ಮುಸ್ಲಿಮರಿಗೆ OBC ಮೀಸಲಾತಿ ನೀಡುತ್ತಿರುವುದಕ್ಕೆ ದಾಖಲೆ ಇದೆ: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ, ಏಪ್ರಿಲ್ 26: ರಾಜ್ಯದಲ್ಲಿ ಒಬಿಸಿ ಎಸ್ಸಿ, ಎಸ್ಟಿ ಮೀಸಲಾತಿಯನ್ನು ಅದನ್ನು ಮುಸ್ಲಿಮರಿಗೆ ಕೊಡುತ್ತಿರುವುದು ಸತ್ಯ. ನಮ್ಮ ಬಳಿ ದಾಖಲೆ ಇದೆ ಎಂದು ಧಾರವಾಡ ಬಿಜೆಪಿ ಅಭ್ಯರ್ಥಿ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಹುಬ್ಬಳ್ಳಿ ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿ ಅವರು, ಮುಖ್ಯಮಂತ್ರಿ ಅಧಿಕಾರಕ್ಕೆ ಬರುತ್ತಲೇ ನ್ಯಾಷನಲ್ ಒಬಿಸಿ ಕಮಿಷನ್ ಗೆ ಪತ್ರ ಬರೆದಿದ್ದಾರೆ. ಒಬಿಸಿ ಕಮಿಷರ್ ಸಿಎಂಗೆ ನೋಟಿಸ್ ಸಹ ಕಳಿಸಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.

ಈಗ ಚುನಾವಣೆ ಕಾರಣದಿಂದ, ದಲಿತ ಒಬಿಸಿ ಮೀಸಲಾತಿ ಕಬಳಿಸುತ್ತಿಲ್ಲ. ಮುಸ್ಲಿಂರಿಗೆ ನೀಡುತ್ತಿಲ್ಲ ಎಂದು ಹಸಿ ಸುಳ್ಳು ಹೇಳುತ್ತಿದ್ದಾರೆ ಎಂದು ಜೋಶಿ ಆರೋಪಿಸಿದರು.
ಸಿಎಂ ಸುಳ್ಳಿನ ಸರದಾರ: ಜೋಶಿ
ಸಿಎಂ ಸಿದ್ದರಾಮಯ್ಯ ಸುಳ್ಳಿನ ಸರದಾರರು. ಹಿಂದುಳಿದ ವರ್ಗಗಳ (ಒಬಿಸಿ) ರಾಷ್ಟ್ರೀಯ ಆಯೋಗಕ್ಕೆ ಬರೆದ ಪತ್ರದಲ್ಲಿ ಸಿಎಂ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಸಿಎಂ ಹಾಜರಾಗುವಂತೆ ಒಬಿಸಿ ಕಮಿಷನರ್ ನೀಡಿದ ನೋಟೀಸ್ ನನ್ನ ಬಳಿ ಇದೆ ಎಂದು ಜೋಶಿ ಹೇಳಿದರು.
ಒಬಿಸಿ ಕಮಿಷನ್ ಗೆ ಮುಖ್ಯಮಂತ್ರಿ ಪತ್ರ ಬರೆದಿಲ್ಲ ಎಂದಾದರೆ ಹಂಸರಾಜ್ ಅವರು ಈ ನೋಟೀಸ್ ಗೆ ಉತ್ತರ ಕೊಡಲಿ ಎಂದು ಸವಾಲು ಹಾಕಿದರು. ಅತ್ಯಂತ ಅಪಾಯಕಾರಿ: ಎಸ್ಸಿ, ಎಸ್ಟಿ ಮೀಸಲಾತಿಯನ್ನು ಕಬಳಿಸಿ ತಮ್ಮ ವೋಟ್ ಬ್ಯಾಂಕ್ ಮುಸ್ಲಿಮರಿಗೆ ಕೊಡುತ್ತಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆ ಎಂದು ಕಳವಳ ವ್ಯಕ್ತಪಡಿಸಿದರು.

ಸುಪ್ರೀಂ ಕೋರ್ಟ್ ಸಹ ಹೇಳಿದೆ
ಧರ್ಮಾಧಾರಿತವಾಗಿ ಮೀಸಲಾತಿ ಕೊಡಲು ಸಂವಿಧಾನದಲ್ಲಿ ಅವಕಾಶ ಇಲ್ಲ. ಸುಪ್ರೀಂ ಕೋರ್ಟ್ ಸಹ ಇದನ್ನೇ ಹೇಳಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ದಾರಿ ತಪ್ಪಿಸುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನವೇ ಮುಸ್ಲಿಂರಿಗೆ ಮೀಸಲಾತಿ ವಾಪಸ್ ಕೊಡುವುದಾಗಿ ಹೇಳಿದ್ದು, ಈಗದನ್ನು ಸಾಧಿಸುತ್ತಿದ್ದಾರೆ ಎಂದರು.
ಒಕ್ಕಲಿಗರು-ಲಿಂಗಾಯತರ ಮೀಸಲಿಗೆ 'ಕೈ' ವಿರೋಧ
ಬಿಜೆಪಿ ಸರ್ಕಾರ ಇದ್ದಾಗ ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2 ಪರ್ಸೆಂಟ್ ಮೀಸಲಾತಿ ಕಲ್ಪಿಸಲು ಇದೇ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದರು ಎಂದು ಇದೇ ವೇಳೆ ಅವರು ಪ್ರಸ್ತಾಪಿಸಿದರು.
ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಜನರ ಕೈಗೆ ಚೊಂಬು ಕೊಡೋದನ್ನು ಕಾಂಗ್ರೆಸ್ ನಿಲ್ಲಿಸಲಿಲ್ಲ. ಪರಿಣಾಮ ಜನರೂ ಕಾಂಗ್ರೆಸ್ಸಿಗರ ಕೈಗೆ ಚೊಂಬು ಕೊಡುತ್ತಾ ಬಂದರು. ಚೊಂಬು ಹಿಡಿದು ಅಡ್ಡಾಡೋದು ಅಭ್ಯಾಸವಾಗಿದೆ. ಪ್ರಧಾನಿಯವರು ದೇಶದಲ್ಲಿ 14 ಕೋಟಿಗೂ ಹೆಚ್ಚು ಶೌಚಗೃಹ ನಿರ್ಮಿಸಿ ಚೊಂಬು ಹಿಡಿಯುವುದನ್ನು ನಿಲ್ಲಿಸಿದ್ದಾರೆ ಎಂದು ಅವರು ತಿರುಗೇಟು ಕೊಟ್ಟರು.
ಅಂಬೇಡ್ಕರ್ ಸೋಲಿಸಿದವರಿಗೆ ಸತ್ಕಾರ
ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ಸೋಲಿಸಿದ್ದಲ್ಲದೆ, ಅವರ ವಿರುದ್ಧ ಗೆದ್ದವರಿಗೆ ಪದ್ಮವಿಭೂಷಣ ಕೊಟ್ಟು ಸತ್ಕರಿಸುವ ಮೂಲಕ ದಲಿತರ ಕೈಗೆ ಚೊಂಬು ಕೊಟ್ಟದ್ದು, ಇದೇ ಕಾಂಗ್ರೆಸ್ನವರು ಎಂದು ಜೋಶಿ ಹರಿಹಾಯ್ದರು.
ದೇಶದ 20-25 ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಈಗ ಎರಡೇ ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಅಂದರೆ ಜನರು ನಿಮ್ಮ ಕೈಗೆ ಚೊಂಬು ಕೊಟ್ಟು ಕಳುಹಿಸುತ್ತಿದ್ದಾರೆ. ಚತ್ತಿಸಗಢ, ರಾಜಸ್ಥಾನ, ಮಧ್ಯಪ್ರದೇಶ ಹೀಗೆ ಎಲ್ಲೆಡೆಯೂ ಹೀನಾಯವಾಗಿ ಸೋಲಿಸಿ ವಿರೋಧ ಪಕ್ಷದ ಸ್ಥಾನದಲ್ಲೂ ಕುಳಿತುಕೊಳ್ಳದಂತೆ ಜನ ನಿಮ್ಮ ಕೈಗೆ ಚೊಂಬು ಕೊಟ್ಟಿದ್ದಾರೆ ನೆನಪಿಟ್ಟುಕೊಳ್ಳಿ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications