ಕನ್ನಡ ಧ್ವಜದ ಬೇಡಿಕೆ ಪ್ರತ್ಯೇಕತೆ ಕೂಗಲ್ಲ: ಪಾಟೀಲ್ ಪುಟ್ಟಪ್ಪ
ಹುಬ್ಬಳ್ಳಿ, ಜುಲೈ 19: ಈಗ ಬಳಕೆಯಲ್ಲಿರುವ ಹಳದಿ-ಕೆಂಪು ಬಾವುಟ ಕನ್ನಡ ನಾಡಿನ ಸಮಗ್ರತೆಯನ್ನು ಹೊಂದಿಲ್ಲ. ಅದು ಕೇವಲ ಅರಿಷಿಣ ಕುಂಕುಮ ಬಣ್ಣದಿಂದ ಕೂಡಿದ್ದು, ಇಡಿ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವುದರಿಂದ ಈ ಧ್ವಜವನ್ನು ಯಾವುದೇ ಕಾರಣಕ್ಕೂ ಒಪ್ಪುವ ಪ್ರಶ್ನೆಯೇ ಇಲ್ಲ, ಆದ್ದರಿಂದ ಈ ಧ್ವಜಕ್ಕೆ ಹೊರತಾಗಿ ನಾಡಿಗೊಂಡು ಪ್ರತ್ಯೇಕ ಧ್ವಜದ ಬೇಡಿಕೆ ತಪ್ಪಲ್ಲ ಎಂದು ಹಿರಿಯ ಪತ್ರಕರ್ತ ಹಾಗೂ ಕನ್ನಡ ಪರ ಹೋರಾಟಗಾರ ನಾಡೋಜ ಪಾಟೀಲ ಪುಟ್ಟಪ್ಪ ಸ್ಪಷ್ಟಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿಂದು(ಜುಲೈ 19) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1962 ರಲ್ಲಿ ತಮಿಳರಿಂದ ಕನ್ನಡ ಹಾಗೂ ಕನ್ನಡಿಗರ ಮೇಲೆ ನಡೆಯುತ್ತಿದ್ದ ಆಕ್ರಮಣ ತಡೆಯಲು ನಡೆದ ಹೋರಾಟದಲ್ಲಿ ಕನ್ನಡದ ಕಾರ್ಯಕರ್ತ ರಾಮಮೂರ್ತಿ ಅವರು ಈ ಧ್ವಜವನ್ನು ಬಳಕೆ ಮಾಡಲು ಆರಂಭಿಸಿದರು. ಅಲ್ಲದೆ ಅಂದೇ ಅವರು ಕನ್ನಡದ ಧ್ವಜಕ್ಕಾಗಿ ಹೋರಾಟ ಮಾಡಿದ್ದರು. ಅದು ಇಂದಿಗೂ ಮುಂದುವರಿದಿದೆ ಅಷ್ಟೇ ಎಂದು ಅವರು ಹೇಳಿದರು.

ನಾಡಿಗೊಂದು ಧ್ವಜದ ಬೇಡಿಕೆ ಪ್ರತ್ಯೇಕತೆಯ ಕೂಗಲ್ಲ. ಅದು ಕನ್ನಡದ ಸಾರ್ವಭೌಮದ ಸಂಕೇತ. ನಾಡು, ನುಡಿ ನಮ್ಮ ಸಂಸ್ಕೃತಿಯನ್ನು ಬಿಂಬಿಸುವಂಥ ಧ್ವಜ ಹೊಂದಬೇಕು ಎಂಬುದು ಬಹುದಿನಗಳ ಬೇಡಿಕೆ. ಇದರಿಂದ ದೇಶದ ಸಮಗ್ರತೆಗೆ ದಕ್ಕೆ ಬರುವುದಕ್ಕೆ ಸಾಧ್ಯವಿಲ್ಲ. ಇದು ರಾಷ್ಟ್ರಧ್ವಜಕ್ಕೆ ಪರ್ಯಾಯವೂ ಅಲ್ಲ ಎಂದು 96 ವರ್ಷದ ಖ್ಯಾತ ಸಾಹಿತಿ, ಪಾಟೀಲ್ ಪುಟ್ಟಪ್ಪ ಸ್ಪಷ್ಟಪಡಿಸಿದರು.
ರಾಷ್ಟ್ರಧ್ವಜದ ಸಾರ್ವಭೌಮತೆಗೆ ಧಕ್ಕೆಯಾಗದಂತೆ ಕನ್ನಡದ ಅಸ್ತಿತ್ವ ಕಾಪಾಡುವಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಪುಟ್ಟಪ್ಪ ಕರೆ ನೀಡಿದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications