕವಾಗಿ ಶಕ್ತಿ ಯೋಜನೆಯಡಿ ಪಾವತಿಸಬೇಕಾದ ಹಣದಲ್ಲಿ ಸರ್ಕಾರ ಏರಿಕೆ ಮಾಡಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications