NWKRTC Bus: ಉಳವಿ ಚನ್ನಬಸವೇಶ್ವರ ಜಾತ್ರೆಗೆ ವಿಶೇಷ ಬಸ್ ವ್ಯವಸ್ಥೆ, ವೇಳಾಪಟ್ಟಿ
ಹುಬ್ಬಳ್ಳಿ, ಫೆಬ್ರವರಿ 08: ಉತ್ತರ ಕರ್ನಾಟಕ ಭಾಗದ ಸಾಕಷ್ಟು ಜನರು ಉಳವಿ ಶ್ರೀ ಚನ್ನಬಸವೇಶ್ವರ ಜಾತ್ರೆಗೆ ಪ್ರತಿ ವರ್ಷದಂತೆ ಈ ವರ್ಷವು ತೆರಳಲಿದ್ದಾರೆ. ಇಲ್ಲಿ ಅದ್ಧೂರಿ ಜಾತ್ರೆಗೆ ದೇವಸ್ಥಾನದ ಅಡಳಿತ ಮಂಡಳಿ ಸಜ್ಜಾಗಿದೆ. ಸಹಸ್ರಾರು ಭಕ್ತರು ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಲಿದ್ದಾರೆ. ಈ ಕಾರಣದಿಂದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ವಿಶೇಷ ಬಸ್ ಗಳ ವ್ಯವಸ್ಥೆ ಮಾಡಿದೆ. ಪ್ರಯಾಣಿಕರು ಸೇರಿದಂತೆ ಭಕ್ತರ ಸಂಚಾರಕ್ಕೆ ಅನುಕೂಲ ಒದಗಿಸಲು ಈ ಸೇವೆ ಆರಂಭಿಸಿದೆ.
ಉಳವಿ ಶ್ರೀ ಚನ್ನಬಸವೇಶ್ವರ ಭಕ್ತರು ಮತ್ತು ಜರನ ಅನುಕೂಲಕ್ಕಾಗಿ ಇದೇ ಫೆಬ್ರವರಿ 11 ರಿಂದ 16 ರವರೆಗೆ ಉಳವಿಗೆ ಜಾತ್ರೆ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಈ ಆಯ್ದ ದಿನಗಳಲ್ಲಿ ನಿತ್ಯ ಹುಬ್ಬಳ್ಳಿಯಿಂದ ಉಳವಿಗೆ ಬಸ್ಗಳು ಕಾರ್ಯಾಚರಣೆ ನಡೆಸಲಿವೆ ಎಮದು NWKRTC ಹುಬ್ಬಳ್ಳಿ ಘಟಕದ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಮಾಹಿತಿ ನೀಡಿದರು.

ಉತ್ತರ ಕನ್ನಡ ಜಿಲ್ಲೆಯ ಉಳವಿ ಶ್ರೀ ಚನ್ನಬಸವೇಶ್ವರ ಜಾತ್ರೆಯು ಫೆಬ್ರವರಿ 11ರಿಂದ 16ರವರೆಗೆ ವೈಭವದಿಂದ ಜರುಗಲಿದೆ. ಫೆ. 13ರಂದು ಗುರುವಾರ ರಥೋತ್ಸವ ನಡೆಯಲಿದ್ದು, ಅಂದು ಅಸಂಖ್ಯಾತ ಜನರು ಆಗಮಿಸುವ ಸಾಧ್ಯತೆ ಇದೆ. ಮೂರು ನಾಲ್ಕು ದಿನ ಅದ್ಧೂರಿ ಜಾತ್ರ ಜರುಗಲಿದೆ. ಈ ಜಾತ್ರೆಗೆ ಹುಬ್ಬಳ್ಳಿ-ಧಾರವಾಡ ಅವಳಿನಗರ ಹಾಗೂ ಸುತ್ತಮುತ್ತಲಿನ ಊರುಗಳು, ಅಕ್ಕ ಪಕ್ಕದ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಲಿದ್ದಾರೆ.
ರಥೋತ್ಸವದ ಮುನ್ನಾ ದಿನಗಳಿಂದ ಆರಂಭವಾಗಿ ನಂತರದ ದಿನಗಳಂದು ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳ ಪ್ರಯಾಣ ನಿರೀಕ್ಷಿಸಲಾಗಿದೆ. ಉಳವಿ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸಾರ್ವಜನಿಕರ ಬೇಡಿಕೆಯ ಮೇರೆಗೆ ಭಕ್ತಾದಿಗಳು ಜಾತ್ರೆಗೆ ಸುಗಮವಾಗಿ ಹೋಗಿ ಬರಲು ಅನುಕೂಲವಾಗುವಂತೆ ಫೆ.11 ರಿಂದ ಒಟ್ಟು ಆರು ದಿನಗಳ ಕಾಲ ಹುಬ್ಬಳ್ಳಿಯಿಂದ ಉಳವಿಗೆ ನೇರವಾಗಿ ಜಾತ್ರೆ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.
ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಪ್ರಯಾಣ
ಈ ಜಾತ್ರೆಯ ವಿಶೇಷ ಬಸ್ಸುಗಳು ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಸಂಚಾರ ಆರಂಭಿಸುತ್ತವೆ. ಹುಬ್ಬಳ್ಳಿಯಿಂದ ಧಾರವಾಡ, ಹಳಿಯಾಳ, ದಾಂಡೇಲಿ ಮಾರ್ಗವಾಗಿ ಆರು ದಿನಗಳ ಕಾಲ ಸಂಚರಿಸಲಿವೆ ಎಂದು ಅವರು ವಿವರಿಸಿದರು.
ಘಟಕದಿಂದ ಒಟ್ಟು 42 ಬಸ್ ಗಳು, 90 ಚಾಲಕರು- ನಿರ್ವಾಹಕರು, ಮೇಲ್ವಿಚಾರಣೆಗಾಗಿ 6 ಅಧಿಕಾರಿಗಳು ಹಾಗೂ 14 ಸಿಬ್ಬಂದಿಗಳನ್ನು ನಿಯೋಜಿಲಾಗಿದೆ. ಪ್ರಯಾಣಿಕರ ದಟ್ಟಣೆಗೆ ತಕ್ಕಂತೆ ಬಸ್ಸುಗಳನ್ನು ಹೆಚ್ಚಿಸಲಾಗುವುದು. ಹೆಚ್ಚಿನ ಮಾಹಿತಿಗೆ 77609 91682 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಅಧಿಕಾರಿ ರಾಮನಗೌಡರ ತಿಳಿಸಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications