ರಾಷ್ಟ್ರಪತಿಗಳಿಂದ ಪತ್ರ ಬಂದರೂ ಬಿಲ್ ಪಾವತಿ ಮಾಡದ ಅಧಿಕಾರಿಗಳು: ಗುತ್ತಿಗೆದಾರನ ಅಳಲು
ಹುಬ್ಬಳ್ಳಿ, ಡಿಸೆಂಬರ್ 16 : ಸಾಲ ಮಾಡಿ ಕೊರೊನಾ ಸಮಯದಲ್ಲಿ ಹುಬ್ಬಳ್ಳಿಯ ಗುತ್ತಿಗೆದಾರರೊಬ್ಬರು ಕೋವಿಡ್ ಪರಿಕರಗಳನ್ನು ನೀಡಿದ್ದರು. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ಗುತ್ತಿಗೆದಾರನಿಗೆ ಬಿಲ್ ಪಾವತಿ ಮಾಡದ ಕಾರಣ ರಾಷ್ಟ್ರಪತಿ ಅವರಿಗೆ ದಯಾಮರಣ ಕೋರಿ ಪತ್ರ ಬರೆದಿದ್ದರು.
ರಾಷ್ಟ್ರಪತಿ ಭವನದಿಂದ ಈತನಿಗೆ ಬಿಲ್ ಪಾವತಿ ಮಾಡಬೇಕೆಂದು ಪತ್ರ ಬಂದರೂ ಕೂಡ ಈ ಇಲಾಖೆಗಳು ಬಿಲ್ ಪಾವತಿ ಮಾಡುತ್ತಿಲ್ಲವೆಂದು ಗುತ್ತಿಗೆದಾರರು ತನ್ನ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ.
ಹುಬ್ಬಳ್ಳಿ ನಿವಾಸಿ ಬಸವರಾಜ ಅಮರಗೋಳ ಕೋವಿಡ್ ಸಮಯದಲ್ಲಿ ಚಿಕ್ಕಮಗಳೂರು ಜಿಲ್ಲೆ ಕಡೂರು ಮತ್ತು ಮೂಡಗೆರೆ ತಾಲೂಕಿನ ಗ್ರಾಮ ಪಂಚಾಯಿತಿಗಳಿಗೆ, ಕೋವಿಡ್ ಪರಿಕರಗಳ ಸರಬರಾಜು ಮಾಡಿದ್ದರು. 2 ವರ್ಷ ಗತಿಸಿದರೂ ಕೂಡ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಈವರೆಗೂ ಬಿಲ್ ಪಾವತಿ ಮಾಡಿಲ್ಲ.

ಇದರಿಂದ ಮನನೊಂದ ಬಸವರಾಜ ರಾಷ್ಟ್ರಪತಿಗಳಿಗೆ ದಯಾಮರಣ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದ ರಾಷ್ಟ್ರಪತಿ ಭವನದ ಅಧಿಕಾರಿಗಳು ಈ ಗುತ್ತಿಗೆದಾರನಿಗೆ ಬಿಲ್ ಪಾವತಿ ಮಾಡಬೇಕೆಂದು ಆದೇಶ ಪತ್ರ ನೀಡಿದ್ದರು. ರಾಷ್ಟ್ರಪತಿ ಭವನದಿಂದ ಆದೇಶ ಬಂದರೂ ಸಹ ಅಧಿಕಾರಿಗಳು ಬಸವರಾಜಗೆ ಬಿಲ್ ಪಾವತಿ ಮಾಡಿಲ್ಲ ಎನ್ನುವ ಆರೋಪ ಕೇಳಿಬಂದಿದೆ.
ಸಾಲ ಸೂಲ ಮಾಡಿದ್ದರಿಂದ ಸಾಲಗಾರರು ಕಿರುಕುಳ ನೀಡುತ್ತಿದ್ದಾರೆ. ನನ್ನ ಜೀವಕ್ಕೆ ಹಾನಿಯಾದರೆ ಇದಕ್ಕೆ ಕಡೂರು ಹಾಗೂ ಮೂಡಗೆರೆ ತಾಲೂಕಿನ ಗ್ರಾಮ ಪಂಚಾಯತಿ, ಹಾಗೂ ತಾಲೂಕು ಪಂಚಾಯತಿ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತಿ ಇಓ ಅವರೇ ಕಾರಣ ಎಂದು ಬಸವರಾಜ ನೋವು ತೋಡಿಕೊಂಡಿದ್ದಾರೆ.
ಕೋವಿಡ್ ಸಮಯದಲ್ಲಿ ಪರಿಕರಗಳನ್ನು ನೀಡಿದ್ದರೂ, ಈವರೆಗೂ ಬಿಲ್ ಪಾವತಿ ಮಾಡದೆ ಸತಾಯಿಸುತ್ತಿರುವ ಅಧಿಕಾರಿಗಳ ವಿರುದ್ಧ ಸಂಬಂಧಿಸಿದ ಹಿರಿಯ ಅಧಿಕಾರಿಗಳು ಗಮನ ಹರಿಸಿ ಗುತ್ತಿಗೆದಾರನಿಗೆ ನ್ಯಾಯ ಕೊಡಿಸಬೇಕಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications