NWKRTC: ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ವಿತರಣೆ, ಗಮನಿಸಿ
ಬೆಂಗಳೂರು, ಜೂನ್ 02: ಪ್ರಸಕ್ತ ಶೈಕ್ಷಣಿಕ ಸಾಲಿನ (2024-25) ಸಾಲಿನ ಶೈಕ್ಷಣಿಕ ವರ್ಷದ ಅವಧಿಗೆ ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ವಿತರಣೆ ಪ್ರಕ್ರಿಯೆ ಆರಂಭಿಸಲಾಗಿದೆ. ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಬಸ್ ಪಾಸ್ ಪಡೆಯಬಹುದಾಗಿದೆ.
ಈ ಕುರಿತು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ ಮಾಹಿತಿ ನೀಡಿದರು.

ಪ್ರಸಕ್ತ ಶೈಕ್ಷಣಿಕ ವರ್ಷದ ಅವಧಿಗೆ ಶಾಲೆಗಳು ಮತ್ತು ಪದವಿಪೂರ್ವ ಕಾಲೆಜು ತರಗತಿಗಳು ಆರಂಭವಾಗಿರುವ ಪ್ರಯುಕ್ತ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ (ಇಡಿಸಿಎಸ್) ಸಹಯೋಗದಲ್ಲಿ ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ.
ಸೇವಾ ಸಿಂಧು ಪೂರ್ಟಲ್ ಮೂಲಕ ಅರ್ಜಿ ಸಲ್ಲಿಕೆ
ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕು. URL-http://sevasindhuservices.karnataka.gov.in/buspassservices ಮೂಲಕ ಕೂಡಲೇ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳು ಅಗತ್ಯ ದಾಖಲೆಗಳಾದ ಆಧಾರ್ ಕಾರ್ಡ್, ಶಾಲಾ-ಕಾಲೇಜು ಶುಲ್ಕ ಪಾವತಿ ರಶೀದಿ, ಘೋಷಣಾ ಪತ್ರ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಪ್ರಮಾಣಪತ್ರ ಸಹಿತ ಅರ್ಜಿ ಸಲ್ಲಿಸಬೇಕು.
ಸೇವಾಸಿಂಧು ಪೋರ್ಟಲ್ ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಹುಬ್ಬಳ್ಳಿ-ಧಾರವಾಡ ಇನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳ ಮೂಲಕವೂ ಸಲ್ಲಿಸಬಹುದು. ರೂ.30ಶುಲ್ಕ ವಿಧಿಸಲಾಗುತ್ತದೆ ಎಂದು ತಿಳಿಸಿದರು.

ಅರ್ಜಿ ಅನುಮೋದನೆಯಾದ ನಂತರ ಪಾಸ್ ಪಡೆಯಲು ಭೇಟಿ ನೀಡಬೇಕಾದ ಕರ್ನಾಟಕ ಒನ್ ಕೇಂದ್ರದ ಮಾಹಿತಿಯನ್ನು ವಿದ್ಯಾರ್ಥಿಯ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ. ಸದರಿ ಕೇಂದ್ರದಲ್ಲಿ ನಿಗಧಿತ ಶುಲ್ಕವನ್ನು ಪಾವತಿಸಿ ಬಸ್ ಪಾಸ್ ಪಡೆಯಬಹುದಾಗಿದೆ. ಶುಲ್ಕವನ್ನು ನಗದು,ಕ್ರೆಡಿಟ್ ಕಾರ್ಡ್,ಡೆಬಿಟ್ ಕಾರ್ಡ್ ಅಥವಾ ಯುಪಿಐ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.
ಪಾಸ್ ವಿತರಣೆ ಕೇಂದ್ರಗಳ ಮಾಹಿತಿ
ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ವ್ಯಾಪ್ತಿಯ ಪಾಸ್ ವಿತರಣೆ ಕೇಂದ್ರಗಳ ಮಾಹಿತಿ ನೋಡುವುದಾದರೆ, ಹುಬ್ಬಳ್ಳಿ ಗ್ರಾಮಾಂತರ ತಾಲ್ಲೂಕು ಹಾಗೂ ಕುಂದಗೋಳ ತಾಲೂಕು- ಕರ್ನಾಟಕ ಒನ್ ಕೇಂದ್ರ, ಕಾಳಿದಾಸ ನಗರ, ಕುಂದಗೋಳ, ಅಣ್ಣಿಗೇರಿ ತಾಲ್ಲೂಕು- ಕರ್ನಾಟಕ ಒನ್ ಕೇಂದ್ರ,ಟಿ.ಎಂಸಿ.ಹತ್ತಿರ ಅಣ್ಣಿಗೇರಿ, ನವಲಗುಂದ ತಾಲ್ಲೂಕು- ಕರ್ನಾಟಕ ಒನ್ ಕೇಂದ್ರ, ಅನು ಕಂಪ್ಯೂಟರ್ಸ, ಅನು ಗೃಹ, ಅಕ್ಕಿ ಓಣಿ ನವಲಗುಂದ, ಕಲಘಟಗಿ ತಾಲ್ಲೂಕು- ಕರ್ನಾಟಕ ಒನ್ ಕೇಂದ್ರ, ಪಶು ಆಸ್ಪತ್ರೆ ಹತ್ತಿರ ವಿದ್ಯಾಗಿರಿ, ಕಲಘಟಗಿ ಇಲ್ಲಿ ವಿತರಣೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆ ಹಾಗೂ ಪಾಸ್ ವಿತರಣೆಗೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ಸಂಪರ್ಕಿಸಬೇಕಾದ ಸಹಾಯವಾಣಿ ಸಂಖ್ಯೆಗಳು ಹಾಗೂ ಇ ಮೇಲ್ ವಿಳಾಸ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಗಳಿಗೆ ಸಂಬಂಧಿಸಿದ ವಿಷಯಗಳಿಗೆ, ಹೆಚ್ಚಿನ ಮಾಹಿತಿಗೆ ದೂರವಾಣಿ 8792662814/ 8792662816/ 8792662821/ 8792662824/8792662825 ಗೆ ಸಂಪರ್ಕಿಸಬೇಕು. ದೂರುಗಳಿಗೆ ಇ-ಮೇಲ್ sevasindhu@ Karnataka.gov.in ಗೆ ಮೇಲ್ ಮಾಡಬೇಕು.
ಪಾಸ್ ವಿತರಣಾ ಕೇಂದ್ರಗಳಲ್ಲಿ ಪಾಸ್ ಮುದ್ರಣ ಹಾಗೂ ವಿತರಣೆಗೆ ಸಂಬಂಧಿಸಿದ ವಿಷಯಗಳಿಗೆ 8904085030/080 49203888 onehelpdesk@ Karnataka.gov.in ಗೆ ಸಂಪರ್ಕಿಸಬೇಕು ಎಂದು ಅವರು ತಿಳಿಸಿದರು.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications