NWKRTC: ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ವಿತರಣೆ, ಗಮನಿಸಿ
ಬೆಂಗಳೂರು, ಜೂನ್ 02: ಪ್ರಸಕ್ತ ಶೈಕ್ಷಣಿಕ ಸಾಲಿನ (2024-25) ಸಾಲಿನ ಶೈಕ್ಷಣಿಕ ವರ್ಷದ ಅವಧಿಗೆ ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ವಿತರಣೆ ಪ್ರಕ್ರಿಯೆ ಆರಂಭಿಸಲಾಗಿದೆ. ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಬಸ್ ಪಾಸ್ ಪಡೆಯಬಹುದಾಗಿದೆ.
ಈ ಕುರಿತು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ ಮಾಹಿತಿ ನೀಡಿದರು.

ಪ್ರಸಕ್ತ ಶೈಕ್ಷಣಿಕ ವರ್ಷದ ಅವಧಿಗೆ ಶಾಲೆಗಳು ಮತ್ತು ಪದವಿಪೂರ್ವ ಕಾಲೆಜು ತರಗತಿಗಳು ಆರಂಭವಾಗಿರುವ ಪ್ರಯುಕ್ತ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ (ಇಡಿಸಿಎಸ್) ಸಹಯೋಗದಲ್ಲಿ ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ.
ಸೇವಾ ಸಿಂಧು ಪೂರ್ಟಲ್ ಮೂಲಕ ಅರ್ಜಿ ಸಲ್ಲಿಕೆ
ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕು. URL-http://sevasindhuservices.karnataka.gov.in/buspassservices ಮೂಲಕ ಕೂಡಲೇ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳು ಅಗತ್ಯ ದಾಖಲೆಗಳಾದ ಆಧಾರ್ ಕಾರ್ಡ್, ಶಾಲಾ-ಕಾಲೇಜು ಶುಲ್ಕ ಪಾವತಿ ರಶೀದಿ, ಘೋಷಣಾ ಪತ್ರ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಪ್ರಮಾಣಪತ್ರ ಸಹಿತ ಅರ್ಜಿ ಸಲ್ಲಿಸಬೇಕು.
ಸೇವಾಸಿಂಧು ಪೋರ್ಟಲ್ ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಹುಬ್ಬಳ್ಳಿ-ಧಾರವಾಡ ಇನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳ ಮೂಲಕವೂ ಸಲ್ಲಿಸಬಹುದು. ರೂ.30ಶುಲ್ಕ ವಿಧಿಸಲಾಗುತ್ತದೆ ಎಂದು ತಿಳಿಸಿದರು.

ಅರ್ಜಿ ಅನುಮೋದನೆಯಾದ ನಂತರ ಪಾಸ್ ಪಡೆಯಲು ಭೇಟಿ ನೀಡಬೇಕಾದ ಕರ್ನಾಟಕ ಒನ್ ಕೇಂದ್ರದ ಮಾಹಿತಿಯನ್ನು ವಿದ್ಯಾರ್ಥಿಯ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ. ಸದರಿ ಕೇಂದ್ರದಲ್ಲಿ ನಿಗಧಿತ ಶುಲ್ಕವನ್ನು ಪಾವತಿಸಿ ಬಸ್ ಪಾಸ್ ಪಡೆಯಬಹುದಾಗಿದೆ. ಶುಲ್ಕವನ್ನು ನಗದು,ಕ್ರೆಡಿಟ್ ಕಾರ್ಡ್,ಡೆಬಿಟ್ ಕಾರ್ಡ್ ಅಥವಾ ಯುಪಿಐ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.
ಪಾಸ್ ವಿತರಣೆ ಕೇಂದ್ರಗಳ ಮಾಹಿತಿ
ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ವ್ಯಾಪ್ತಿಯ ಪಾಸ್ ವಿತರಣೆ ಕೇಂದ್ರಗಳ ಮಾಹಿತಿ ನೋಡುವುದಾದರೆ, ಹುಬ್ಬಳ್ಳಿ ಗ್ರಾಮಾಂತರ ತಾಲ್ಲೂಕು ಹಾಗೂ ಕುಂದಗೋಳ ತಾಲೂಕು- ಕರ್ನಾಟಕ ಒನ್ ಕೇಂದ್ರ, ಕಾಳಿದಾಸ ನಗರ, ಕುಂದಗೋಳ, ಅಣ್ಣಿಗೇರಿ ತಾಲ್ಲೂಕು- ಕರ್ನಾಟಕ ಒನ್ ಕೇಂದ್ರ,ಟಿ.ಎಂಸಿ.ಹತ್ತಿರ ಅಣ್ಣಿಗೇರಿ, ನವಲಗುಂದ ತಾಲ್ಲೂಕು- ಕರ್ನಾಟಕ ಒನ್ ಕೇಂದ್ರ, ಅನು ಕಂಪ್ಯೂಟರ್ಸ, ಅನು ಗೃಹ, ಅಕ್ಕಿ ಓಣಿ ನವಲಗುಂದ, ಕಲಘಟಗಿ ತಾಲ್ಲೂಕು- ಕರ್ನಾಟಕ ಒನ್ ಕೇಂದ್ರ, ಪಶು ಆಸ್ಪತ್ರೆ ಹತ್ತಿರ ವಿದ್ಯಾಗಿರಿ, ಕಲಘಟಗಿ ಇಲ್ಲಿ ವಿತರಣೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆ ಹಾಗೂ ಪಾಸ್ ವಿತರಣೆಗೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ಸಂಪರ್ಕಿಸಬೇಕಾದ ಸಹಾಯವಾಣಿ ಸಂಖ್ಯೆಗಳು ಹಾಗೂ ಇ ಮೇಲ್ ವಿಳಾಸ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಗಳಿಗೆ ಸಂಬಂಧಿಸಿದ ವಿಷಯಗಳಿಗೆ, ಹೆಚ್ಚಿನ ಮಾಹಿತಿಗೆ ದೂರವಾಣಿ 8792662814/ 8792662816/ 8792662821/ 8792662824/8792662825 ಗೆ ಸಂಪರ್ಕಿಸಬೇಕು. ದೂರುಗಳಿಗೆ ಇ-ಮೇಲ್ sevasindhu@ Karnataka.gov.in ಗೆ ಮೇಲ್ ಮಾಡಬೇಕು.
ಪಾಸ್ ವಿತರಣಾ ಕೇಂದ್ರಗಳಲ್ಲಿ ಪಾಸ್ ಮುದ್ರಣ ಹಾಗೂ ವಿತರಣೆಗೆ ಸಂಬಂಧಿಸಿದ ವಿಷಯಗಳಿಗೆ 8904085030/080 49203888 onehelpdesk@ Karnataka.gov.in ಗೆ ಸಂಪರ್ಕಿಸಬೇಕು ಎಂದು ಅವರು ತಿಳಿಸಿದರು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications