ಹುಬ್ಬಳ್ಳಿ; ಚೀನಾ ಗಡಿಯಲ್ಲಿ ಹುತಾತ್ಮರಾಗಿದ್ದ ಪೊಲೀಸರ ಸ್ಮರಣೆ
ಹುಬ್ಬಳ್ಳಿ, ಅಕ್ಟೋಬರ್, 21: ಎಲ್ಲಾ ಪೊಲೀಸ್ ಹುತಾತ್ಮರನ್ನು ಸ್ಮರಿಸುವ ದಿನ ಇದಾಗಿದೆ. ಚೀನಾ ಗಡಿಯಲ್ಲಿ ಕಾರ್ಯಾಚರಣೆ ಮಾಡುತ್ತಿದ್ದ ವೇಳೆಯಲ್ಲಿ 10 ಜನ ಪೊಲೀಸ್ ಅಧಿಕಾರಿಗಳು ಇದೇ ದಿನದಂದು ಹುತಾತ್ಮರಾಗಿದ್ದರು.
ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡಲು, ಸಾರ್ವಜನಿಕ ಆಸ್ತಿಪಾಸ್ತಿ, ಜನರ ಜೀವ ರಕ್ಷಣೆ, ಟ್ರಾಫಿಕ್ ಸಮಸ್ಯೆ ನಿವಾರಣೆ, ಸೈಬರ್ ಕ್ರೈಂ, ಮಕ್ಕಳ ಮೇಲೆ ಹಲ್ಲೆ ಸೇರಿದಂತೆ ವಿವಿಧ ಹೊಸ ಸವಾಲುಗಳು ಪೊಲೀಸ್ ಇಲಾಖೆಗೆ ಎದುರಾಗುತ್ತಿವೆ. ಅಪರಾಧಗಳನ್ನು ತಡೆಗಟ್ಟಲು ಹೊಸ ಹೆಜ್ಜೆಗಳನ್ನು ಇಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗ್ಗಡೆ ಹೇಳಿದರು.
ಇಂದು ಹಳೇ ಹುಬ್ಬಳ್ಳಿಯ ಸಿಎಆರ್ ಮೈದಾನದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಪೊಲೀಸ್ ಸ್ಮರಣಾ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಹುಬ್ಬಳ್ಳಿಯಲ್ಲಿ ಎಫ್.ಎಸ್.ಎಲ್. ಕೆಂದ್ರವನ್ನು ತೆರಯಲಾಗಿದೆ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಂಡು ಅಭಿವೃದ್ಧಿ ಹೊಂದಬೇಕಾಗಿರುವುದು ಅವಶ್ಯಕವಾಗಿದೆ ಎಂದರು.

ಹುತಾತ್ಮ ಪೊಲೀಸರ ಸ್ಮರಣೆ
ಪೊಲೀಸ್ ಕಮಿಷನರ್ ಲಾಭೂರಾಮ್ ಮಾತನಾಡಿ, ಪ್ರತಿ ವರ್ಷ ಪೊಲೀಸ್ ಸ್ಮರಣೆ ದಿನವನ್ನು ಅಕ್ಟೋಬರ್ 21ರಂದು ಆಚರಣೆ ಮಾಡಲಾಗುವುದು. 1959ರಲ್ಲಿ ಚೀನಾ ಗಡಿಯಲ್ಲಿ ಪೊಲೀಸ್ ಅಧಿಕಾರಿಗಳು ಪ್ರಾಣ ತ್ಯಾಗ ಮಾಡಿದ ಸ್ಮರಣಾರ್ಥವಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಕಳೆದ ವರ್ಷದಿಂದ 264 ಪೊಲೀಸ್ ಅಧಿಕಾರಿಗಳು ಸೇವೆಯಲ್ಲಿರುವಾಗ ಮೃತರಾಗಿದ್ದಾರೆ. ರಾಜ್ಯದ 11 ಜನರಲ್ಲಿ ಜಿಲ್ಲೆಯ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ನಿಂಗಪ್ಪ ಬೂಸನೂರ, ಪಂಡಿತ ಕಾಸಗರ್ ಅವರು ಪ್ರಾಣತ್ಯಾಗ ಮಾಡಿದ್ದಾರೆ ಎಂದರು.
ಹುತಾತ್ಮ ಪೊಲೀಸರಿಗೆ ಪುಷ್ಪನಮನ
ವಿವಿಧ ಗಣ್ಯರು, ಅತಿಥಿಗಳು ಹಾಗೂ ಸಾರ್ವಜನಿಕರು ಪೊಲೀಸ್ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು. ಮೃತರಾದ ನಿಂಗಪ್ಪ ಬೂಸನೂರ ಅವರಿಗೆ ಅವರ ಪತ್ನಿ ಸಂಗೀತಾ ಬೂಸನೂರ ಪುಷ್ಪ ನಮನ ಅರ್ಪಿಸಿದರು. ಕೆಎಸ್ಆರ್ಪಿ 10ನೇ ತುಕಡಿಯಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಮರ್ಪಿಸಲಾಯಿತು. ಕವಾಯತು ಕಮಾಂಡರ್ ವಿಶ್ವನಾಥ ನಾಯಕ, ಐ.ಎನ್. ಕಲಾದಗಿ, ಎಡ್ವಿನ್ ಡಿಸೋಜಾ ಅವರ ನೇತೃತ್ವದಲ್ಲಿ ಕೆಎಸ್ಆರ್ಪಿ 10ನೇ ತುಕಡಿ ಹಾಗೂ ಪೊಲೀಸ್ ವಾದ್ಯ ವೃಂದದವರು ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ಯ ಸದಸ್ಯ ಬಸವರಾಜ ಹೊರಟ್ಟಿ, ರೈಲ್ವೆ ಐಜಿಪಿ ಅಲೋಕ್ ಕುಮಾರ್, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಸ್. ಭರತ್, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಬಿ.ಗೋಪಾಲಕೃಷ್ಣ, ಉಪಮೇಯರ್ ಉಮಾಮುಕುಂದ, ಡಿಸಿಪಿಗಳಾದ ಸಾಹಿಲ್ ಬಾಗ್ಲಾ, ಗೋಪಾಲಕೃಷ್ಣ ಬ್ಯಾಕೋಡ, ನಿವೃತ್ತ ಡಿಐಜಿ ರವಿ ನಾಯಕ, ಹುಬ್ಬಳ್ಳಿ ವಿಮಾನ ನಿಲ್ದಾಣಗಳ ನಿರ್ದೇಶಕ ಪ್ರಮೋದ್ ಕುಮಾರ್ ಠಾಕ್ರೆ, ಎಸಿಪಿಗಳಾದ ಆರ್.ಕೆ. ಪಾಟೀಲ, ಪಿ.ಎಸ್. ದೊಡ್ಡಮನಿ, ಎಸ್.ಬಿ. ಯಾದವ್, ಪೊಲೀಸ್ ಇನ್ಸ್ಪೆಕ್ಟರ್ ಶ್ಯಾಮರಾವ್ ಸಜ್ಜನ, ಗೃಹ ರಕ್ಷಕ ದಳದ ಕೃಷ್ಣಾ ಬ್ಯಾಡಗಿ, ಆರ್.ಜಿ. ಅಂಗಡಿ, ವಿಧಿವಿಜ್ಞಾನದ ನಿರ್ದೇಶಕ ಡಾ. ಚಂದ್ರಶೇಖರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications