ಸಿದ್ದರಾಮಯ್ಯಗೆ ಇತಿಹಾಸ ಓದಲು ಹೇಳಿದ ಕೇಂದ್ರ ಸಚಿವ
ಹುಬ್ಬಳ್ಳಿ, ಅಕ್ಟೋಬರ್ 19: ವೀರ ಸಾವರ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗುಡುಗಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, "ಸಿದ್ದರಾಮಯ್ಯ ಅವರಿಗೆ ಗಟ್ಸ್ ಇದ್ದರೆ ಅಂಬೇಡ್ಕರ್ ಗೆ ಮೊದಲೇ ಭಾರತರತ್ನ ಕೊಡಿ ಅಂತ ಕೇಳಬೇಕಿತ್ತು. ಅಂಬೇಡ್ಕರ್ ಅವರಿಗೆ ಮೊದಲು ಭಾರತರತ್ನ ನೀಡದೇ ರಾಜೀವ್ ಗಾಂಧಿಯವರಿಗೆ ಕೊಡಲಾಯಿತು. ಅವರ ತಾತ, ತಾಯಿ ಪ್ರಧಾನಿಯಾಗಿದ್ದಕ್ಕೆ ಅವರಿಗೆ ಬಳುವಳಿಯಾಗಿ ಕೊಡಲಾಯಿತು. ಸಂವಿಧಾನ ಬರೆದಿರುವ ಅಂಬೇಡ್ಕರ್ ಅವರಿಗೆ ಕೊಡಲಿಲ್ಲ. ದೇಶ ಕಂಡ ಅಪ್ರತಿಮ ವೀರಸಾವರ್ಕರ್ ಬಗ್ಗೆ ಅಪಮಾನ ಮಾಡೋದು ಸರಿಯಲ್ಲ. ಸಿದ್ಧರಾಮಯ್ಯ ಅವರ ಈ ನಡೆಯನ್ನು ಖಂಡಿಸುತ್ತೇನೆ. "ಸಿದ್ಧರಾಮಯ್ಯ ಅವರು ಮೊದಲು ಇತಿಹಾಸವನ್ನು ಸರಿಯಾಗಿ ಓದಿಕೊಂಡು ಮಾತನಾಡಲಿ" ಎಂದಿದ್ದಾರೆ.

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, "ರಾಜ್ಯದಲ್ಲಿ ಮಧ್ಯಂತರ ಚುನಾವಣೆಯ ಪ್ರಶ್ನೆಯೇ ಇಲ್ಲ. ಪೂರ್ಣಾವಧಿ ಬಿಜೆಪಿ ಸರ್ಕಾರ ಇರಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಹದಾಯಿ ಹೋರಾಟಗಾರರ ಪ್ರತಿಭಟನೆ ಕುರಿತು ಉತ್ತರಿಸಿದ ಅವರು, "ಅವರ ಪ್ರತಿಭಟನೆ ನನ್ನ ಗಮನಕ್ಕೆ ಬಂದಿರಲಿಲ್ಲ. ಮಹದಾಯಿ ಇತ್ಯರ್ಥಕ್ಕೆ ನಮ್ಮ ಕಡೆಯಿಂದ ನಾವು ಪ್ರಯತ್ನ ಮಾಡುತ್ತಿದ್ದೇವೆ. ಆದಷ್ಟು ಶೀಘ್ರ ಈ ವಿಚಾರ ಇತ್ಯರ್ಥಗೊಳ್ಳಲಿದೆ" ಎಂದು ತಿಳಿಸಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications