Breaking: ಸರಳ ವಾಸ್ತು ಚಂದ್ರಶೇಖರ ಗುರುಜಿ ಕೊಲೆ ಪ್ರಕರಣ: 800 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ
ಹುಬ್ಬಳ್ಳಿ, ಅಕ್ಟೋಬರ್ 6 : ಸರಳ ವಾಸ್ತು ಕಂಪನಿಯ ಸಂಸ್ಥಾಪಕ, ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಹತ್ಯೆಗೆ ಸಂಬಂಧಿಸಿ ತನಿಖಾಧಿಕಾರಿಗಳು ಹಂತಕರಿಬ್ಬರ ವಿರುದ್ಧ ಜೆಎಂಎಫ್ಸಿ ಕೋರ್ಟ್ನಲ್ಲಿ ಸುಮಾರು 800ಕ್ಕೂ ಹೆಚ್ಚು ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣದ ತನಿಖಾಧಿಕಾರಿ ಎಸಿಪಿ ವಿನೋದ್ ಮುಕ್ತೇದಾರ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. 800ಕ್ಕೂ ಹೆಚ್ಚು ಪುಟಗಳ ಆರೋಪಪಟ್ಟಿಯು ಕೊಲೆಗೆ ಕಾರಣವಾದ ಗುರೂಜಿ ಮತ್ತು ಆರೋಪಿಗಳಿಬ್ಬರ ನಡುವಿನ ಆಸ್ತಿ ವಿವಾದ ಸೇರಿದಂತೆ, ಇತರ ವಿಷಯಗಳಿಗೆ ಸಂಬಂಧಿಸಿದ ವಿವರಗಳನ್ನು ಒಳಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಂದ್ರಶೇಖರ್ ಗುರೂಜಿ ಹತ್ಯೆಗೆ ಸಂಬಂಧಿಸಿ ಪೊಲೀಸರು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕು ಧುಮ್ಮವಾಡ ಗ್ರಾಮದ ಮಹಾಂತೇಶ ಶಿರೂರ ಹಾಗೂ ಮಂಜುನಾಥ ಮರೇವಾಡ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ.

ಘಟನೆ ನಡೆದ 4 ತಾಸಿನೊಳಗೆ ಪೊಲೀಸರು ಹಂತಕರನ್ನು ರಾಮದುರ್ಗ ಬಳಿ ಸಿನಿಮೀಯ ರೀತಿಯಲ್ಲಿ ಅಡ್ಡಗಟ್ಟಿ ವಶಕ್ಕೆ ಪಡೆದಿದ್ದರು. ಪ್ರಕರಣಕ್ಕೆ ಸಂಬಂಧಿಸಿ ತನಿಖಾಧಿಕಾರಿಗಳು ಬಂಧಿತರ ವಿರುದ್ಧ ಆಸ್ತಿಗೆ ಸಂಬಂಧಪಟ್ಟ ದಾಖಲೆಗಳು ಸಹಿತ ಕೊಲೆಗೆ ಸಂಬಂಧಿಸಿದ ಇನ್ನಿತರ ವಿಷಯಗಳ ಕುರಿತು ಕಲೆ ಹಾಕಲಾದ ಮಾಹಿತಿ ಹಾಗೂ ಸಂಗ್ರಹಿಸಿದ ಸಾಕ್ಷಿಗಳು ಸೇರಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಪೊಲೀಸ್ ಹಿರಿಯ ಅಧಿಕಾರಿಗಳಿಂದ ಮಾಹಿತಿ ತಿಳಿದು ಬಂದಿದೆ.
ಹತ್ಯೆಗೆ ಕಾರಣ?
ಗೋಕುಲ ರಸ್ತೆ ಬಳಿ ಮಹಾಂತೇಶನ ಹೆಸರಲ್ಲಿ ಚಂದ್ರಶೇಖರ್ ಗುರೂಜಿ ಬೇನಾಮಿ ಆಸ್ತಿ ಮಾಡಿದ್ದರು ಎನ್ನಲಾಗಿದ್ದು, ಅದನ್ನು 5 ಕೋಟಿಗೆ ಮಹಾಂತೇಶ ಮಾರಾಟ ಮಾಡಿದ್ದ. ಆ ಹಣ ನೀಡುವಂತೆ ಗುರೂಜಿ ಒತ್ತಡ ಹಾಕುತ್ತಿದ್ದರು. ಈ ವಿಚಾರಕ್ಕೆ ಇಬ್ಬರ ನಡುವೆ ಅನೇಕ ಸಲ ಜಗಳ ನಡೆದಿತ್ತು. ಇದೇ ಕಾರಣಕ್ಕೆ ಮಹಾಂತೇಶ, ತನ್ನ ಸಹಚರ ಮಂಜುನಾಥ ಮರೇವಾಡನೊಂದಿಗೆ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರ ತನಿಖೆ ವೇಳೆ ತಿಳಿದುಬಂದಿತ್ತು.
ಅಲ್ಲದೆ ಸರಳ ವಾಸ್ತು ಸಂಸ್ಥೆಯಲ್ಲಿ ಕೆಲಸಕ್ಕಿದ್ದ ಮಂಜುನಾಥ್ ಮತ್ತು ಮಹಂತೇರ್ಶ್ ಸಂಸ್ಥೆ ಹೆಸರಲ್ಲಿ ಹಣ ಪಡೆದು ವಂಚಿಸಿದ್ದರು ಎಂಬ ಕಾರಣಕ್ಕೆ ಗುರೂಜಿ 2016ರಲ್ಲಿ ಇಬ್ಬರನ್ನೂ ಕೆಲಸದಿಂದ ತೆಗೆದಿದ್ದರು. ಆಸ್ತಿ ಹಾಗೂ ಹಣಕಾಸಿನ ವಿಷಯದಲ್ಲಿ ಇಬ್ಬರ ನಡುವೆ ಏರ್ಪಟ್ಟ ಕಲಹವೇ ಹತ್ಯೆಗೆ ಕಾರಣವಾಗಿದೆ ಎಂದು ವಿಚಾರಣೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದರು.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications