ಸಂಸತ್ತಿನಲ್ಲಿ ಪ್ರಧಾನಿ ಮೋದಿ ಆಧಾರ ರಹಿತ ಮಾಹಿತಿ ನೀಡಿದ್ದಾರೆ: ದಿಗ್ವಿಜಯ್ ಸಿಂಗ್
ಹುಬ್ಬಳ್ಳಿ, ಆಗಸ್ಟ್, 11: ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಪ್ಪು ಮಾಹಿತಿ ಕೊಡುತ್ತಿದ್ದಾರೆ. ಅಲ್ಲದೆ ಅವರು ಕೇವಲ ರಾಜಕೀಯ ಭಾಷಣ ಮಾಡಿದ್ದಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯ ದಿಗ್ವಿಜಯ ಸಿಂಗ್ ಹುಬ್ಬಳ್ಳಿಯಲ್ಲಿ ಗಂಭೀರ ಆರೋಪ ಮಾಡಿದರು.
ಹುಬ್ಬಳ್ಳಿಯ ಗೋಕುಲ ರಸ್ತೆಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಅವರು ತಪ್ಪು ಮಾಹಿತಿಗಳನ್ನು ಸಂಸತ್ ಮುಂದೆ ಇರಿಸಿದ್ದಾರೆ. ಅಲ್ಲದೆ ಯಾಕೆ ಮಣಿಪುರಕ್ಕೆ ಹೋಗಿಲ್ಲ ಎಂದು ಇಡೀ ದೇಶದ ಜನರು ಪ್ರಶ್ನೆ ಮಾಡುತ್ತಿದ್ದಾರೆ. ಇದಕ್ಕೆ ಅವರಿಂದ ಸೂಕ್ತ ಉತ್ತರ ಬರುತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಮಣಿಪುರದಲ್ಲಿ ಮೂರು ತಿಂಗಳು ಆದರೂ ಶಾಂತಿ ಸ್ಥಾಪನೆ ಆಗಿಲ್ಲ ಯಾಕೆ ಎಂದು ನೊಂದ ಜನರು ಪ್ರಶ್ನೆ ಮಾಡತ್ತಿದ್ದಾರೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಉತ್ತರ ಕೊಟ್ಟಿಲ್ಲ ಎಂದ ಅವರು, ಅಸ್ಸಾಂ ರೈಫಲ್ಸ್ ಮತ್ತು ಸ್ಥಳೀಯ ಪೊಲೀಸರ ನಡುವಿನ ವಿವಾದ ಹೆಚ್ಚಾಗುತ್ತಲೇ ಇದೆ. ಇದರ ಬಗ್ಗೆಯೂ ನರೇಂದ್ರ ಮೋದಿ ಅವರು ಮಾತನಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ ಸಂಸತ್ತಿನಲ್ಲಿ ಅವರು ಆಧಾರ ರಹಿತ ಮಾಹಿತಿ ಕೊಟ್ಟಿದ್ದಾರೆ ಎಂದು ಆರೋಪ ಮಾಡಿದರು.
ಕರ್ನಾಟಕದ 5 ಗ್ಯಾರಂಟಿಗಳ ಕುರಿತು ಮೋದಿ ಟೀಕೆ ವಿಚಾರವಾಗಿ ಮಾತನಾಡಿದ ಅವರು, ರಾಜ್ಯ ಸರ್ಕಾರದ 5 ಗ್ಯಾರಂಟಿಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಟೀಕೆಯಲ್ಲಿ ಯಾವುದೇ ಹುರುಳಿಲ್ಲ. ಎಲ್ಲ ಗ್ಯಾರಂಟಿಗಳ ಜಾರಿಗೆ ನಾವು ಬದ್ಧರಾಗಿದ್ದೇವೆ. ಹಾಗೆಯೇ ಕರ್ನಾಟಕದ ಜನತೆಗೆ ನಾವು ಕೃತಜ್ಞರಾಗಿದ್ದೇವೆ ಎಂದರು.
ಸಂಸತ್ನಲ್ಲಿ ರಾಹುಲ್ ಗಾಂಧಿ ಫ್ಲೈಯಿಂಗ್ ಕಿಸ್ ವಿವಾದದ ವಿಚಾರವಾಗಿ ಪ್ರತಿಕ್ರಿಯಿಸಿ, ಅದು ಫ್ಲೈಯಿಂಗ್ ಕಿಸ್ ಅಲ್ಲವೇ ಅಲ್ಲ ಎಂದರು. ಹಾಗೆಯೇ ಆಗಷ್ಟ್ 27ರಂದು ಬೆಳಗಾವಿಗೆ ಎಐಸಿಸಿ ವರಿಷ್ಠೆ ಸೋನಿಯಾ ಗಾಂಧಿ ಬರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications