ಹುಬ್ಬಳ್ಳಿ: ಪಟಾಕಿ ಮಳಿಗೆಗಳ ಮಾಲೀಕರು ಕಡ್ಡಾಯವಾಗಿ ಪಾಲಿಸಬೇಕಾದ ಸುರಕ್ಷತಾ ಕ್ರಮಗಳಿವು
ಹುಬ್ಬಳ್ಳಿ, ಅಕ್ಟೋಬರ್, 13: ಬೆಂಗಳೂರಿನ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತದಿಂದ ಎಚ್ಚೆತ್ತಕೊಂಡಿರುವ ಅಧಿಕಾರಿಗಳು ನಗರದ ಪಟಾಕಿ ಮಳಿಗೆಗಳಿಗೆ ಭೇಟಿ ನೀಡಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದರು.
ತಹಶೀಲ್ದಾರ್ ಕಲಗೌಡ ಆರ್. ಪಾಟೀಲ ನೇತೃತ್ವದಲ್ಲಿ ಹುಬ್ಬಳ್ಳಿ ಉತ್ತರ ಮತ್ತು ದಕ್ಷಿಣ ವಿಭಾಗದ ಎಸಿಪಿಗಳಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಕಂದಾಯ ನಿರೀಕ್ಷಕರನ್ನೊಳಗೊಂಡ ತಂಡ 12 ಮಳಿಗೆಗಳು ಮತ್ತು 3 ಗೋದಾಮುಗಳಿಗೆ ಭೇಟಿ ನೀಡಿ ಪರಿಶೀಲಿಸಿತು. ಕೆಲವು ಮಾರಾಟಗಾರರು ಪಟಾಕಿ ಸಂಗ್ರಹ ಸ್ಥಳದಲ್ಲಿ ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸದಿರುವುದು, ಸ್ಫೋಟಕ ಸಂಗ್ರಹಣಾ ಸ್ಥಳ ಜನವಸತಿ ಪ್ರದೇಶದಲ್ಲಿರುವುದು ಕಂಡುಬಂದಿದೆ. ಕೂಡಲೇ ಸೂಚನಾ ಫಲಕಗಳನ್ನು ಅಳವಡಿಸಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

"ನಿಯಮ ಉಲ್ಲಂಘನೆ, ಸುರಕ್ಷತಾ ಕ್ರಮಗಳನ್ನು ಪಾಲನೆ ಮಾಡದ ಕೆಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದೆ. 100 ಕೆ.ಜಿ ಪಟಾಕಿ ದಾಸ್ತಾನು ಮಾಡಿದ್ದರೆ ಅದರಲ್ಲಿ 8 ಅಗ್ನಿನಿರೋಧಕ ಸಿಲಿಂಡರ್ ಇರಬೇಕು. ಸ್ಥಳದಲ್ಲಿ 400 ಲೀಟರ್ ನೀರಿನ ಸಂಗ್ರಹ ಇರಬೇಕು. ಕೆಲವು ಅಂಗಡಿಗಳು ಇದನ್ನು ಪಾಲನೆ ಮಾಡದಿರುವುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ" ಎಂದು ತಹಶೀಲ್ದಾರ್ ಕಲಗೌಡ ಆರ್.ಪಾಟೀಲ ಹೇಳಿದರು.
24 ಗಂಟೆಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ. ಕೆಲವರು ಈಗಾಗಲೇ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡಿದ್ದಾರೆ. ಪರಿಶೀಲನೆ ವೇಳೆ ಕಂಡುಬಂದ ಲೋಪಗಳ ಕುರಿತು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್ಗೆ ವರದಿ ಸಲ್ಲಿಸಲಾಗುವುದು. ಮುಂಬರುವ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಅಗ್ನಿ ಅನಾಹುತಗಳನ್ನು ತಪ್ಪಿಸಲು ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತು ಮಳಿಗೆಗಳ ಮಾಲೀಕರಿಗೆ ಕೆಲವು ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದರು.
ಅಗ್ನಿ ಶಮನ ವ್ಯವಸ್ಥೆಗೆ ಕೈಗೊಳ್ಳಬೇಕಾದ ಕ್ರಮಗಳು
1. ಪ್ರತಿ ಮಳಿಗೆಯಲ್ಲಿ 9 ಲೀಟರ್ ಸಾಮರ್ಥ್ಯದ ವಾಟರ್ ಪ್ರೆಜರ್ ಮಾದರಿ ಅಗ್ನಿನಂದಕ ಇರಬೇಕು.
2. ಎರಡು ಬಕೆಟ್ಗಳಲ್ಲಿ ನೀರು ಇಟ್ಟಿರಬೇಕು
3. ಮಳಿಗೆಗಳಲ್ಲಿ ಅಡುಗೆ, ಧೂಮಪಾನಕ್ಕೆ ಅವಕಾಶ ಕೊಡಬಾರದು.
4. ಹಗಲು ವೇಳೆ ಮಾತ್ರ ಪಟಾಕಿ ಮಾರಾಟ ಮಾಡಬೇಕು.
ರಾತ್ರಿ ವೇಳೆ ಮಳಿಗೆಯಲ್ಲಿ ಯಾರೂ ಮಲಗಬಾರದು ಎಂದು ಸೂಚಿಸಲಾಗಿದೆ. ಇನ್ನು ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಅವರು ಮಾಹಿತಿ ನೀಡಿದ್ದು, ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಪರವಾನಗಿ ಪಡೆದ 17 ಪಟಾಕಿ ಸಂಗ್ರಹ ಗೋದಾಮುಗಳಿವೆ. ಈ ಬಗ್ಗೆ ಅಧಿಕಾರಿಗಳು ಜಂಟಿ ಪರಿಶೀಲನೆ ಮಾಡಿದ್ದಾರೆ. ಜನವಸತಿ ಪ್ರದೇಶದಲ್ಲಿ ಗೋದಾಮುಗಳಿದ್ದರೆ ಅವುಗಳ ಸ್ಥಳಾಂತರಕ್ಕೆ ನೋಟಿಸ್ ನೀಡಲಾಗುವುದು ಎಂದರು.
ಮಳಿಗೆ ನಿರ್ಮಾಣ ಹೇಗಿರಬೇಕು?
1. ಗೋದಾಮುಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು.
2. ನಿರ್ಮಾಣಕ್ಕೆ ಬಳಸುವ ವಸ್ತುಗಳು ಸುಲಭವಾಗಿ ಬೆಂಕಿ ನಂದಿಸುವಂತಿರಬೇಕು.
3. ಪ್ರತಿ ಮಳಿಗೆಗೆ ಹಿಂದಿನಿಂದ ಮತ್ತು ಮುಂದಿನಿಂದ ಪ್ರವೇಶಕ್ಕೆ ವ್ಯವಸ್ಥೆ ಇರಬೇಕು.
4. ಮಳಿಗೆಗಳ ಗಾತ್ರ 10X10ಗೆ ಸೀಮಿತಗೊಳಿಸಬೇಕು, ಹೆಚ್ಚಿನ ದಾಸ್ತಾನು ಮಾಡಬಾರದು.
5. ಮಳಿಗೆಯಿಂದ ಮಳಿಗೆಗೆ 10 ಮೀಟರ್ ಅಂತರ ಕಾಯ್ದುಕೊಳ್ಳಬೇಕು.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications