ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹುಬ್ಬಳ್ಳಿಯಲ್ಲಿ ಸಂತ್ರಸ್ತರ ಬಳಿಯೇ ಹಣ ವಸೂಲಿಗೆ ಇಳಿದ ಅಧಿಕಾರಿಗಳು

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಅಕ್ಟೋಬರ್ 11: ಪ್ರವಾಹದ ಪರಿಣಾಮದಿಂದ ಬೇಸತ್ತು, ತಮ್ಮ ಪರಿಹಾರ ಹಣಕ್ಕಾಗಿ ಸಂತ್ರಸ್ತರು ಪರದಾಡುತ್ತಿದ್ದಾರೆ. ಆದರೆ ಇಂಥ ಸಂದರ್ಭದಲ್ಲೂ ಅಧಿಕಾರಿಗಳು ಸಂತ್ರಸ್ತರೊಂದಿಗೆ ಹಣ ವಸೂಲಿಗೆ ಇಳಿದಿದ್ದಾರೆ.

ಸಂತ್ರಸ್ತರಿಗೆ ಪರಿಹಾರ ಕೊಡಲು ಗ್ರಾಮ ಲೆಕ್ಕಾಧಿಕಾರಿಯೊಬ್ಬರು ರೈತರ ಬಳಿ ಹಣ ವಸೂಲಿ ಮಾಡುತ್ತಿರುವ ಪ್ರಕರಣ ಕುಂದಗೋಳದಲ್ಲಿ ಬಯಲಿಗೆ ಬಂದಿದೆ. ಪರಿಹಾರಕ್ಕಾಗಿ ದಾಖಲೆಗಳ ಸಲ್ಲಿಕೆ ಮಾಡಲು ಬಂದ ವೇಳೆ ಗ್ರಾಮ ಲೆಕ್ಕಾಧಿಕಾರಿ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಪಹಣಿ ಪತ್ರ ಪಡೆಯುವುದರ ಜೊತೆಗೆ ಹಣವನ್ನೂ ಪಡೆಯುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ನಮ್ಮ ಸ್ಥಿತಿ ನೋಡಿ ಎಂದು ಗೋಳಾಡಿದ ಸಂತ್ರಸ್ತ; ತುಟಿ ಬಿಚ್ಚಲಿಲ್ಲ ಸಿಎಂನಮ್ಮ ಸ್ಥಿತಿ ನೋಡಿ ಎಂದು ಗೋಳಾಡಿದ ಸಂತ್ರಸ್ತ; ತುಟಿ ಬಿಚ್ಚಲಿಲ್ಲ ಸಿಎಂ

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗ್ರಾಮ ಲೆಕ್ಕಾಧಿಕಾರಿ ಸಹಾಯಕ ಸುಬ್ಬಣ್ಣ ಪ್ರತಿ ರೈತರಿಂದಲೂ ದಾಖಲೆಗಳೊಂದಿಗೆ 20 ರೂಪಾಯಿ ತೆಗೆದುಕೊಳ್ಳುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂಥ ಸಂದರ್ಭದಲ್ಲೂ ಎಲ್ಲಾ ಕಳೆದುಕೊಂಡಿರುವ ರೈತರಿಂದ ಹಣ ಮಾಡಲು ಮುಂದಾಗಿರುವ ಅಧಿಕಾರಿಗಳ ವರ್ತನೆ ನೋಡಿ ರೈತರು ಬೇಸರ ವ್ಯಕ್ತಪಡಿಸಿದ್ದಾರೆ.

Officers Taking Money From Victims In Kundagola

ನೇಣಿಗೆ ಕೊರಳು ಒಡ್ಡಿದ ಬೆಳಗಾವಿ ಜಿಲ್ಲೆ ಹಲಗತ್ತಿಯ ಪ್ರವಾಹ ಸಂತ್ರಸ್ತ ನೇಣಿಗೆ ಕೊರಳು ಒಡ್ಡಿದ ಬೆಳಗಾವಿ ಜಿಲ್ಲೆ ಹಲಗತ್ತಿಯ ಪ್ರವಾಹ ಸಂತ್ರಸ್ತ

ಬೆಳೆ ಪರಿಹಾರ ಪಡೆಯಲು ಪ್ರತಿ ವರ್ಷ ಲಂಚ ನೀಡ್ತೀರಾ, ಈಗಲೂ ಲಂಚ ಕೊಡಲೇಬೇಕು ಎಂದು ಗ್ರಾಮ ಲೆಕ್ಕಾಧಿಕಾರಿ ರೈತರ ಬಳಿ ಹಣ ವಸೂಲಿ ಮಾಡುತ್ತಿದ್ದಾರೆ. ಹಣ ಕೊಡದಿದ್ದರೆ ನಾನು ದಾಖಲೆಗಳನ್ನು ಮೇಲಧಿಕಾರಿಗಳಿಗೆ ಕಳುಹಿಸಲ್ಲವೆಂದು ಬೆದರಿಕೆ ಹಾಕಿ ರೈತರಿಂದ ಹಣ ವಸೂಲಿಗೆ ಇಳಿದಿದ್ದಾರೆ.

English summary
Tired of the impact of the flood, victims are struggling for their relief fund. But even in this situation, the authorities taking money from the victims.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X