ಕ್ಯೂನಲ್ಲಿ ನಿಂತಿದ್ದ ವಕೀಲನನ್ನು ಪೊಲೀಸರು ಎಳೆದೊಯ್ದದ್ದು ಎಲ್ಲಿಗೆ?
ಹಳೇಹುಬ್ಬಳ್ಳಿಯ ಆನಂದನಗರದಲ್ಲಿರುವ ಎಸ್ ಬಿಐ ಬ್ಯಾಂಕ್ ನಲ್ಲಿ ಹಣ ತುಂಬಲು ಕ್ಯೂನಲ್ಲಿ ನಿಂತಿದ್ದ ವಕೀಲ ಎಸ್.ಕೆ.ಮುಲ್ಲಾ ಪೊಲೀಸರಿಂದ ಹಲ್ಲೆಗೊಳಗಾದ ವ್ಯಕ್ತಿ
ಹುಬ್ಬಳ್ಳಿ, ನವೆಂಬರ್ 18: ನೋಟು ಬದಲಾವಣೆಗೆ ನಿಂತಿದ್ದ ವಕೀಲರೊಬ್ಬರ ಮೇಲೆ ನಗರದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಎಎಸ್ ಐ ಹಾಗೂ ಪೇದೆಯೊಬ್ಬರು ಹಲ್ಲೆ ಮಾಡಿದ ಘಟನೆ ಗುರುವಾರ ಸಂಜೆ ನಡೆದಿದೆ.
ಹಳೇಹುಬ್ಬಳ್ಳಿಯ ಆನಂದನಗರದಲ್ಲಿರುವ ಎಸ್ ಬಿಐ ಬ್ಯಾಂಕ್ ನಲ್ಲಿ ಹಣ ತುಂಬಲು ಕ್ಯೂನಲ್ಲಿ ನಿಂತಿದ್ದ ವಕೀಲ ಎಸ್.ಕೆ.ಮುಲ್ಲಾ ಪೊಲೀಸರಿಂದ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ.

ಕ್ಯೂನಲ್ಲಿ ನಿಂತಿದ್ದ ವಕೀಲರನ್ನು ಎಎಸ್ ಐ ಗೊರವರ ಹಾಗೂ ಪೇದೆ ಉಮೇಶ ಉಪ್ಪಾರ ಎಂಬುವವರು ಅವರ ಶರ್ಟ್ ನ ಕಾಲರ್ ಹಿಡಿದು ಎಳೆದುಕೊಂಡು ಬಂದು ಅಸಭ್ಯ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ದೂರಲಾಗಿದೆ.[ಹುಬ್ಬಳ್ಳಿಯ ಪೊಲೀಸರಿಗೆ ಆತನೇ ಯಾಕೆ ಬೇಕು?]
ಅಷ್ಟೇ ಅಲ್ಲದೇ ಹಲ್ಲೆ ಮಾಡಿದ ಪೊಲೀಸರು ವಕೀಲ ಮುಲ್ಲಾ ಅವರಿಗೆ ಜೀವ ಬೆದರಿಕೆ ಕೂಡ ಹಾಕಿದ್ದಾರೆ ಎಂದು ದೂರಲಾಗಿದೆ. ಹಲ್ಲೆಯ ಕುರಿತು ಬ್ಯಾಂಕ್ ನಲ್ಲಿರುವ ಸಿಸಿ ಕ್ಯಾಮರಾದಲ್ಲಿ ಎಲ್ಲವೂ ದಾಖಲಾಗಿದ್ದು ಇದರ ಬಗ್ಗೆ ಪರಿಶೀಲಿಸಿ ಪೊಲೀಸ್ ಆಯುಕ್ತರು ತನಿಖೆ ನಡೆಸಬೇಕು ಇಲ್ಲವಾದರೆ ಪೊಲೀಸರ ದೌರ್ಜನ್ಯ ಖಂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಅಶೋಕ ಅಣವೇಕರ್ ಎಚ್ಚರಿಸಿದ್ದಾರೆ.
ಮತ್ತೆರಡು ಸರಗಳ್ಳತನ:
ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಳಾಪುರದ ಅಷ್ಟಗಿ ಲೇಔಟನ ನಿವಾಸಿ ಶಕುಂತಲಾ ಮುಕುಂದರಾವ್ ಬೊಂಗಾಳೆ ಇವರು ನ.17ರ ಬೆಳಗ್ಗೆ 7-30 ರ ಸುಮಾರಿಗೆ ಮಾಳಾಪುರ ಆದರ್ಶನಗರ ಕ್ರಾಸ್ ಹತ್ತಿರ ಹೋಗುತ್ತಿರುವಾಗ ಅಪರಿಚಿತ ವ್ಯಕ್ತಿಯು ಇವರ ಹಿಂದಿನಿಂದ ಬಂದು ಇವರ ಕೊರಳಲ್ಲಿದ್ದ 35 ಗ್ರಾಂ ತೂಕದ ಬಂಗಾರದ ಮಂಗಳ ಸೂತ್ರ ಮತ್ತು 15 ಗ್ರಾಂ ತೂಕದ ಬಂಗಾರದ ಚೈನನ್ನು ಕಿತ್ತುಕೊಂಡು ಬೈಕ್ ನಲ್ಲಿ ಪರಾರಿಯಾಗಿದ್ದಾನೆ.[ಜೂಜಾಟದಲ್ಲಿ ತೊಡಗಿದ್ದ 77 ಮಂದಿ ಅರೆಸ್ಟ್]
ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ನಿವಾಸಿ ಅನಿತಾ ಅನೀಲ ಬೆಟಗೇರಿನ. ನ.17 ರ ಬೆಳಗಿನ 7-15 ಗಂಟೆ ಸುಮಾರಿಗೆ ಗಾಂಧಿನಗರ ಶಾಂಭವಿ ಕಾಲೋನಿ 3 ಕ್ರಾಸ್ ಹತ್ತಿರ ಇರುವ ತಮ್ಮ ಮನೆಯಿಂದ ನಡೆದುಕೊಂಡು ಏಕ್ಸೀಸ್ ಬ್ಯಾಂಕ ಎಟಿಎಂ ಕಡೆಗೆ ಹೋರಟಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಇವರ ಎದುರಿನಿಂದ ಮೋಟಾರ್ ಸೈಕೈಲ್ ನಲ್ಲಿ ಬಂದು ಇವರ ಕೊರಳಿಗೆ ಕೈಹಾಕಿ ಕೊರಳಲ್ಲಿದ್ದ 30 ಗ್ರಾಂ ತೂಕದ ಬಂಗಾರದ ಮಂಗಳ ಸೂತ್ರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಎರಡೂ ಪ್ರಕರಣಗಳು ದಾಖಲಾಗಿವೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications