ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ ಸ್ಥಗಿತ
ಹುಬ್ಬಳ್ಳಿ, ಸೆಪ್ಟೆಂಬರ್ 20: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ನೇಮಕಾತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. 2019ರ ಡಿಸೆಂಬರ್ನಲ್ಲಿ ಹೊರಡಿಸಲಾಗಿದ್ದ ನೇಮಕಾತಿ ಅಧಿಸೂಚನೆಗೆ ತಡೆ ನೀಡಲಾಗಿದೆ.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಡಿಸೆಂಬರ್ 10ರಂದು ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ ಹುದ್ದೆಗಳನ್ನು ನೇರ ನೇಮಕಾತಿಗೆ ಜಾಹೀರಾತು ನೀಡಿತ್ತು. ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಕರ್ನಾಟಕ ಜಾನಪದ ವಿವಿ ನೇಮಕಾತಿ; ಸೆ.30ರ ತನಕ ಅರ್ಜಿ ಹಾಕಿ
ಈಗಾಗಲೇ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಆದರೆ, ಮುಂದಿನ ನೇಮಕಾತಿ ಪ್ರಕ್ರಿಯೆಯನ್ನು ಸರ್ಕಾರದ ಆದೇಶದಂತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನೇಮಕಾತಿ ಪ್ರಕ್ರಿಯೆಯ ಮುಂದಿನ ಹಂತದ ಮಾಹಿತಿಯನ್ನು ಬಳಿಕ ತಿಳಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಯುಪಿಎಸ್ಸಿ ನೇಮಕಾತಿ 2020: 194ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರ ವಿವಿಧ ಇಲಾಖೆಗಳ ನೇಮಕಾತಿಗೆ ತಾತ್ಕಾಲಿಕ ತಡೆ ನೀಡಿದೆ. ಅರ್ಜಿಗಳನ್ನು ಕರೆದಿದ್ದರೂ ಸಹ ಮಂದಿನ ಪ್ರಕ್ರಿಯೆ ನಡೆಸದಂತೆ ಸೂಚಿಸಿದೆ ಈ ಹಿನ್ನಲೆಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೇಮಕಾತಿಗೂ ತಡೆ ಸಿಕ್ಕಿದೆ.
Recommended Video
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಅತಿಥಿ ಉಪನ್ಯಾಸಕರ ನೇಮಕಾತಿ