Prahlad Joshi: ಹೊಸ ಖಾತೆಗಳ ಅಧಿಕಾರ ಸ್ವೀಕರಿಸಿದ ಕೇಂದ್ರ ಸಚಿವ, ಇಂದೇ ಸಭೆ
ಹುಬ್ಬಳ್ಳಿ, ಜೂನ್ 11: ಧಾರವಾಡ ಲೋಕಸಭಾ ಕ್ಷೇತ್ರದಿಂದ ಸತತವಾಗಿ ಐದನೇ ಭಾರಿಗೆ ಗೆದ್ದು ದಾಖಲೆ ಬರೆದಿರುವ ಪ್ರಹ್ಲಾದ್ ಜೋಶಿಯವರಿಗೆ ಮತ್ತೊಮ್ಮ ಕೇಂದ್ರ ಸಚಿವ ಸ್ಥಾನ ಲಭಿಸಿದೆ. ಅವರು 'ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಹಾಗೂ ನವೀಕೃತ ಇಂಧನ' ಖಾತೆ ಹೊಣೆ ಹೊತ್ತಿರುವ ಅವರು ಇಂದು ಮಂಗಳವಾರ ಜವಾಬ್ದಾರಿ ವಹಿಸಿಕೊಂಡರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA ಸರ್ಕಾರದಲ್ಲಿ ಎರಡನೇ ಬಾರಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಈ ವೇಳೆ ಅವರ ಕುಟುಂಬಸ್ಥರು, ಕೆಲವು ರಾಜಕಾರಣಗಳಿಗೆ ಅವರಿಗೆ ಶುಭ ಹಾರೈಸಿದ್ದಾರೆ.

ಮೊದಲು ಶ್ರೀಪಾದ ನಾಯಕ್ ಅವರಿಂದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆಯ ಅಧಿಕಾರ ಪ್ರಹ್ಲಾದ್ ಜೋಸಿಯವರಿಗೆ ಹಸ್ತಾಂತರವಾಯಿತು.
ಇಂಧನದಲ್ಲಿ ಸ್ವಾವಲಂಬನೆ
ಅಧಿಕಾರ ವಹಿಸಿಕೊಂಡು ಪ್ರತಿಕ್ರಿಯಿಸಿದ ನೂತನ ನವೀಕೃತ ಇಂಧನ ಖಾತೆ ಸಚಿವ ಪ್ರಹ್ಲಾದ್ ಜೋಸಿಯವರು, 2047ರ ವೇಳೆಗೆ ಭಾರತ ಇಂಧನ ಸ್ವಾವಲಂಬನೆ ಸಾಧಿಸುವುದೇ ನಮ್ಮ ಸಂಕಲ್ಪವಾಗಿದೆ ಎಂದು ತಿಳಿಸಿದರು.
ಹೊಸ ಮತ್ತು ನವೀಕರಿಸಬಹುದಾದ ಇಂಧನದಲ್ಲಿ ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ರೂಪಿಸುವ ದೃಷ್ಟಿಯೊಂದಿಗೆ ಹೊಸ ಹೊಸ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಹಾಕಿಕೊಂಡು ಮುಂದುವರಿಯುತ್ತೇವೆ ಎಂದು ಹೇಳಿದರು.

ಕೇಂದ್ರದ ನೂತನ ಸಚಿವ ಪಿಯೂಷ್ ಗೋಯಲ್ ಅವರಿಂದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಅಧಿಕಾರ ಜೋಶಿಯವರು ವಹಿಸಿಕೊಂಡರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತದ ಜನರಿಗೆ ಆಹಾರ ಭದ್ರತೆ ಖಾತರಿಪಡಿಸಲು ಬದ್ಧರಾಗಿದ್ದೇವೆ ಮತ್ತು ದೇಶದಲ್ಲಿ ನೈಸರ್ಗಿಕ ಕೃಷಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಮತ್ತಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಿದ್ದೇವೆ ಎಂದು ತಿಳಿಸಿದರು.
ಕಚೇರಿ ಪೂಜೆಯಲ್ಲಿ ಕುಟುಂಬಸ್ಥರು ಭಾಗಿ
ಕೇಂದ್ರ ಸಚಿವರಾಗಿ ಎರಡನೇ ಇನ್ನಿಂಗ್ಸ್ ನಲ್ಲಿ ಹೊಸ ಖಾತೆಗಳ ಜವಾಬ್ದಾರಿ ಹೊತ್ತಿರುವ ಸಚಿವ ಪ್ರಹ್ಲಾದ್ ಜೋಶಿ ಅವರು ಇಂದು ಕಚೇರಿಯಲ್ಲಿ ತಮ್ಮ ಕುಟುಂಬ ಮತ್ತು ಉನ್ನತ ಅಧಿಕಾರಿಗಳ ಸಮ್ಮುಖದಲ್ಲಿ ಲಕ್ಷ್ಮಿ ಪೂಜೆ ನೆರವೇರಿಸುವ ಮೂಲಕ ಕಾರ್ಯಾರಂಭ ಮಾಡಿದರು.
ಈ ಸುದಿನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಪತ್ನಿ ಜ್ಯೋತಿ ಜೋಶಿ ಹಾಗೂ ಮಕ್ಕಳು ಅವರೆಲ್ಲ ಕೂಡಿಕೊಂಡು ಲಕ್ಷ್ಮಿ ಪೂಜೆ ಸಲ್ಲಿಸಿ ಸಚಿವರಿಗೆ ಶುಭ ಹಾರೈಸಿದರು.
ಮೊದಲ ದಿನವೇ ಉನ್ನತ ಅಧಿಕಾರಿಗಳ ಸಭೆ
ನೂತನ ಖಾತೆಗಳ ಅಧಿಕಾರ ವಹಿಸಿಕೊಂಡ ಬಳಿಕ ಸಚಿವ ಪ್ರಹ್ಲಾದ್ ಜೋಶಿಯವರು ಆಯಾ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಇಂದೇ ಮೊಲದ ಔಪಚಾರಿಕ ಸಭೆ ನಡೆಸಿದರು. ಒಂದಷ್ಟು ಮಾಹಿತಿ ಪಡೆದುಕೊಂಡರು. ಇದೇ ವೇಳೆ ಅಧಿಕಾರಿ ವರ್ಗ ಸಚಿವರನ್ನು ಅಭಿನಂದಿಸಿ ಖಾತೆಯ ನಿರ್ವಹಣೆಗೆ ಸ್ವಾಗತ ಕೋರಿದರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications