ಗಣೇಶ, ಟಿಪ್ಪು ಆಯಿತು ಇದೀಗ ಹುಬ್ಬಳ್ಳಿ ರಾಣಿ ಚನ್ನಮ್ಮ ಈದ್ಗಾ ಮೈದಾನದಲ್ಲಿ ಕಾಮಣ್ಣನ ಪ್ರತಿಷ್ಠಾಪನೆಗೂ ಅವಕಾಶ
ಹುಬ್ಬಳ್ಳಿಯ ರಾಣಿ ಚನ್ನಮ ಈದ್ಗಾ ಮೈದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ಟಿಪ್ಪು ಜಯಂತಿ ಆಚರಣೆಗೆ ಅನುಮತಿ ನೀಡಿದ ಬೆನ್ನಲ್ಲೇ, ಇದೀಗ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೂ ಸಹ ಮಹಾನಗರ ಪಾಲಿಕೆ ಅವಕಾಶ ನೀಡಿದೆ.
ಹುಬ್ಬಳಿ, ಮಾರ್ಚ್, 08: ಹುಬ್ಬಳ್ಳಿಯ ರಾಣಿ ಚನ್ನಮ ಈದ್ಗಾ ಮೈದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ಟಿಪ್ಪು ಜಯಂತಿ ಆಚರಣೆಗೆ ಅನುಮತಿ ನೀಡಿದ ಬೆನ್ನಲ್ಲೇ, ಇದೀಗ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೂ ಸಹ ಮಹಾನಗರ ಪಾಲಿಕೆ ಅವಕಾಶ ನೀಡಿದೆ. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಈ ಮಹತ್ವದ ಅದೇಶವನ್ನು ಹೊರಡಿಸಿದ್ದಾರೆ.
ಈ ಹಿಂದೆ ಗಜಾನನ ಉತ್ಸವ ಮಹಾಮಂಡಳಿ ಗಣೇಶ ಉತ್ಸವಕ್ಕೆ ಅನುಮತಿ ಕೇಳಿತ್ತು. ಈ ಬಾರಿಯೂ ಸಹ ಅಧ್ಯಕ್ಷ ಸಂಜಯ್ ಬಡಾಸ್ಕರ್ ನೇತೃತ್ವದಲ್ಲಿ ರಂಗ ಪಂಚಮಿ ಪ್ರಯುಕ್ತ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ಮಾಡಿದ ಪಾಲಿಕೆ, ವಿವಿಧ ನಿಯಮಗಳನ್ನು ವಿಧಿಸಿ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಿದೆ. ಮಾರ್ಚ್ 9ರಿಂದ 11ರ ವರೆಗೂ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆ ಮತ್ತು ಮೂರ್ತಿ ದಹನಕ್ಕೂ ಸಹ ಅನುಮತಿ ನೀಡಿದೆ.

ಗಲಭೆಗೆ ಅವಕಾಶ ನೀಡಬಾರದು
10 ಸಾವಿರ ಶುಲ್ಕ ಪಡೆದು ಕಾರ್ಯಕ್ರಮದ ವೇಳೆ ಯಾವುದೇ ಗಲಭೆಗೆ ಅವಕಾಶ ನೀಡಬಾರದು. ಅಕಸ್ಮಾತ್ ಯಾವುದೇ ಗಲಾಟೆಯಾಗಿ ಆಸ್ತಿ ಹಾನಿಯಾದರೆ, ಆಯೋಜಕರೇ ಜವಾಬ್ದಾರಿ ಎಂದು ಕಠಿಣ ಷರತ್ತು ವಿಧಿಸಿ ಅನುಮತಿ ನೀಡಿದೆ.
ಸಿಹಿಸುದ್ದಿ ನೀಡಿದ ರೈಲ್ವೆ ಇಲಾಖೆ
ಹುಬ್ಬಳ್ಳಿ-ಬೆಂಗಳೂರು ನಡುವೆ ಸಂಚರಿಸುವ ಜನರಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ. ಮಾರ್ಚ್ 20ರಿಂದ ಹುಬ್ಬಳ್ಳಿ ಬೆಂಗಳೂರು ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲಿದೆ.

ವಿಶೇಷ ರೈಲುಗಳನ್ನು ಓಡಿಸಲು ನಿರ್ಧಾರ
ಹುಬ್ಬಳ್ಳಿ ಬೆಂಗಳೂರು ಮಧ್ಯೆ ವಿಶೇಷ ರೈಲು ಅತೀ ಅವಶ್ಯಕ ವಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವಾರು ಮಂದಿ ಜನಪ್ರತಿನಧಿಗಳು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದರು. ಈಗ ಕೇಂದ್ರ ರೈಲ್ವೆ ಸಚಿವರು ಈ ವಿಶೇಷ ರೈಲುಗಳಿಗೆ ಅನುಮೋದನೆ ನೀಡಿದ್ದಾರೆ.
ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮಾರ್ಚ್ 20 ರಿಂದ ವಿಶೇಷ ಎಕ್ಸ್ ಪ್ರೆಸ್ ರೈಲುಗಳ ಸಂಚಾರ ಮಾಡಲಾಗುತ್ತದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮೂಲಕ ತಿಳಿಸಿದ್ದಾರೆ. ಈ ರೈಲು ಪ್ರಯಾಣಿಕರ ಬೇಡಿಕೆ ಹಿನ್ನಲೆಯಲ್ಲಿ ಕಾಯ್ದಿರಿಸಿದ ವಿಶೇಷ ಸೇವೆಯ ಈ ರೈಲುಗಳು ಇತ್ತು. ಮಾರ್ಚ್ 20 ರಿಂದ ತಮ್ಮ ಸಂಚಾರ ಆರಂಭಿಸಲಿವೆ. ರಾತ್ರಿ 11:15ಕ್ಕೆ ಹುಬ್ಬಳ್ಳಿಯಿಂದ ( ರೈಲು ಸಂ : 07339) ಹೊರಡುವ ರೈಲು ಬೆಳಗ್ಗೆ 6:50ಕ್ಕೆ ಬೆಂಗಳೂರು ತಲುಪಲಿದೆ ಎಂದು ಅವರು ತಿಳಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications