'ಮಹದಾಯಿ' ಯೋಜನೆ ಆರಂಭಿಲಾಗುವುದು, ನಾಳೆಯೇ ಜಲಾನಯನಕ್ಕೆ ಭೇಟಿ: ಪ್ರಹ್ಲಾದ್ ಜೋಶಿ ಕೊಟ್ರು ಅಪ್ಡೇಟ್
ಹುಬ್ಬಳ್ಳಿ, ಜುಲೈ 02: ಉತ್ತರ ಕರ್ನಾಟಕದ ಜನರ ಜೀವನಾಡಿಯಾಗಿರುವ ಮಹಾದಾಯಿ ನದಿ ಯೋಜನೆ ಸ್ಥಗಿತಗೊಳಿಸುವ ನಿಟ್ಟಿನಲ್ಲಿ ಪ್ರವಾಹ ತಂಡ ಯೋಜನಾ ಸ್ಥಳಕ್ಕೆ ಭೇಟಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಯೋಜನೆ ಆರಂಭವಾಗುವ ಕುರಿತು ಸ್ವತಃ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರೇ ಅಪ್ಡೇಟ್ ನೀಡಿದ್ದಾರೆ.
ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಕಳಸಾ- ಬಂಡೂರಿ ತಿರುವು ಯೋಜನೆಗೆ ಯಾವುದೇ ಅಡ್ಡಿಪಡಿಸುವ ಕೆಲಸ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಗೋವಾ ಸರ್ಕಾರದ ಆಗ್ರಹದ ಮೇರೆಗೆ ಕೇಂದ್ರ ಸರ್ಕಾರ ರಚನೆ 'ಪ್ರವಾಹ' ಆಗಿಲ್ಲ. ಇದೊಂದು ಎಲ್ಲ ಜಲವಿವಾದಕ್ಕೆ ಸಂಬಂಧಿಸಿದ ಪ್ರವಾಹ ತಂಡ ಅಷ್ಟೇ ಎಂದರು.

ಯಾವುದೇ ಜಲವಿವಾದ ಇದ್ದರು ಪರಿಶೀಲನೆ ಮಾಡುತ್ತದೆ. ಇದೊಂದು Progressive River Authority For Water and Harmony ತಂಡ ಎಂದು ಅವರು ಹೇಳಿದರು.
ಜುಲೈ 7ಕ್ಕೆ ಮಹದಾಯಿ ಜಲಾನಯನಕ್ಕೆ ಭೇಟಿ
ಇದೇ ವಿಚಾರವಾಗಿ ನಾಳೆ ಜುಲೈ 7 ರಂದು ಮಹದಾಯಿ ಜಲಾನಯನಕ್ಕೆ ಭೇಟಿ ನೀಡಿ ವಾಸ್ತವ ಸ್ಥಿತಿ ಪರಿಶೀಲನೆ ನಡೆಸಲಾಗುತ್ತದೆ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ ಮುಂದಾಳತ್ವ ವಹಿಸಿಲ್ಲ. ಕಳಸಾ- ಬಂಡೂರಿ ಯೋಜನೆಗೆ ಒಳಪಟ್ಟ 12 ಸ್ಥಳ ಪರಿಶೀಲನೆ ಮಾಡಲಿದ್ದಾರೆ. ಸಂಜೆ 6ಕ್ಕೆ ಬೆಳಗಾವಿಯಲ್ಲಿ ವಾಸ್ತವ್ಯ ಮಾಡುವರು'. ಮುಖ್ಯವಾಗಿ ಇದರಲ್ಲಲಿ ಯಾವುದೇ ಸರ್ಕಾರದ ಪಾತ್ರ ಇರುವುದಿಲ್ಲ ಎಂದು ತಿಳಿಸಿದರು.

ಮಹದಾಯಿ ನದಿ ನೀರಿನ ಹಂಚಿಕೆ ಮಾಡಿ ನ್ಯಾಯಮೂರ್ತಿ ಪಂಚಾಲ ನ್ಯಾಯ ಮಂಡಳಿಯು 2018ರ ಆಗಸ್ಟ್ 14ರಂದು ತೀರ್ಪು ನೀಡಿತ್ತು. ಸುಪ್ರೀಂ ಕೋರ್ಟ್ 2020ರ ಫೆಬ್ರುವರಿ 20ರಂದು ತೀರ್ಪು ನೀಡಿತ್ತು. ಇದರ ಅನ್ವಯ ಹಂಚಿಕೆಯ ನೀರನ್ನು ಬಳಸಲು ಪರವಾನಗೆ ಸಿಕ್ಕಿದೆ.
ಕಳಸಾ ಪ್ರದೇಶದಲ್ಲಿ ಅರಣ್ಯ ಪ್ರದೇಶ ಕುರಿತು ಸಹ ಪರಿಶೀಲನೆ ಆಗಲಿದೆ ಎಂದರು.
ಮುಡಾ ಹಗರಣ ಸಿಬಿಐಗೆ ವಹಿಸಲು ಜೋಶಿ ಆಗ್ರಹ
ಮುಡಾ ಹಗರಣದಲ್ಲಿ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ಆಗಿದೆ. ಇದು ಸಂಪೂರ್ಣವಾಗಿ ಸಿಎಂ ಸಿದ್ದರಾಮಯ್ಯನವರ ಗಮನಕ್ಕೆ ಇದ್ದೆ ಆಗಿರುವ ಹಗರಣ ಎಂದು ಆರೋಪಿಸಿರುವ ಅವರು, ಜಾಗ ವರ್ಗಾವಣೆ ರ್ಧಾರ ಆಗಿದ್ದು 2017ರಲ್ಲಿ. ಆದರೆ 2014 ರಿಂದ 2018 ರಲ್ಲಿ ಇದರ ಪ್ರಮುಖ ಬೆಳವಣಿಗೆ ನಡೆದಿದೆ. ಏನು ಮಾಡಿಲ್ಲ ಅಂದರೆ ತರಾತುರಿಯಲ್ಲಿ ಜಿಲ್ಲಾಧಿಕಾರಿಯನ್ನು ಏಕೆ ವರ್ಗಾವಣೆ ಮಾಡಲಾಗಿದೆ ಎಂದ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.
ಸಿಎಂ ಸಿದ್ದರಾಮಯ್ಯ ಮತ್ತು ಅವರ ಮಗನ ಅನುಮತಿ ಇಲ್ಲದೆ ಇದು ನಡೆಯಲು ಸಾಧ್ಯವಿಲ್ಲ. ಸ್ವಂತಕ್ಕೆ ಲಾಭ ಮಾಡಿಕೊಳ್ಳಲು ನಡೆದ ದೊಡ್ಡ ಪ್ರಮಾಣದಲ್ಲಿ ನಡೆದ ಭ್ರಷ್ಟಾಚಾರ ಹೀಗಾಗಿ ಪ್ರಕರಣದ ತನಿಖೆಗೆ ಸಿಬಿಐ ಗೆ ವಹಿಸಿಬೇಕು ಎಂದು ಅವರು ಒತ್ತಾಯಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications