ಹುಬ್ಬಳ್ಳಿ: ಯುವತಿ ಸೇರಿ ನಾಲ್ವರು ಅಪಹರಣಕಾರರ ಬಂಧನ
ಹುಬ್ಬಳ್ಳಿ, ಆಗಸ್ಟ್ 04 : ಇಲ್ಲಿನ ದೇಶಪಾಂಡೆ ನಗರದಲ್ಲಿ ಕಾರನ್ನು ಅಡ್ಡಗಟ್ಟಿ ಬಲಬೀರ್ ಎಂಬುವರನ್ನು ಅಪಹರಿಸಿದ್ದ ಯುವತಿ ಸೇರಿ ನಾಲ್ವರು ಅಪಹರಣಕಾರರನ್ನು ಶುಕ್ರವಾರ ಬೆಳಗಿನ ಜಾವ ಹಳೇ ಹುಬ್ಬಳ್ಳಿಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಮೇಶ ಹಜಾರೆ, ವಿನಾಯಕ ಹಜಾರೆ, ಗಣೇಶ್ ಶೆಟ್ಟಿ ಸೇರಿದಂತೆ ಓರ್ವ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳು ಜುಲೈ 30ರಂದು ಬಲಬೀರ್ ಅವರನ್ನು ಅಪಹರಿಸಿ ಹುಬ್ಬಳ್ಳಿಯ ಹೊರ ವಲಯದ ಅಂಚಟಗೇರಿಗೆ ಕರೆದೊಯ್ದು 4 ರಿಂದ 5 ಲಕ್ಷ ರು. ಹಣಕ್ಕೆ ಬೇಡಿಕೆ ಇಟ್ಟಿದ್ದರು.

ಅಲ್ಲದೆ ಅವರ ಬಳಿ ಇದ್ದ ಎಟಿಎಂ ಹಾಗೂ ಡೆಬಿಟ್ ಕಾರ್ಡ್ಗಳನ್ನು ಕಿತ್ತುಕೊಂಡಿದ್ದ ಅಪಹರಣಕಾರರು ಅವರ ಮೇಲೆ ದೈಹಿಕ ಹಲ್ಲೆ ನಡೆಸಿದ್ದರು. ಹಲ್ಲೆ ಸಂದರ್ಭದಲ್ಲಿ ಬಲಬೀರ್ ಅವರ ಕಿವಿ, ಕೈ ಹಾಗೂ ಹೊಟ್ಟೆಗೆ ಬಲವಾದ ಗಾಯಗಳಾಗಿವೆ.
ಹುಬ್ಬಳ್ಳಿ: ನಾಲ್ವರು ಹೆದ್ದಾರಿ ದರೋಡೆಕೋರರ ಬಂಧನ
ಬಂಧಿತ ಆರೋಪಿಗಳಿಂದ ಚಾಕು, ಎರಡು ಬೈಕ್, ಆರು ಮೊಬೈಲ್ ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರು ಸುಲಿಗೆಕೋರರ ಬಂಧನ: ಜನರನ್ನು ಬೆದರಿಸಿ ಸುಲಿಗೆ ಮಾಡುತ್ತಿದ್ದ ಇಬ್ಬರು ಸುಲಿಗೆಕೋರರನ್ನು ಇಲ್ಲಿನ ಬೆಂಡಿಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ಸೆಟ್ಲಮೆಂಟ್ ನಿವಾಸಿಗಳಾದ ಲಕ್ಷ್ಮಣ ಬಳ್ಳಾರಿ ಹಾಗೂ ಅರ್ಜುನ ಮುಂಡಗೋಡ ಬಂಧಿತ ಆರೋಪಿಗಳು. ಇತ್ತೀಚಿಗೆ ಗದಗ ಮೂಲದ ಸಂದೀಪ ಹೊಸಮನಿ ಎಂಬುವರನ್ನು ಬೆದರಿಸಿ ಸುಲಿಗೆ ಮಾಡಿದ್ದರು. ಬಂಧಿತರಿಂದ ಬೈಕ್, ಐದು ಮೊಬೈಲ್, ನಗದು ಹಾಗೂ ತಲ್ವಾರ್ ವಶಪಡಿಸಿಕೊಳ್ಳಲಾಗಿದೆ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications