NWKRTC Special Bus: ಯುಗಾದಿ ಹಬ್ಬಕ್ಕೆ ವಾಯುವ್ಯ ಸಾರಿಗೆಯಿಂದ 'ವಿಶೇಷ ಬಸ್ಗಳ' ವ್ಯವಸ್ಥೆ: ಗಮನಿಸಿ
ಹುಬ್ಬಳ್ಳಿ, ಏಪ್ರಿಲ್ 03: ಕರ್ನಾಟಕ ಜನರು ಯುಗಾದಿ ಹಬ್ಬ ಬರ ಮಾಡಿಕೊಳ್ಳಲು ಸಜ್ಜಾಗಿದ್ದಾರೆ. ಮನೆ ಮನೆಗಳಲ್ಲೂ ಅಗತ್ಯ ಸಿದ್ಧತೆ ನಡೆಯುತ್ತಿದೆ. ಭಾರತೀಯರ ಪಾಲಿನ ಈ ಹೊಸ ವರ್ಷವನ್ನು ಬಹು ವಿಜೃಂಭಯಿಂದ ಆಚರಿಸಲಾಗುತ್ತದೆ. ಬೇರೆ ಕೆಲಸ ಮಾಡುವವರು ಈ ದಿನ ತಮ್ಮ ಊರುಗಳಿಗೆ ತೆರಳಿ ಹಬ್ಬ ಆಚರಿಸುತ್ತಾರೆ. ಈ ಕಾರಣಕ್ಕೆ ಊರುಗಳಿಗೆ ತೆರಳುವವರಿಗೆ ಅನುಕೂಲವಾಲೆಂದು ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (NWKRTC) ಹಬ್ಬಕ್ಕೆ ವಿಶೇಷ ಬಸ್ಗಳ ವ್ಯವಸ್ಥೆ ಮಾಡಿದೆ.
ಹೌದು, ಯುಗಾದಿ ಹಬ್ಬಕ್ಕೆ ಸಾಲು ಸಾಲು ರಜೆ ರಜೆಗಳು ಇವೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಮಾಹಿತಿ ನೀಡಿದ್ದಾರೆ.

ಏ. 6- 15 ರವರೆಗೆ ವಿಶೇಷ ಬಸ್ ವ್ಯವಸ್ಥೆ
ಯುಗಾದಿ ಜೊತೆಗೆ ಕೆಲವೇ ದಿನ ಅಂತರದಲ್ಲಿ ಮುಸಲ್ಮಾನರ ರಂಜಾನ್ ಹಬ್ಬ ಸಹ ಇದೆ. ಹಬ್ಬದ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಡುವ ಕಾರಣಕ್ಕೆ ಏಪ್ರಿಲ್ 6 ರಿಂದ 15 ರವರೆಗೆ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದರು.
ಬೆಂಗಳೂರು, ಪುಣೆ, ಗೋವಾ ಮತ್ತಿತರ ಪರ ಊರುಗಳಲ್ಲಿ ನೆಲೆಸಿರುವ ಸರ್ಕಾರಿ, ಖಾಸಗಿ ಉದ್ಯೋಗಿಗಳು, ಉದ್ಯಮಿಗಳು, ಮತ್ತಿತರ ಹಲವರು ಹಬ್ಬದ ಆಚರಣೆಗಾಗಿ ಸ್ವಂತ ಊರುಗಳಿಗೆ ಆಗಮಿಸಲಿದ್ದಾರೆ. ಅವರ ಅನುಕೂಲಕ್ಕಾಗಿ ಏಪ್ರಿಲ್ 5ರಂದು ಶುಕ್ರವಾರ ದಿಂದ 7 ರವಿವಾರ ವವರೆಗೆ ಬೆಂಗಳೂರು, ಪುಣೆ, ಗೋವಾ ಮತ್ತಿತರ ಪ್ರಮುಖ ಸ್ಥಳಗಳಿಂದ ಹುಬ್ಬಳ್ಳಿಗೆ ಹೆಚ್ಚುವರಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.

ಹುಬ್ಬಳ್ಳಿಯಿಂದ ವಿವಿಧೆಡೆ ಬಸ್ ಸಂಚಾರ
ಇನ್ನು ಹಬ್ಬದ ದಿನಗಳ ರಜೆ ಮುಗಿಸಿ ಮತ್ತೆ ತಮ್ಮ ಕೆಲಸದ ಸ್ಥಳಗಳಿಗೆ ಮರಳುವವರಿಗೆ ಸಹಕಾರಿಯಾಗಲೆಂದು ಏಪ್ರಿಲ್ 14 ರಂದು ರವಿವಾರ ಹಾಗೂ 15 ರಂದು ಸೋಮವಾರ ಹುಬ್ಬಳ್ಳಿ- ಬೆಂಗಳೂರು, ಪುಣೆ, ಗೋವಾ, ಮಂಗಳೂರು, ವಿಜಯಪುರ, ಬಾಗಲಕೋಟೆ ಇನ್ನಿತರ ಜಿಲ್ಲೆಗಳಿಗೂ ಹೆಚ್ಚುವರಿ ವಿಶೇಷ NWKRTC ಬಸ್ಗಳನ್ನು ಬಿಡಲಾಗುತ್ತದೆ.
ಈ ಅವಧಿಯಲ್ಲಿ ಜಿಲ್ಲೆಯೊಳಗೆ ವಿವಿಧ ಸ್ಥಳಗಳು ಹಾಗೂ ಅಕ್ಕಪಕ್ಕದ ಜಿಲ್ಲೆಗಳ ನಡುವೆಯೂ ಸಹ ಪ್ರಯಾಣಿಕರ ಹೆಚ್ಚಳಕ್ಕೆ ತಕ್ಕಂತೆ ಹೆಚ್ಚುವರಿ ಬಸ್ಸುಗಳನ್ನು ಬಿಡಲಾಗುತ್ತದೆ ಎಂದು ರಾಮನಗೌಡರ ಮಾಹಿತಿ ನೀಡಿದರು.
ವಿಶೇಷ ಬಸ್ಗಳ ಆಸನ ಕಾಯ್ದಿರಿಸಲು ಸಂಪರ್ಕಿಸಿ
ಎಂದಿನಂತೆ ಈ ಭಾರಿಯು ಹಬ್ಬದ ಸಂದರ್ಭದಲ್ಲಿ ಬಸ್ನ ನಾಲ್ಕು ಅಥವಾ ಹೆಚ್ಚಿನ ಸೀಟುಗಳನ್ನು ಕಾಯ್ದಿರಿಸಿದರೆ ಏಕಮುಖ ಪ್ರಯಾಣಕ್ಕೆ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುತ್ತದೆ. ಎರಡು ಬದಿ ಪ್ರಯಾಣ ಆಸನ ಕಾಯ್ದಿರಿಸಿದವರಿಗೆ ಶೇಕಡಾ 10ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ಅವರು ಹೇಳಿದರು. ಟಿಕೆಟ್ ಬುಕ್ಕಿಂಗ್ಗಾಗಿ ಪ್ರಯಾಣಿಕರು https://www.ksrtc.in ಅಥವಾ KSRTC Mobile App ಗೆ ಸಂಪರ್ಕಿಸಬೇಕಿದೆ.
ಹಬ್ಬಗಳಿಗೆ ರಜೆ ಹಾಕುವವರ ಸಂಖ್ಯೆಯು ಹೆಚ್ಚಿರುತ್ತದೆ. ಏಪ್ರಿಲ್ 7 ರಂದು ರವಿವಾರ, 9 ರಂದು ಮಂಗಳವಾರ ಚಾಂದ್ರಮಾನ ಯುಗಾದಿ, 11ರಂದು ಗುರುವಾರ ರಂಜಾನ್,13 ರಂದು ಎರಡನೇ ಶನಿವಾರ ಹಾಗೂ14 ರಂದು ರವಿವಾರ ಹೀಗೆ ಎಂಟು ದಿನಗಳ ಅವಧಿಯಲ್ಲಿ 5 ಸಾರ್ವಜನಿಕ ರಜೆಗಳು ಇವೆ. ಕೆಲವು ಮುಂದಿನ ವಾರಪೂರ್ತಿ ರಜೆ ಹಾಕುವವರಿದ್ದಾರೆ. ಒಟ್ಟಾರೆ ಪ್ರಯಾಣಿಕರಿಗೆ ಅನುಕೂಲವಾಗುವಂತೆ ವಿಶೇಷ ಬಸ್ ಬಿಡಲಾಗಿದೆ.
ಈ ಹಿಂದೆ ವಾಯವ್ಯ ಸಾರಿಗೆ ಸಂಸ್ಥೆ ವಿವಿಧ ಜಿಲ್ಲೆಗಳಿಗೆ ಹೊಸ ಬಸ್ಗಳನ್ನು ಆರಂಭಿಸಿತ್ತು. ಇದೀಗ ಯುಗಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಿದೆ. ಇದರಿಂದ ಊರಿಗೆ ಹೋಗುವವರಿಗೆ ಬರುವವರಿಗೆ ಸಹಾಯವಾಗಲಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications